ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

Published : Aug 06, 2023, 11:54 AM IST

ಮಳೆಯಿಂದ ಜೀವಕಳೆ ಬಂದಿದ್ದ ಕೆಆರ್‌ಎಸ್‌ ಡ್ಯಾಂ ಮತ್ತೆ ಬರಿದಾಗುತ್ತಿದೆ. ಒಂದು ಕಡೆ ರೈತರ ಬೆಳೆಗೆ ನೀರು, ಮತ್ತೊಂದೆಡೆ ಬೆಂಗಳೂರಿಗೆ ನೀರು.ಇನ್ನೊಂದೆಡೆ ನಾಲೆಗಳಿಗೆ ನೀರು ಬಂದ್ ಮಾಡಿ ತಮಿಳುನಾಡಿಗೆ ಅಧಿಕಾರಿಗಳು ನೀರು ಹರಿಸುತ್ತಿದ್ದು.ಇದು ರೈತರಿಗೆ ಆಕ್ರೋಶ ಬರುವಂತೆ ಮಾಡಿದೆ. 

KRS ಹಳೇ ಮೈಸೂರು ಭಾಗದ ಜೀವನಾಡಿ. ಈ ಕೆಆರ್‌ಎಸ್ ಡ್ಯಾಂ (KRS dam) ತುಂಬಿದ್ರೆ ಮೈಸೂರು, ಬೆಂಗಳೂರಿಗರಿಗೆ(Bengaluru) ನೀರಿನ ಬವಣೆ ತಪ್ಪುತ್ತೆ. ಅದರಲ್ಲೂ ಜುಲೈ ಮಧ್ಯಭಾಗದಲ್ಲಿ ಸುರಿದ ಮಳೆಯಿಂದ(rain) ಜಲಾಶಯಕ್ಕೆ 50 ಸಾವಿರ ಕ್ಯೂಸೆಕ್‌ಗೂ ನೀರು ಹರಿದು ಬಂದಿತ್ತು. ಬೆಂಗಳೂರಿನ ಜನ ನಿಟ್ಟುಸಿರು ಬಿಟ್ಟಿದ್ರು.. ಇತ್ತ ರೈತರು ಬಿತ್ತನೆ ಕಾರ್ಯ ಆರಂಭಿಸಿದ್ರು..ಆದ್ರೆ ಈಗ ಮಳೆಯೂ ನಿಂತಿದೆ. ತಮಿಳುನಾಡು(Tamilnadu) ಕ್ಯಾತೆ ತೆಗೆದು ನೀರು ಬಿಡುಗಡೆ ಮಾಡಿಸಿಕೊಳ್ಳುತ್ತಿದೆ. ಇದು ಅನ್ನದಾತರನ್ನ ಸಂಕಷ್ಟಕ್ಕೆ ಈಡುಮಾಡಿದೆ. ತಮಿಳುನಾಡಿಗೆ ರಾಜ್ಯ ಸರ್ಕಾರ 5 ಸಾವಿರ ಕ್ಯೂಸೆಕ್ ನೀರು ಬಿಟ್ಟಿದೆ. ಇನ್ನು ಹೆಚ್ಚಿನ ನೀರಿಗಾಗಿ ಕೇಂದ್ರಕ್ಕೆ ಮೊರೆ ಇಟ್ಟಿದೆ. ಯಾವಾಗ ತಮಿಳುನಾಡು ಕೇಂದ್ರದ ಬಾಗಿಲು ತಟ್ತು, ಇತ್ತ ನಾಲೆಗಳಿಗೆ ಹರಿಸಲಾಗ್ತಿದ್ದ ನೀರನ್ನ ಕಾವೇರಿ ನಿಗಮದ ಅಧಿಕಾರಿಗಳು ಬಂದ್ ಮಾಡಿದ್ದಾರೆ. ಒಂದು ಕಡೆ ಬೆಂಗಳೂರಿಗೆ ನೀರು ಬೇಕು..ಮತ್ತೊಂದೆಡೆ ರೈತರಿಗೆ ನೀರು ಬಿಡಬೇಕು..ಇತ್ತ ತಮಿಳುನಾಡು ಕೂಡ ಕ್ಯಾತೆ ತೆಗೆದಿದೆ ಇದ್ರಿಂದ ರಾಜ್ಯ ಸರ್ಕಾರಕ್ಕೆ ತ್ರಿಶಂಕು ಸ್ಥಿತಿ ಎದುರಾಗಿದ್ದು..ಬೆಂಗಳೂರಿಗೆ ಕುಡಿಯೋ ನೀರಿನ ಸಂಕಷ್ಟ ಎದುರಾಗುತ್ತಿದೆ.

ಇದನ್ನೂ ವೀಕ್ಷಿಸಿ: ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more