ಭೀಮಾತೀರದ ಹಂತಕ ಬಾಗಪ್ಪನ ಬೆನ್ನಲ್ಲೇ, ಶಿಷ್ಯ ಸುಶೀಲ್ ಕಾಳೆಯೂ ಬರ್ಬರ ಹತ್ಯೆ!

ಭೀಮಾತೀರದ ಹಂತಕ ಬಾಗಪ್ಪನ ಬೆನ್ನಲ್ಲೇ, ಶಿಷ್ಯ ಸುಶೀಲ್ ಕಾಳೆಯೂ ಬರ್ಬರ ಹತ್ಯೆ!

Published : Jul 15, 2025, 08:09 PM IST
ವಿಜಯಪುರದಲ್ಲಿ ರೌಡಿಶೀಟರ್ ಸುಶೀಲ್ ಕಾಳೆ ಹತ್ಯೆ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಬಾಗಪ್ಪ ಹರಿಜನ್ ಸಹಚರನಾಗಿದ್ದ ಸುಶೀಲ್ ಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವಿಜಯಪುರ (ಜು.15): ವಿಜಯಪುರದ ರೌಡಿಶೀಟರ್ ಸುಶೀಲ್ ಕಾಳೆ ಹತ್ಯೆ ಪ್ರಕರಣ ಹಲವು ಅನುಮಾನಗಳನ್ನ ಹುಟ್ಟುಹಾಕಿದೆ. ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ಸಹಚರನಾಗಿದ್ದ. ಕಳೆದ ಫೆಬ್ರವರಿ 12 ರಂದು ಬಾಗಪ್ಪ ಹತ್ಯೆ ನಡೆದಿತ್ತು. ಈ ಹತ್ಯೆ 5 ತಿಂಗಳ ಅಂತರದಲ್ಲಿಯೇ ಸುಶೀಲ್ ಹತ್ಯೆಯಾಗಿರೋದು ಹಲವು ಅನುಮಾನಗಳನ್ನ ಹುಟ್ಟುಹಾಕಿದೆ. ಇದೊಂದು ಟಾರ್ಗೆಟ್ ಮರ್ಡರ್? ಅಥವಾ ಹಣಕಾಸಿಗಾಗಿ ನಡೆದ ಮರ್ಡರ್ ಆಗಿದೆಯಾ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಬಾಗಪ್ಪನ ಬಳಿಕ ಸುಶೀಲ್ ಹತ್ಯೆಯಾಗಿರೋದು ಜನರಲ್ಲಿ ಆತಂಕ ಉಂಟು ಮಾಡಿದೆ..

ಭೀಕರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವ ವೇಳೆ ತಮ್ಮ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಅವರನ್ನು ವಶಕ್ಕೆ ಪಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಈ ಘಟನೆ ತಡರಾತ್ರಿ ನಡೆದಿದ್ದು, ನಗರದಲ್ಲಿ ಹುಬ್ಬೇರಿಸುವಂತಾಗಿದೆ. ಇತ್ತೀಚೆಗಷ್ಟೆ ನಡೆದ ಸುಶೀಲ್ ಕಾಳೆ ಹತ್ಯೆ ಪ್ರಕರಣ ಸಂಬಂಧ ತನಿಖೆ ಕೈಗೊಂಡಿದ್ದ ವಿಜಯಪುರ ಪೊಲೀಸರು, ತಡರಾತ್ರಿ ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸಿದ ವೇಳೆ ಗಾಂಧಿ ಚೌಕ ಠಾಣೆ ಸಿಪಿಐ ಪ್ರದೀಪ್ ತಳಕೇರಿ ಫೈರಿಂಗ್ ನಡೆಸಿದ್ದಾರೆ. ಈ ವೇಳೆ ಮೂರು ಸುತ್ತು ಗುಂಡು ಹಾರಿಸಲಾಯಿತೆಂಬ ಮಾಹಿತಿ ಲಭ್ಯವಾಗಿದೆ.

ಆರೋಪಿಗಳ ಪತ್ತೆ, ಫೈರಿಂಗ್ ವಿವರಣೆ:
ಸುಶೀಲ್ ಕಾಳೆ ಹತ್ಯೆ ಪ್ರಕರಣದಲ್ಲಿ ಶಂಕಿತ ಆರೋಪಿಗಳಾದ ಆಕಾಶ ಕಲ್ಲವ್ವಗೋಳ ಮತ್ತು ಸುದೀಪ್ ಅಲಿಯಾಸ್ ಸುಭಾಷ ಬಗಲಿ ಎಂಬವರನ್ನು ಪೊಲೀಸರು ಹಿಡಿಯಲು ಮುಂದಾದಾಗ, ಆರೋಪಿಗಳು ಎಸ್ಕೇಪ್ ಆಗಲು ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ. ತಕ್ಷಣ ಪ್ರತಿಕ್ರಿಯಿಸಿದ ಸಿಪಿಐ ತಳಕೇರಿ ಇಬ್ಬರ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಇಬ್ಬರಿಗೂ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ನಂತರ ಅವರನ್ನು ಅಧಿಕಾರಿಗಳ ನಿಯಂತ್ರಣದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಹಂತಕ ಬಾಗಪ್ಪನ ಹಳೆ ಶಿಷ್ಯ ಸುಶೀಲ್ ಹತ್ಯೆ ಹಿನ್ನೆಲೆ:
ಹಂತಕನಾಗಿ ಪ್ರಸಿದ್ಧಿ ಪಡೆದಿದ್ದ ಬಾಗಪ್ಪನ ಹಳೆ ಆಪ್ತ ಸುಶೀಲ್ ಕಾಳೆ ನಿನ್ನೆ ಹಾಡುಹಗಲೆ ಭೀಕರವಾಗಿ ಹತ್ಯೆಗೀಡಾಗಿದ್ದನು. ಈ ಹತ್ಯೆ ಆರೋಪಿಗಳ ಪೈಕಿ ಈ ಇಬ್ಬರು ಪ್ರಮುಖ ಶಂಕಿತರಾಗಿದ್ದರು. ಹತ್ಯೆ ವೇಳೆ ಸುಶೀಲ್‌ಗೆ ನೇರವಾಗಿ ಗುಂಡು ಹಾರಿಸಿ ಪರಾರಿಯಾದ ಆರೋಪಿಗಳ ಮೇಲೆ ಪೊಲೀಸರು ಶೋಧ ನಡೆಸಿ ತಡರಾತ್ರಿ ಬಂಧಿಸಲು ಮುಂದಾಗಿದ್ದರು. ಆರೋಪಿ ಆಕಾಶ ವಿರುದ್ಧ ಈಗಾಗಲೇ ಎಂಟು ಪ್ರಕರಣಗಳು ದಾಖಲಾಗಿದ್ದವು. ಬಹುಪಾಲು ಪ್ರಕರಣಗಳು ಕೊಲೆ, ದಾಳಿ, ದಂದೆ, ಹಾಗೂ ಆಸ್ತಿ ದಂದೆ ಸಂಬಂಧವಾಗಿದ್ದವು. ಈತನ ವಿರುದ್ಧ ಪೊಲೀಸರು ಹದಿರಿತನದಿಂದ ಕಾರ್ಯಾಚರಣೆ ನಡೆಸುತ್ತಿದ್ದರು. ಆತನ ಸಹಚರ ಸುಭಾಷ ಬಗಲಿ ಕೂಡಾ ಕಿಡಿಗೇಡಿಗಳ ಪಟ್ಟಿ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more