ಭೀಮಾತೀರದ ಹಂತಕ ಬಾಗಪ್ಪನ ಬೆನ್ನಲ್ಲೇ, ಶಿಷ್ಯ ಸುಶೀಲ್ ಕಾಳೆಯೂ ಬರ್ಬರ ಹತ್ಯೆ!

ಭೀಮಾತೀರದ ಹಂತಕ ಬಾಗಪ್ಪನ ಬೆನ್ನಲ್ಲೇ, ಶಿಷ್ಯ ಸುಶೀಲ್ ಕಾಳೆಯೂ ಬರ್ಬರ ಹತ್ಯೆ!

Published : Jul 15, 2025, 08:09 PM IST
ವಿಜಯಪುರದಲ್ಲಿ ರೌಡಿಶೀಟರ್ ಸುಶೀಲ್ ಕಾಳೆ ಹತ್ಯೆ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಬಾಗಪ್ಪ ಹರಿಜನ್ ಸಹಚರನಾಗಿದ್ದ ಸುಶೀಲ್ ಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವಿಜಯಪುರ (ಜು.15): ವಿಜಯಪುರದ ರೌಡಿಶೀಟರ್ ಸುಶೀಲ್ ಕಾಳೆ ಹತ್ಯೆ ಪ್ರಕರಣ ಹಲವು ಅನುಮಾನಗಳನ್ನ ಹುಟ್ಟುಹಾಕಿದೆ. ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ಸಹಚರನಾಗಿದ್ದ. ಕಳೆದ ಫೆಬ್ರವರಿ 12 ರಂದು ಬಾಗಪ್ಪ ಹತ್ಯೆ ನಡೆದಿತ್ತು. ಈ ಹತ್ಯೆ 5 ತಿಂಗಳ ಅಂತರದಲ್ಲಿಯೇ ಸುಶೀಲ್ ಹತ್ಯೆಯಾಗಿರೋದು ಹಲವು ಅನುಮಾನಗಳನ್ನ ಹುಟ್ಟುಹಾಕಿದೆ. ಇದೊಂದು ಟಾರ್ಗೆಟ್ ಮರ್ಡರ್? ಅಥವಾ ಹಣಕಾಸಿಗಾಗಿ ನಡೆದ ಮರ್ಡರ್ ಆಗಿದೆಯಾ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಬಾಗಪ್ಪನ ಬಳಿಕ ಸುಶೀಲ್ ಹತ್ಯೆಯಾಗಿರೋದು ಜನರಲ್ಲಿ ಆತಂಕ ಉಂಟು ಮಾಡಿದೆ..

ಭೀಕರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವ ವೇಳೆ ತಮ್ಮ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಅವರನ್ನು ವಶಕ್ಕೆ ಪಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಈ ಘಟನೆ ತಡರಾತ್ರಿ ನಡೆದಿದ್ದು, ನಗರದಲ್ಲಿ ಹುಬ್ಬೇರಿಸುವಂತಾಗಿದೆ. ಇತ್ತೀಚೆಗಷ್ಟೆ ನಡೆದ ಸುಶೀಲ್ ಕಾಳೆ ಹತ್ಯೆ ಪ್ರಕರಣ ಸಂಬಂಧ ತನಿಖೆ ಕೈಗೊಂಡಿದ್ದ ವಿಜಯಪುರ ಪೊಲೀಸರು, ತಡರಾತ್ರಿ ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸಿದ ವೇಳೆ ಗಾಂಧಿ ಚೌಕ ಠಾಣೆ ಸಿಪಿಐ ಪ್ರದೀಪ್ ತಳಕೇರಿ ಫೈರಿಂಗ್ ನಡೆಸಿದ್ದಾರೆ. ಈ ವೇಳೆ ಮೂರು ಸುತ್ತು ಗುಂಡು ಹಾರಿಸಲಾಯಿತೆಂಬ ಮಾಹಿತಿ ಲಭ್ಯವಾಗಿದೆ.

ಆರೋಪಿಗಳ ಪತ್ತೆ, ಫೈರಿಂಗ್ ವಿವರಣೆ:
ಸುಶೀಲ್ ಕಾಳೆ ಹತ್ಯೆ ಪ್ರಕರಣದಲ್ಲಿ ಶಂಕಿತ ಆರೋಪಿಗಳಾದ ಆಕಾಶ ಕಲ್ಲವ್ವಗೋಳ ಮತ್ತು ಸುದೀಪ್ ಅಲಿಯಾಸ್ ಸುಭಾಷ ಬಗಲಿ ಎಂಬವರನ್ನು ಪೊಲೀಸರು ಹಿಡಿಯಲು ಮುಂದಾದಾಗ, ಆರೋಪಿಗಳು ಎಸ್ಕೇಪ್ ಆಗಲು ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ. ತಕ್ಷಣ ಪ್ರತಿಕ್ರಿಯಿಸಿದ ಸಿಪಿಐ ತಳಕೇರಿ ಇಬ್ಬರ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಇಬ್ಬರಿಗೂ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ನಂತರ ಅವರನ್ನು ಅಧಿಕಾರಿಗಳ ನಿಯಂತ್ರಣದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಹಂತಕ ಬಾಗಪ್ಪನ ಹಳೆ ಶಿಷ್ಯ ಸುಶೀಲ್ ಹತ್ಯೆ ಹಿನ್ನೆಲೆ:
ಹಂತಕನಾಗಿ ಪ್ರಸಿದ್ಧಿ ಪಡೆದಿದ್ದ ಬಾಗಪ್ಪನ ಹಳೆ ಆಪ್ತ ಸುಶೀಲ್ ಕಾಳೆ ನಿನ್ನೆ ಹಾಡುಹಗಲೆ ಭೀಕರವಾಗಿ ಹತ್ಯೆಗೀಡಾಗಿದ್ದನು. ಈ ಹತ್ಯೆ ಆರೋಪಿಗಳ ಪೈಕಿ ಈ ಇಬ್ಬರು ಪ್ರಮುಖ ಶಂಕಿತರಾಗಿದ್ದರು. ಹತ್ಯೆ ವೇಳೆ ಸುಶೀಲ್‌ಗೆ ನೇರವಾಗಿ ಗುಂಡು ಹಾರಿಸಿ ಪರಾರಿಯಾದ ಆರೋಪಿಗಳ ಮೇಲೆ ಪೊಲೀಸರು ಶೋಧ ನಡೆಸಿ ತಡರಾತ್ರಿ ಬಂಧಿಸಲು ಮುಂದಾಗಿದ್ದರು. ಆರೋಪಿ ಆಕಾಶ ವಿರುದ್ಧ ಈಗಾಗಲೇ ಎಂಟು ಪ್ರಕರಣಗಳು ದಾಖಲಾಗಿದ್ದವು. ಬಹುಪಾಲು ಪ್ರಕರಣಗಳು ಕೊಲೆ, ದಾಳಿ, ದಂದೆ, ಹಾಗೂ ಆಸ್ತಿ ದಂದೆ ಸಂಬಂಧವಾಗಿದ್ದವು. ಈತನ ವಿರುದ್ಧ ಪೊಲೀಸರು ಹದಿರಿತನದಿಂದ ಕಾರ್ಯಾಚರಣೆ ನಡೆಸುತ್ತಿದ್ದರು. ಆತನ ಸಹಚರ ಸುಭಾಷ ಬಗಲಿ ಕೂಡಾ ಕಿಡಿಗೇಡಿಗಳ ಪಟ್ಟಿ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more