ವಿಜಯಪುರದಲ್ಲಿ ಮಗುವಿನ ಜೀವದ ಜೊತೆ ಚೆಲ್ಲಾಟ: ನಿಷೇಧಿತ ಆಚರಣೆಗೆ ಆಕ್ರೋಶ

ವಿಜಯಪುರದಲ್ಲಿ ಮಗುವಿನ ಜೀವದ ಜೊತೆ ಚೆಲ್ಲಾಟ: ನಿಷೇಧಿತ ಆಚರಣೆಗೆ ಆಕ್ರೋಶ

Published : Dec 25, 2024, 08:01 PM IST

ವಿಜಯಪುರ ಜಿಲ್ಲೆಯ ದೇವರ ಜಾತ್ರೆಯಲ್ಲಿ ಪೂಜಾರಿಯೊಬ್ಬರು ಮಗುವನ್ನು ಎತ್ತರದಿಂದ ಎಸೆಯುವ ನಿಷೇಧಿತ ಆಚರಣೆ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಯಂಭತ್ತಾಳದ ಗೌರಿಶಂಕರ ದೇವಾಲಯದಲ್ಲಿ ನಡೆದಿದ್ದು, ಮಗುವಿನ ಜೀವಕ್ಕೆ ಅಪಾಯವೊಡ್ಡುವ ಈ ಆಚರಣೆಯನ್ನು ನಿಷೇಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ವಿಜಯಪುರ ಜಿಲ್ಲೆಯ ದೇವರ ಜಾತ್ರೆಯಲ್ಲಿ ಪೂಜಾರಿಯೊಬ್ಬರು ನಿಷೇಧಿತ ಆಚರಣೆಯನ್ನು ಮಾಡಿದ್ದಾರೆ. ಪೂಜಾರಿ ದೇವಸ್ಥಾನದ ಜಗುಲಿಯ ಮೇಲೆ ದೇವರ ಮೂರ್ತಿಯ ಪಕ್ಕದಲ್ಲಿ ಮಗುವನ್ನು ನೀವಾಳಿಸಿ, ಮೇಲಕ್ಕೆ ಎತ್ತಿ ಮಗುವನ್ನು ಕೆಳಗೆ ಬಿಡುತ್ತಾರೆ. ಆಗ ಪೋಷಕರು ಕೆಳಗೆ ಜೋಳಿಗೆ ಹಿಡಿದು ಮಗು ಬೀಳುವಂತೆ ಕಾಯುತ್ತಿರುತ್ತಾರೆ. ಮಗುವನ್ನು ಜೋಳಿಗೆಯಲ್ಲಿ ಹಿಡಿದುಕೊಳ್ಳಬೇಕು. ಒಂದು ವೇಳೆ ಮಗು ಜೋಳಿಗೆಯಲ್ಲಿ ಬೀಳದೆ ತಪ್ಪಿದರೆ ಮಗುವಿನ ಜೀವಕ್ಕೆ ಅಪಾಯವಾಗುತ್ತದೆ. ಇನ್ನು ಮಗುವನ್ನು ಮೇಲಿನಿಂದ ಕೆಳಗೆ ಎಸೆಯುವಾಗ ಮಗುವಿಗೆ ಉಸಿರಾಟ ಸಮಸ್ಯೆ ಎದುರಾಗಿ ಪ್ರಾಣಕ್ಕೂ ಅಪಾಯ ಬರಬಹುದು. ಆದ್ದರಿಂದ ರಾಜ್ಯದಲ್ಲಿ ಇದನ್ನು ನಿಷೇಧ ಮಾಡಿದ್ದರೂ, ಆಚರಣೆ ಮಾಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ವಿಜಯಪುರ ಯಂಭತ್ತಾಳದ ಗೌರಿಶಂಕರ ದೇವಾಲಯದಲ್ಲಿ ಈ ಮೌಢ್ಯಾಚರಣೆ ಮಾಡಲಾಗಿದರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಂಥಹ ಮೌಢ್ಯ ಆಚರಣೆಗಳನ್ನು ಸರ್ಕಾರದಿಂದ ಕಷ್ಟುನಿಟ್ಟಾಗಿ ನಿಷೇಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮೇಲಿಂದ ಪುಟ್ಟ ಮಕ್ಕಳನ್ನು ಪೂಜಾರಿ ಎಸೆಯುವುದನ್ನು ತಪ್ಪಿಸಿ, ಏನೂ ಅರಿಯದ ಮಕ್ಕಳು ಪಾಯಕ್ಕೆ ಸಿಲುಕುವುದನ್ನು ತಪ್ಪಿಸಬೇಕು ಎಂದು ಆಗ್ರಹ ಮಾಡಿದ್ದಾರೆ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!