ಮಳೆ ಕೊರತೆ ಮಧ್ಯೆ ತಮಿಳುನಾಡಿಗೆ ನೀರು ರಿಲೀಸ್: ಸಿಟ್ಟಿಗೆದ್ದ ಕಾವೇರಿ ಕೊಳ್ಳದ ರೈತರಿಂದ ನೀರಿಗಿಳಿದು ಪ್ರೊಟೆಸ್ಟ್..!

ಮಳೆ ಕೊರತೆ ಮಧ್ಯೆ ತಮಿಳುನಾಡಿಗೆ ನೀರು ರಿಲೀಸ್: ಸಿಟ್ಟಿಗೆದ್ದ ಕಾವೇರಿ ಕೊಳ್ಳದ ರೈತರಿಂದ ನೀರಿಗಿಳಿದು ಪ್ರೊಟೆಸ್ಟ್..!

Published : Aug 17, 2023, 10:50 AM IST

ರಾಜ್ಯದ ಕಾವೇರಿ ಕಣಿವೆಯಲ್ಲಿ ನೀರು ಕೊರತೆ ಹೆಚ್ಚುತಿದ್ರೆ, ಇತ್ತ ಹೆಚ್ಚುವರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಹೆಚ್ಚುವರಿ ನೀರಿಗಾಗಿ ತಮಿಳುನಾಡು ಸರ್ಕಾರ ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ರೆ, ಸುಪ್ರೀಂ ಆದೇಶಕ್ಕೂ ಮುನ್ನವೇ ರಾಜ್ಯ ಸರ್ಕಾರ ತಮಿಳನಾಡಿಗೆ ಹರಿಸುವ ನೀರಿನ ಪ್ರಮಾಣ ಹೆಚ್ಚಿಸಿದೆ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ರೈತರು ಪ್ರೊಟೆಸ್ಟ್ ನಡೆಸಿದ್ರು.

ತಮಿಳುನಾಡಿಗೆ ನೀರು ಹರಿಸುತ್ತಿರುವ ಹಿನ್ನೆಲೆ ನೀರಿಗಿಳಿದು ರೈತರು ಪ್ರತಿಭಟನೆ(Farmer protest) ನಡೆಸಿದರು. ಅಲ್ಲದೇ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಮೊದಲೇ ನೀರಿನ ಬರದಿಂದ ಕಂಗೆಟ್ಟ ಕರ್ನಾಟಕಕ್ಕೆ(Karnataka) ಮುಂಗಾರು ತಡವಾಗಿ ಎಂಟ್ರಿಯಾಗಿದೆ. ಆರಂಭದಲ್ಲೇನೋ ಒಂದಿಷ್ಟು ಮಳೆಯಾಯ್ತು. ಬಳಿಕ ಕೈಕೊಟ್ಟ ವರುಣ ರೈತರನ್ನು ಅತಂಕಕ್ಕೆ ದೂಡಿದ್ದಾನೆ. ಇನ್ನು ಮಳೆಯಿಲ್ಲದೇ ನದಿಗಳು ಕೂಡ ಸಂಪೂರ್ಣ ಭರ್ತಿಯಾಗಿಲ್ಲ. ಕಾವೇರಿ(Cauvery) ಕಣಿವೆ ಭಾಗದ ರೈತರು ಒಂದು ಬೆಳೆಗಾದ್ರೂ ನೀರು ಸಿಕ್ಕಿದ್ರೆ ಸಾಕಪ್ಪ ಎನ್ನುತ್ತಿರುವಾಗಲೇ ತಮಿಳುನಾಡು(Tamilnadu) ಸರ್ಕಾರ ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಇನ್ನೊಂದು ದುರಂತ ಏನಂದ್ರೆ ಕೋರ್ಟ್ ಆದೇಶವೇ ಬಂದಿಲ್ಲ. ಆಗಲೇ ತಮಿಳುನಾಡಿಗೆ ಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಇದು ರೈತರನ್ನು ರೊಚ್ಚಿಗೆಬ್ಬಿಸಿದೆ. ಇದನ್ನು ವಿರೋಧಿಸಿ ಕಾವೇರಿ ನದಿಗೆ ಇಳಿದು ರೈತರು ಪ್ರತಿಭಟನೆ ನಡೆಸಿದ್ರು. ತಮಿಳುನಾಡಿನ ಮೆಟ್ಟೂರು ಡ್ಯಾಂನಲ್ಲಿ ನೀರಿನ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ನಮ್ಮ ರೈತರನ್ನ ರಕ್ಷಣೆ ಮಾಡಿಕೊಳ್ಳಬೇಕು. ಪ್ರತಿನಿತ್ಯ 24 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇದರ ಬೆನ್ನಲ್ಲೇ ಕೆಆರ್‌ಎಸ್‌ ಡ್ಯಾಂನಿಂದ ಮೆಟ್ಟೂರು ಡ್ಯಾಂಗೆ ಹರಿಸುತ್ತಿದ್ದ ನೀರಿನ ಪ್ರಮಾಣ ಹೆಚ್ಚಿಸಲಾಗಿದೆ.

ಇದನ್ನೂ ವೀಕ್ಷಿಸಿ:  BPL ಕಾರ್ಡ್‌ದಾರರಿಗೆ ಮತ್ತೊಂದು ಶಾಕ್: ಸರ್ಕಾರದಿಂದ ಸರ್ವೆ ಆರಂಭ !

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more