ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?

ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?

Published : Aug 12, 2024, 11:49 AM IST

ಹೊಸಪೇಟೆ ನಗರದ ಬಳಿಯಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟಿನ ಚೈನ್ ಲಿಂಕ್ ಮುರಿದು ಹೋಗಲು ಕಾರಣ ಇಲ್ಲಿದೆ ನೋಡಿ..

ಬೆಂಗಳೂರು (ಆ.12): ಹೊಸಪೇಟೆಯಲ್ಲಿರುವ ತುಂಗಭದ್ರ ಜಲಾಶಯದ ಕ್ರಸ್ಟ್‌ ಗೇಟ್​​ 19ರ ಚೈನ್ ಲಿಂಕ್​ ಕಟ್ಟಾಗಿದೆ. ಇದರ ಪರಿಣಾಮ ಗೇಟ್​ ಮುರಿದು ನದಿಗೆ ದೊಡ್ಡ  ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ಜಲಾಶಯ ಭರ್ತಿಯಾದ ಖುಷಿಯಲ್ಲಿದ್ದ ಜನತೆಗೆ ಇದು ದೊಡ್ಡ ಶಾಕಾಗಿದೆ. ಹಾಗಿದ್ದರೆ ಗೇಟ್​​ ಸರಿ ಪಡಿಸುವಷ್ಟರಲ್ಲಿ ಎಷ್ಟು ಪ್ರಮಾಣದ ನೀರು ಹರಿದು ಹೋಗಲಿದೆ? ಇದರಿಂದ ಏನೆಲ್ಲ ತೊಂದರೆಯಾಗಲಿದೆ ಅನ್ನೋದನ್ನು ಇಲ್ಲಿ ನೋಡೋಣ. 

ಗೇಟ್​ ಮುರಿದ ಸುದ್ದಿ ತಿಳಿದು ಡಿಕೆ ಶಿವಕುಮಾರ್​ ಇಂದು ತುಂಗಭದ್ರ ಜಲಾಶಯಕ್ಕೆ ಭೇಟಿ ನೀಡಿದ್ದರು. ಭೇಟಿ ನಂತರ ಪರಿಸ್ಥಿತಿಯನ್ನು ಪರಿಶೀಲಿಸಿದ ನೀರು ಹರಿದು ಹೋಗುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಗೇಟ್​​ ಮುರಿದು ನೀರು ಹರಿದು ಹೊರಟಿದೆಯಾ? ಎಂಬ ಅನುಮಾನಗಳು ಜನರಿಗೆ ಕಾಡುತ್ತಿವೆ. ಮಧ್ಯ ಕರ್ನಾಟಕದ ಜೀವನದಿ ಆಗಿರವ ತುಂಗಭದ್ರ ಜಲಾಶಯ ಲಕ್ಷಾಂತರ ರೈತರ ಬದುಕಿನ ಜೀವನಾಡಿ ಆಗಿದೆ. ಮೂರು ರಾಜ್ಯಗಳ ರೈತರಿಗೆ ಅವಶ್ಯವಾಗಿರುವಂತಹದ್ದು. ಇಷ್ಟೊಂದು ಮಹತ್ವದ ಜಲಾಶಯ ನಿರ್ವಹಣೆ ನಿರ್ಲಕ್ಷಿಸಿದ್ದು ಏಕೆ ಎಂದು ರೈತರು ಆಕ್ರೋಶಗೊಂಡಿದ್ದಾರೆ. 

ತುಂಗಭದ್ರಾ ಜಲಾಶಯ ಚೈನ್‌ಲಿಂಕ್ ದುರಸ್ತಿಗೆ ಇನ್ನೂ 4-5 ದಿನಗಳು ಬೇಕು; ಡಿಸಿಎಂ ಡಿ.ಕೆ. ಶಿವಕುಮಾರ

ತುಂಗಭದ್ರ ಜಲಾಶಯದ ಗೇಟ್​ ಮುರಿದ ಪರಿಣಾಮ ಹೆಚ್ಚಿನ ಪ್ರಮಾಣದ ನೀರು ಹರಿದು ಹೊರಟಿದೆ. ಹೀಗಾಗಿ ನದಿ ಪಕ್ಕದ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಸರ್ಕಾರ ಆದಷ್ಟು ಬೇಗ ಹೊಸ ಗೇಟ್​ ಅಳವಡಿಸಲಿ ಎಂದು ರೈತರು ಕೇಳಿಕೊಳ್ಳುತ್ತಿದ್ದಾರೆ. ಇದೀಗ ಜಲಾಶಯದ ಡಿಸೈನ್ ಅನ್ನು ಗುತ್ತಿಗೆದಾರರಿಗೆ ನೀಡಲಾಗಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ದುರಸ್ತಿ ಕಾರ್ಯ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಾರ್ ಮಾಹಿತಿ ನೀಡಿದ್ದಾರೆ..

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more