ಭೀಮಾತೀರದಲ್ಲಿ ರಿಯಲ್ ಸಿಂಗಂ ಅಲೋಕ್ ಕುಮಾರ್!‌

ಭೀಮಾತೀರದಲ್ಲಿ ರಿಯಲ್ ಸಿಂಗಂ ಅಲೋಕ್ ಕುಮಾರ್!‌

Published : Jul 21, 2022, 06:46 PM ISTUpdated : Jul 21, 2022, 06:48 PM IST

ಕೊನೆಗೂ ಭೀಮಾತೀರದ ಪಾತಕ ಕೃತ್ಯಗಳಿಗೆ ಕೊನೆಗಾಣಿಸಲು ಸರ್ಕಾರ ತೀರ್ಮಾನಿಸಿದಂತಿದೆ.  ಎಡಿಜಿಪಿಯಾದ ಮೇಲೆ ಮೊದಲ ಬಾರಿಗೆ ಭೀಮಾತೀರಕ್ಕೆ ಭೇಟಿ ನೀಡಿದ ರಿಯಲ್‌ ಸಿಂಗಂ ಅಲೋಕ್‌ ಕುಮಾರ್‌, ಮಿಂಚಿನ ಸಂಚಾರ ಮೂಡಿಸಿದ್ದಾರೆ.
 

ವಿಜಯಪುರ (ಜುಲೈ 21):  ಅವೆರಡು ಭೀಮಾತೀರದ ನಟೋರಿಯಸ್‌ ಗ್ಯಾಂಗ್‌ಗಳು. ಒಂದು ಕಾಲದಲ್ಲಿ ಭೀಮಾತೀರದಲ್ಲಿ ರಕ್ತವನ್ನ ನೀರಂತೆ ಹರಿಸಿದ್ದ ಕುಟುಂಬಗಳು ಅವು. ಆ ಕುಟುಂಬಗಳ ನಡುವಿನ ದಶಕಗಳ ದ್ವೇಷಕ್ಕೆ ಬಿದ್ದ ಹೆಣಗಳಿಗೆ ಈ ವರೆಗು ಲೆಕ್ಕಾ ಸಿಕ್ಕಿಲ್ಲ. ಈ ಕುಟುಂಬಗಳ ಕ್ರೈಂ ಇತಿಹಾಸವನ್ನ ಕೆದಕಿದ್ರೆ ಸಿಗೋದು ಕೆಂಡದಂತ ದ್ವೇಷ, ದ್ವೇಷಕ್ಕಾಗಿ ಭೀಮೆಯನ್ನ ಕಂಪಗಾಗಿಸಿದ ರಕ್ತದ ಕೋಡಿಯ ಕರಾಳ ಕಥೆ..! ಸದ್ಯ ಎರಡು ಕುಟುಂಬಗಳ ನಡುವಿನ ಪಾರಂಪರಿಕ ದ್ವೇಷವನ್ನ ಶಮನಗೊಳಿಸಲು ಪೊಲೀಸ್‌ ಫೈರ್‌ ಬ್ರಾಂಡ್‌ ಎಂಟ್ರಿಯಾಗಿದೆ..! ಹೀಗೆ ಭೀಮತೀರಕ್ಕೆ ಕರ್ನಾಟಕದ ಸಿಂಗಂ ಅಲೋಕ್‌ ಕುಮಾರ್‌ ಎಂಟ್ರಿ ಕೊಟ್ಟು ಆ ಭಾಗದ ನಟೋರಿಯಸ್‌ಗಳಿಗೆ ಲಾಸ್ಟ್‌ ವಾರ್ನಿಂಗ್‌ ನೀಡಿದ್ದಾರೆ.

ಎಡಿಜಿಪಿ ಯಾದ ಮೇಲೆ ಮೊದಲ ಬಾರಿಗೆ ಭೀಮಾತೀರಕ್ಕೆ ಭೇಟಿ ನೀಡಿದ ಅಲೋಕ್‌ ಕುಮಾರ್‌ ಖದರ್‌ ಹೇಗಿತ್ತು ಅಂತಾ. ಒಂದೆ ಕಲ್ಲಿಗೆ ಎರಡು ಹಕ್ಕಿಗಳನ್ನ ಹೊಡೆಯೋದಕ್ಕೆ ಹೊರಟಿದ್ದಾರೆ ಅಲೋಕ್‌ ಕುಮಾರ್.‌ ಸಿಂಗಂ ಅಲೋಕ್ ಕುಮಾರ್ ಭೀಮಾತೀರಕ್ಕೆ ಎಂಟ್ರಿ ಕೊಟ್ರೋ 5 ದಶಕಗಳ ಕಾಲ ದ್ವೇಷ ಸಾದಿಸಿದ್ದ ಎರಡು ಕುಟುಂಬಗಳು ಒಂದೇ ಸ್ಟೇಜ್ ಮೇಲೆ ಬಂದುಬಿಟ್ಟಿದ್ವು. ಸಂಧಾನ ಸಭೆಯ ನೆಪದಲ್ಲಿ ಎರಡೂ ಫ್ಯಾಮಿಲಿಯವರನ್ನ ಕರೆಸಿ ಅಲೋಕ್ ಕುಮಾರ್ ಒಂದು ವಾರ್ನಿಂಗ್ ಕೊಟ್ರು. ನಿಮ್ಮವರು ಸೆರೆಂಡರ್ ಆಗಲಿಲ್ಲ ಅಂದ್ರೆ ಉತ್ತರಪ್ರದೇಶ ಮಾಡೆಲ್ ಭೀಮಾ ತೀರಕ್ಕೆ ತರಬೇಕಾಗುತ್ತೆ. ನಿಮ್ಮ ಆಸ್ತಿ ಜಪ್ತಿ ಮಾಡಬೇಕಾಗುತ್ತೆ ಅಂತ ವಾರ್ನ್ ಮಾಡಿದ್ರು. ಅಲೋಕ್ ಕುಮಾರ್ ಹೀಗೆ ಹೇಳೋದಕ್ಕೆ ಕಾರಣ ಎರಡೂ ಕುಟುಂಬಳು ಕಳೆದ 5 ದಶಕಗಳ ಕಾಲ ಭೀಮಾ ತೀರದಲ್ಲಿ ಮಾಡಿದ ಅವಾಂತರಗಳು.

Vijayapura: ಭೀಮಾ ತೀರದಲ್ಲಿ ಖಾಕಿ ಫೈರ್‌ ಬ್ರಾಂಡ್‌ ಅಲೋಕ್‌ ಕುಮಾರ್!

ಭೀಮಾತೀರದ ಈ ಇಬ್ಬರು ಮಾಸ್ಟರ್‌ ಮೈಂಡ್‌ ಸರೆಂಡರ್‌ ಆದ್ರೆ ಮಾತ್ರ ಭೀಮಾತೀರದಲ್ಲಿ ಹೊತ್ತಿಕೊಂಡಿರುವ ದ್ವೇಷದ ಜ್ವಾಲೆ ಆರೋದಕ್ಕೆ ಸಾಧ್ಯ.. ಈ ನಡುವೆ ಭೀಮಾತೀರದ ಈ ಕುಟುಂಬಗಳ ಕಥೆಯೇ ಒಂದಾದ್ರೆ, ಇವ್ರನ್ನ ಸಂಬಾಳಿಸಬೇಕಾದ ಚಡಚಣ ಠಾಣೆಯ ಪೊಲೀಸರ ಕಥೆಯೇ ಬೇರೆ.. ಎಡಿಜಿಪಿ ಅಲೋಕ್‌ ಕುಮಾರ್‌ ಎದುರೇ ಚಡಚಣ ಪೊಲೀಸರ ಮಾನ ಮರ್ಯಾದೆ ಮೂರುಕಾಸಿಗೆ ಹರಾಜಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more