Karnataka Politics: ವಿಜಯಪುರದ ಹಾಲಿ ಶಾಸಕ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ, ಯತ್ನಾಳ್ ಬಾಂಬ್

Jan 25, 2022, 4:05 PM IST

ಬೆಂಗಳೂರು (ಜ. 25): ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆ ನೀಡುವುದರಲ್ಲಿ ಶಾಸಕ ಯತ್ನಾಳ್ (Yathnal) ನಿಸ್ಸೀಮರು. ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿಯ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಡಿಕೆಶಿ (DK Shivakumar) ಜೊತೆ ಅಡ್ಜೆಸ್ಟ್‌ಮೆಂಟ್ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ, ಎಚ್‌ಡಿಕೆ ಜೊತೆಗೂ ಸಂಪರ್ಕದಲ್ಲಿದ್ದಾರೆ. ವಿಜಯಪುರದ ಹಾಲಿ ಬಿಜೆಪಿ ಶಾಸಕ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.