ಮಳೆ ಕೊರತೆ ಮಧ್ಯೆ ತಮಿಳುನಾಡಿಗೆ ನೀರು ರಿಲೀಸ್: ಸಿಟ್ಟಿಗೆದ್ದ ಕಾವೇರಿ ಕೊಳ್ಳದ ರೈತರಿಂದ ನೀರಿಗಿಳಿದು ಪ್ರೊಟೆಸ್ಟ್..!

ಮಳೆ ಕೊರತೆ ಮಧ್ಯೆ ತಮಿಳುನಾಡಿಗೆ ನೀರು ರಿಲೀಸ್: ಸಿಟ್ಟಿಗೆದ್ದ ಕಾವೇರಿ ಕೊಳ್ಳದ ರೈತರಿಂದ ನೀರಿಗಿಳಿದು ಪ್ರೊಟೆಸ್ಟ್..!

Published : Aug 17, 2023, 10:50 AM IST

ರಾಜ್ಯದ ಕಾವೇರಿ ಕಣಿವೆಯಲ್ಲಿ ನೀರು ಕೊರತೆ ಹೆಚ್ಚುತಿದ್ರೆ, ಇತ್ತ ಹೆಚ್ಚುವರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಹೆಚ್ಚುವರಿ ನೀರಿಗಾಗಿ ತಮಿಳುನಾಡು ಸರ್ಕಾರ ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ರೆ, ಸುಪ್ರೀಂ ಆದೇಶಕ್ಕೂ ಮುನ್ನವೇ ರಾಜ್ಯ ಸರ್ಕಾರ ತಮಿಳನಾಡಿಗೆ ಹರಿಸುವ ನೀರಿನ ಪ್ರಮಾಣ ಹೆಚ್ಚಿಸಿದೆ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ರೈತರು ಪ್ರೊಟೆಸ್ಟ್ ನಡೆಸಿದ್ರು.

ತಮಿಳುನಾಡಿಗೆ ನೀರು ಹರಿಸುತ್ತಿರುವ ಹಿನ್ನೆಲೆ ನೀರಿಗಿಳಿದು ರೈತರು ಪ್ರತಿಭಟನೆ(Farmer protest) ನಡೆಸಿದರು. ಅಲ್ಲದೇ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಮೊದಲೇ ನೀರಿನ ಬರದಿಂದ ಕಂಗೆಟ್ಟ ಕರ್ನಾಟಕಕ್ಕೆ(Karnataka) ಮುಂಗಾರು ತಡವಾಗಿ ಎಂಟ್ರಿಯಾಗಿದೆ. ಆರಂಭದಲ್ಲೇನೋ ಒಂದಿಷ್ಟು ಮಳೆಯಾಯ್ತು. ಬಳಿಕ ಕೈಕೊಟ್ಟ ವರುಣ ರೈತರನ್ನು ಅತಂಕಕ್ಕೆ ದೂಡಿದ್ದಾನೆ. ಇನ್ನು ಮಳೆಯಿಲ್ಲದೇ ನದಿಗಳು ಕೂಡ ಸಂಪೂರ್ಣ ಭರ್ತಿಯಾಗಿಲ್ಲ. ಕಾವೇರಿ(Cauvery) ಕಣಿವೆ ಭಾಗದ ರೈತರು ಒಂದು ಬೆಳೆಗಾದ್ರೂ ನೀರು ಸಿಕ್ಕಿದ್ರೆ ಸಾಕಪ್ಪ ಎನ್ನುತ್ತಿರುವಾಗಲೇ ತಮಿಳುನಾಡು(Tamilnadu) ಸರ್ಕಾರ ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಇನ್ನೊಂದು ದುರಂತ ಏನಂದ್ರೆ ಕೋರ್ಟ್ ಆದೇಶವೇ ಬಂದಿಲ್ಲ. ಆಗಲೇ ತಮಿಳುನಾಡಿಗೆ ಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಇದು ರೈತರನ್ನು ರೊಚ್ಚಿಗೆಬ್ಬಿಸಿದೆ. ಇದನ್ನು ವಿರೋಧಿಸಿ ಕಾವೇರಿ ನದಿಗೆ ಇಳಿದು ರೈತರು ಪ್ರತಿಭಟನೆ ನಡೆಸಿದ್ರು. ತಮಿಳುನಾಡಿನ ಮೆಟ್ಟೂರು ಡ್ಯಾಂನಲ್ಲಿ ನೀರಿನ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ನಮ್ಮ ರೈತರನ್ನ ರಕ್ಷಣೆ ಮಾಡಿಕೊಳ್ಳಬೇಕು. ಪ್ರತಿನಿತ್ಯ 24 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇದರ ಬೆನ್ನಲ್ಲೇ ಕೆಆರ್‌ಎಸ್‌ ಡ್ಯಾಂನಿಂದ ಮೆಟ್ಟೂರು ಡ್ಯಾಂಗೆ ಹರಿಸುತ್ತಿದ್ದ ನೀರಿನ ಪ್ರಮಾಣ ಹೆಚ್ಚಿಸಲಾಗಿದೆ.

ಇದನ್ನೂ ವೀಕ್ಷಿಸಿ:  BPL ಕಾರ್ಡ್‌ದಾರರಿಗೆ ಮತ್ತೊಂದು ಶಾಕ್: ಸರ್ಕಾರದಿಂದ ಸರ್ವೆ ಆರಂಭ !

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more