ನವಿಲುತೀರ್ಥ ಡ್ಯಾಂನಿಂದ ನೀರು ಬಿಡುಗಡೆ; ಮುಳುಗಡೆ ಭೀತಿಯಲ್ಲಿ ಸಂಗಾಳ ಗ್ರಾಮ!

Aug 18, 2020, 10:15 AM IST

ಬೆಳಗಾವಿ (ಅ. 18): ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭೆ ತುಂಬಿ ಹರಿಯುತ್ತಿದ್ದಾಳೆ. ನವಿಲು ತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿದ್ದು  ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಂಗಾಳ ಗ್ರಾಮ ಮುಳುಗಡೆಯಾಗುವ ಭೀತಿಯಲ್ಲಿದೆ.  ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಇಷ್ಟೆಲ್ಲಾ ಆದರೂ ಅಧಿಕಾರಿಗಳು ಮಾತ್ರ ಗ್ರಾಮಕ್ಕೆ ಬಂದು ಮುಂಜಾಗ್ರತಾ ಕ್ರಮಗಳ ಬಗ್ಗೆ, ಪರ್ಯಾಯ ವ್ಯವಸ್ಥೆ ಬಗ್ಗೆ ಇನ್ನೂ ಮಾತುಕತೆ ನಡೆಸದೇ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ನಮಗೆ ಶಾಶ್ವತ ಪರಿಹಾರ ಕೊಡಿಸಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. 
ನೀರಿನ ಭಯವಿಲ್ಲದೆ ನದಿಯಲ್ಲಿ ಯುವಕರ ಹುಚ್ಚಾಟ