ವಿಜಯಪುರದಲ್ಲಿ ಮಗುವಿನ ಜೀವದ ಜೊತೆ ಚೆಲ್ಲಾಟ: ನಿಷೇಧಿತ ಆಚರಣೆಗೆ ಆಕ್ರೋಶ

ವಿಜಯಪುರದಲ್ಲಿ ಮಗುವಿನ ಜೀವದ ಜೊತೆ ಚೆಲ್ಲಾಟ: ನಿಷೇಧಿತ ಆಚರಣೆಗೆ ಆಕ್ರೋಶ

Published : Dec 25, 2024, 08:01 PM IST

ವಿಜಯಪುರ ಜಿಲ್ಲೆಯ ದೇವರ ಜಾತ್ರೆಯಲ್ಲಿ ಪೂಜಾರಿಯೊಬ್ಬರು ಮಗುವನ್ನು ಎತ್ತರದಿಂದ ಎಸೆಯುವ ನಿಷೇಧಿತ ಆಚರಣೆ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಯಂಭತ್ತಾಳದ ಗೌರಿಶಂಕರ ದೇವಾಲಯದಲ್ಲಿ ನಡೆದಿದ್ದು, ಮಗುವಿನ ಜೀವಕ್ಕೆ ಅಪಾಯವೊಡ್ಡುವ ಈ ಆಚರಣೆಯನ್ನು ನಿಷೇಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ವಿಜಯಪುರ ಜಿಲ್ಲೆಯ ದೇವರ ಜಾತ್ರೆಯಲ್ಲಿ ಪೂಜಾರಿಯೊಬ್ಬರು ನಿಷೇಧಿತ ಆಚರಣೆಯನ್ನು ಮಾಡಿದ್ದಾರೆ. ಪೂಜಾರಿ ದೇವಸ್ಥಾನದ ಜಗುಲಿಯ ಮೇಲೆ ದೇವರ ಮೂರ್ತಿಯ ಪಕ್ಕದಲ್ಲಿ ಮಗುವನ್ನು ನೀವಾಳಿಸಿ, ಮೇಲಕ್ಕೆ ಎತ್ತಿ ಮಗುವನ್ನು ಕೆಳಗೆ ಬಿಡುತ್ತಾರೆ. ಆಗ ಪೋಷಕರು ಕೆಳಗೆ ಜೋಳಿಗೆ ಹಿಡಿದು ಮಗು ಬೀಳುವಂತೆ ಕಾಯುತ್ತಿರುತ್ತಾರೆ. ಮಗುವನ್ನು ಜೋಳಿಗೆಯಲ್ಲಿ ಹಿಡಿದುಕೊಳ್ಳಬೇಕು. ಒಂದು ವೇಳೆ ಮಗು ಜೋಳಿಗೆಯಲ್ಲಿ ಬೀಳದೆ ತಪ್ಪಿದರೆ ಮಗುವಿನ ಜೀವಕ್ಕೆ ಅಪಾಯವಾಗುತ್ತದೆ. ಇನ್ನು ಮಗುವನ್ನು ಮೇಲಿನಿಂದ ಕೆಳಗೆ ಎಸೆಯುವಾಗ ಮಗುವಿಗೆ ಉಸಿರಾಟ ಸಮಸ್ಯೆ ಎದುರಾಗಿ ಪ್ರಾಣಕ್ಕೂ ಅಪಾಯ ಬರಬಹುದು. ಆದ್ದರಿಂದ ರಾಜ್ಯದಲ್ಲಿ ಇದನ್ನು ನಿಷೇಧ ಮಾಡಿದ್ದರೂ, ಆಚರಣೆ ಮಾಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ವಿಜಯಪುರ ಯಂಭತ್ತಾಳದ ಗೌರಿಶಂಕರ ದೇವಾಲಯದಲ್ಲಿ ಈ ಮೌಢ್ಯಾಚರಣೆ ಮಾಡಲಾಗಿದರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಂಥಹ ಮೌಢ್ಯ ಆಚರಣೆಗಳನ್ನು ಸರ್ಕಾರದಿಂದ ಕಷ್ಟುನಿಟ್ಟಾಗಿ ನಿಷೇಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮೇಲಿಂದ ಪುಟ್ಟ ಮಕ್ಕಳನ್ನು ಪೂಜಾರಿ ಎಸೆಯುವುದನ್ನು ತಪ್ಪಿಸಿ, ಏನೂ ಅರಿಯದ ಮಕ್ಕಳು ಪಾಯಕ್ಕೆ ಸಿಲುಕುವುದನ್ನು ತಪ್ಪಿಸಬೇಕು ಎಂದು ಆಗ್ರಹ ಮಾಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!