ವಿಜಯಪುರದಲ್ಲಿ ಮಗುವಿನ ಜೀವದ ಜೊತೆ ಚೆಲ್ಲಾಟ: ನಿಷೇಧಿತ ಆಚರಣೆಗೆ ಆಕ್ರೋಶ

ವಿಜಯಪುರದಲ್ಲಿ ಮಗುವಿನ ಜೀವದ ಜೊತೆ ಚೆಲ್ಲಾಟ: ನಿಷೇಧಿತ ಆಚರಣೆಗೆ ಆಕ್ರೋಶ

Published : Dec 25, 2024, 08:01 PM IST

ವಿಜಯಪುರ ಜಿಲ್ಲೆಯ ದೇವರ ಜಾತ್ರೆಯಲ್ಲಿ ಪೂಜಾರಿಯೊಬ್ಬರು ಮಗುವನ್ನು ಎತ್ತರದಿಂದ ಎಸೆಯುವ ನಿಷೇಧಿತ ಆಚರಣೆ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಯಂಭತ್ತಾಳದ ಗೌರಿಶಂಕರ ದೇವಾಲಯದಲ್ಲಿ ನಡೆದಿದ್ದು, ಮಗುವಿನ ಜೀವಕ್ಕೆ ಅಪಾಯವೊಡ್ಡುವ ಈ ಆಚರಣೆಯನ್ನು ನಿಷೇಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ವಿಜಯಪುರ ಜಿಲ್ಲೆಯ ದೇವರ ಜಾತ್ರೆಯಲ್ಲಿ ಪೂಜಾರಿಯೊಬ್ಬರು ನಿಷೇಧಿತ ಆಚರಣೆಯನ್ನು ಮಾಡಿದ್ದಾರೆ. ಪೂಜಾರಿ ದೇವಸ್ಥಾನದ ಜಗುಲಿಯ ಮೇಲೆ ದೇವರ ಮೂರ್ತಿಯ ಪಕ್ಕದಲ್ಲಿ ಮಗುವನ್ನು ನೀವಾಳಿಸಿ, ಮೇಲಕ್ಕೆ ಎತ್ತಿ ಮಗುವನ್ನು ಕೆಳಗೆ ಬಿಡುತ್ತಾರೆ. ಆಗ ಪೋಷಕರು ಕೆಳಗೆ ಜೋಳಿಗೆ ಹಿಡಿದು ಮಗು ಬೀಳುವಂತೆ ಕಾಯುತ್ತಿರುತ್ತಾರೆ. ಮಗುವನ್ನು ಜೋಳಿಗೆಯಲ್ಲಿ ಹಿಡಿದುಕೊಳ್ಳಬೇಕು. ಒಂದು ವೇಳೆ ಮಗು ಜೋಳಿಗೆಯಲ್ಲಿ ಬೀಳದೆ ತಪ್ಪಿದರೆ ಮಗುವಿನ ಜೀವಕ್ಕೆ ಅಪಾಯವಾಗುತ್ತದೆ. ಇನ್ನು ಮಗುವನ್ನು ಮೇಲಿನಿಂದ ಕೆಳಗೆ ಎಸೆಯುವಾಗ ಮಗುವಿಗೆ ಉಸಿರಾಟ ಸಮಸ್ಯೆ ಎದುರಾಗಿ ಪ್ರಾಣಕ್ಕೂ ಅಪಾಯ ಬರಬಹುದು. ಆದ್ದರಿಂದ ರಾಜ್ಯದಲ್ಲಿ ಇದನ್ನು ನಿಷೇಧ ಮಾಡಿದ್ದರೂ, ಆಚರಣೆ ಮಾಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ವಿಜಯಪುರ ಯಂಭತ್ತಾಳದ ಗೌರಿಶಂಕರ ದೇವಾಲಯದಲ್ಲಿ ಈ ಮೌಢ್ಯಾಚರಣೆ ಮಾಡಲಾಗಿದರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಂಥಹ ಮೌಢ್ಯ ಆಚರಣೆಗಳನ್ನು ಸರ್ಕಾರದಿಂದ ಕಷ್ಟುನಿಟ್ಟಾಗಿ ನಿಷೇಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮೇಲಿಂದ ಪುಟ್ಟ ಮಕ್ಕಳನ್ನು ಪೂಜಾರಿ ಎಸೆಯುವುದನ್ನು ತಪ್ಪಿಸಿ, ಏನೂ ಅರಿಯದ ಮಕ್ಕಳು ಪಾಯಕ್ಕೆ ಸಿಲುಕುವುದನ್ನು ತಪ್ಪಿಸಬೇಕು ಎಂದು ಆಗ್ರಹ ಮಾಡಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?