ಮಂತ್ರಾಲಯದಲ್ಲಿ ಕಳೆಗಟ್ಟಿದ ಮಧ್ಯಾರಾಧನೆ ಸಂಭ್ರಮ: ಆರಾಧನಾ ಮಹೋತ್ಸವಕ್ಕೆ ಹರಿದು ಬರ್ತಿದೆ ಭಕ್ತಸಾಗರ

ಮಂತ್ರಾಲಯದಲ್ಲಿ ಕಳೆಗಟ್ಟಿದ ಮಧ್ಯಾರಾಧನೆ ಸಂಭ್ರಮ: ಆರಾಧನಾ ಮಹೋತ್ಸವಕ್ಕೆ ಹರಿದು ಬರ್ತಿದೆ ಭಕ್ತಸಾಗರ

Published : Sep 02, 2023, 11:46 AM IST

ಮಂತ್ರಾಲಯದಲ್ಲಿ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವದ ಮುಖ್ಯ ಘಟ್ಟವಾದ ಮಧ್ಯಾರಾಧನೆ ನಿನ್ನೆ ಸಂಭ್ರಮದಿಂದ ನೆರವೇರಿತು. ಇಂದು ಉತ್ತಾರಾಧನೆ ನಡೆಯುತ್ತಿದ್ದು, ದೇಶ-ವಿದೇಶಗಳಿಂದಲೂ ಭಕ್ತರು ಆಗಮಿಸಿ, ರಾಯರ ದರ್ಶನ ಪಡೆಯುತ್ತಿದ್ದಾರೆ. 

ಆಗಸ್ಟ್ 29ರಿಂದ ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ.ಶುಕ್ರವಾರ ಮಧ್ಯಾರಾಧನೆ ಸಂಭ್ರಮ ಜೋರಾಗಿತ್ತು. ಗುರು ರಾಘವೇಂದ್ರ ಸ್ವಾಮಿ ಸಶರೀರರಾಗಿ ಬೃಂದಾವನ ಪ್ರವೇಶಿಸಿದ ದಿನವನ್ನ ಮಧ್ಯಾರಾಧನೆಯಾಗಿ ಆಚರಿಸಲಾಯ್ತು.‌ ಬೆಳಗ್ಗೆಯಿಂದ ಶ್ರೀಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಮಧ್ಯಾರಾಧನೆಗೆ ತಿರುಪತಿ ತಿಮ್ಮಪ್ಪನಿಂದ ಬಂದ ಶೇಷ ವಸ್ತ್ರವನ್ನು ಶ್ರೀಮಠದ ಪೀಠಾಧಿಪತಿಗಳು ಅದ್ಧೂರಿ ಸ್ವಾಗತಿಸಿದ್ರು. ಬಳಿಕ ರಾಯರ ಬೃಂದಾವನಕ್ಕೆ ಮಹಾ ಪಂಚಾಮೃತ ಅಭಿಷೇಕ ನಡೆಯಿತು. ಹಾಲು,ಮೊಸರು,ತುಪ್ಪ,ಜೇನು ತುಪ್ಪ, ಹಣ್ಣು, ಗೋಡಂಬಿ, ಒಣದ್ರಾಕ್ಷಿ ಸೇರಿ ವಿವಿಧ ಪದಾರ್ಥಗಳಿಂದ ಶ್ರೀಗಳು ಬೃಂದಾವನದ ನಾಲ್ಕುದಿಕ್ಕಿಗೂ ಅಭಿಷೇಕ ಮಾಡಿ ಅಲಂಕಾರ ಮಾಡಿದ್ರು. ಬಳಿಕ ಚಿನ್ನದ ಕವಚದೊಂದಿಗೆ ಅಲಂಕಾರ ಪೂಜೆ ನಡೆಯಿತು. ಮಧ್ಯಾರಾಧನೆ ವಿಶೇಷವಾಗಿ ಮಠದ ಪ್ರಾಕಾರದಲ್ಲಿ ಗಜ ,ರಜತ , ಸ್ವರ್ಣ ರಥೋತ್ಸವಗಳು ನಡೆದವು. ರಾಜ್ಯಸಭಾ ಸದಸ್ಯ ಜಗ್ಗೇಶ್, ನಟ ಕೋಮಲ್ ಕೂಡ ಚಿನ್ನದ ರಥೋತ್ಸವದಲ್ಲಿ ಭಾಗವಹಿಸಿದರು. ರಾಯರ ಆರಾಧನೆ ಹಿನ್ನೆಲೆ ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀಮಠಕ್ಕೆ ಆಗಮಿಸುತ್ತಿದ್ದಾರೆ. ವಿವಿಧ ಸೇವೆಗಳ ಮೂಲಕ ಭಕ್ತಿ ಸಮರ್ಪಿಸುತ್ತಿದ್ದಾರೆ. ಇಂದು ಉತ್ತರಾಧನೆ ಹಾಗೂ ಶ್ರೀಮಠದ ಹೊರಭಾಗದಲ್ಲಿ ರಥೋತ್ಸವ ನಡೆಯಲಿದೆ. ಸಪ್ತರಾತ್ರೋತ್ಸವ ಹಿನ್ನೆಲೆ ಪ್ರತಿನಿತ್ಯ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಆರಾಧನಾ ಮಹೋತ್ಸವದ ಸಂಭ್ರಮ ಹೆಚ್ಚಿಸುತ್ತಿವೆ.

ಇದನ್ನೂ ವೀಕ್ಷಿಸಿ: ಮದುವೆ ಸಂದರ್ಭದಲ್ಲಿ ಆದರ್ಶ ಮೆರೆದಿದ್ದ ಪೊಲೀಸಪ್ಪ: ಬಳಿಕ ಶುರುವಾಯ್ತು ವರದಕ್ಷಿಣೆ ಕಾಟ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?