ಮಳೆ ಕೊರತೆ ಮಧ್ಯೆ ತಮಿಳುನಾಡಿಗೆ ನೀರು ರಿಲೀಸ್: ಸಿಟ್ಟಿಗೆದ್ದ ಕಾವೇರಿ ಕೊಳ್ಳದ ರೈತರಿಂದ ನೀರಿಗಿಳಿದು ಪ್ರೊಟೆಸ್ಟ್..!

ಮಳೆ ಕೊರತೆ ಮಧ್ಯೆ ತಮಿಳುನಾಡಿಗೆ ನೀರು ರಿಲೀಸ್: ಸಿಟ್ಟಿಗೆದ್ದ ಕಾವೇರಿ ಕೊಳ್ಳದ ರೈತರಿಂದ ನೀರಿಗಿಳಿದು ಪ್ರೊಟೆಸ್ಟ್..!

Published : Aug 17, 2023, 10:50 AM IST

ರಾಜ್ಯದ ಕಾವೇರಿ ಕಣಿವೆಯಲ್ಲಿ ನೀರು ಕೊರತೆ ಹೆಚ್ಚುತಿದ್ರೆ, ಇತ್ತ ಹೆಚ್ಚುವರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಹೆಚ್ಚುವರಿ ನೀರಿಗಾಗಿ ತಮಿಳುನಾಡು ಸರ್ಕಾರ ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ರೆ, ಸುಪ್ರೀಂ ಆದೇಶಕ್ಕೂ ಮುನ್ನವೇ ರಾಜ್ಯ ಸರ್ಕಾರ ತಮಿಳನಾಡಿಗೆ ಹರಿಸುವ ನೀರಿನ ಪ್ರಮಾಣ ಹೆಚ್ಚಿಸಿದೆ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ರೈತರು ಪ್ರೊಟೆಸ್ಟ್ ನಡೆಸಿದ್ರು.

ತಮಿಳುನಾಡಿಗೆ ನೀರು ಹರಿಸುತ್ತಿರುವ ಹಿನ್ನೆಲೆ ನೀರಿಗಿಳಿದು ರೈತರು ಪ್ರತಿಭಟನೆ(Farmer protest) ನಡೆಸಿದರು. ಅಲ್ಲದೇ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಮೊದಲೇ ನೀರಿನ ಬರದಿಂದ ಕಂಗೆಟ್ಟ ಕರ್ನಾಟಕಕ್ಕೆ(Karnataka) ಮುಂಗಾರು ತಡವಾಗಿ ಎಂಟ್ರಿಯಾಗಿದೆ. ಆರಂಭದಲ್ಲೇನೋ ಒಂದಿಷ್ಟು ಮಳೆಯಾಯ್ತು. ಬಳಿಕ ಕೈಕೊಟ್ಟ ವರುಣ ರೈತರನ್ನು ಅತಂಕಕ್ಕೆ ದೂಡಿದ್ದಾನೆ. ಇನ್ನು ಮಳೆಯಿಲ್ಲದೇ ನದಿಗಳು ಕೂಡ ಸಂಪೂರ್ಣ ಭರ್ತಿಯಾಗಿಲ್ಲ. ಕಾವೇರಿ(Cauvery) ಕಣಿವೆ ಭಾಗದ ರೈತರು ಒಂದು ಬೆಳೆಗಾದ್ರೂ ನೀರು ಸಿಕ್ಕಿದ್ರೆ ಸಾಕಪ್ಪ ಎನ್ನುತ್ತಿರುವಾಗಲೇ ತಮಿಳುನಾಡು(Tamilnadu) ಸರ್ಕಾರ ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಇನ್ನೊಂದು ದುರಂತ ಏನಂದ್ರೆ ಕೋರ್ಟ್ ಆದೇಶವೇ ಬಂದಿಲ್ಲ. ಆಗಲೇ ತಮಿಳುನಾಡಿಗೆ ಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಇದು ರೈತರನ್ನು ರೊಚ್ಚಿಗೆಬ್ಬಿಸಿದೆ. ಇದನ್ನು ವಿರೋಧಿಸಿ ಕಾವೇರಿ ನದಿಗೆ ಇಳಿದು ರೈತರು ಪ್ರತಿಭಟನೆ ನಡೆಸಿದ್ರು. ತಮಿಳುನಾಡಿನ ಮೆಟ್ಟೂರು ಡ್ಯಾಂನಲ್ಲಿ ನೀರಿನ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ನಮ್ಮ ರೈತರನ್ನ ರಕ್ಷಣೆ ಮಾಡಿಕೊಳ್ಳಬೇಕು. ಪ್ರತಿನಿತ್ಯ 24 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇದರ ಬೆನ್ನಲ್ಲೇ ಕೆಆರ್‌ಎಸ್‌ ಡ್ಯಾಂನಿಂದ ಮೆಟ್ಟೂರು ಡ್ಯಾಂಗೆ ಹರಿಸುತ್ತಿದ್ದ ನೀರಿನ ಪ್ರಮಾಣ ಹೆಚ್ಚಿಸಲಾಗಿದೆ.

ಇದನ್ನೂ ವೀಕ್ಷಿಸಿ:  BPL ಕಾರ್ಡ್‌ದಾರರಿಗೆ ಮತ್ತೊಂದು ಶಾಕ್: ಸರ್ಕಾರದಿಂದ ಸರ್ವೆ ಆರಂಭ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more