ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?

ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?

Published : Aug 12, 2024, 11:49 AM IST

ಹೊಸಪೇಟೆ ನಗರದ ಬಳಿಯಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟಿನ ಚೈನ್ ಲಿಂಕ್ ಮುರಿದು ಹೋಗಲು ಕಾರಣ ಇಲ್ಲಿದೆ ನೋಡಿ..

ಬೆಂಗಳೂರು (ಆ.12): ಹೊಸಪೇಟೆಯಲ್ಲಿರುವ ತುಂಗಭದ್ರ ಜಲಾಶಯದ ಕ್ರಸ್ಟ್‌ ಗೇಟ್​​ 19ರ ಚೈನ್ ಲಿಂಕ್​ ಕಟ್ಟಾಗಿದೆ. ಇದರ ಪರಿಣಾಮ ಗೇಟ್​ ಮುರಿದು ನದಿಗೆ ದೊಡ್ಡ  ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ಜಲಾಶಯ ಭರ್ತಿಯಾದ ಖುಷಿಯಲ್ಲಿದ್ದ ಜನತೆಗೆ ಇದು ದೊಡ್ಡ ಶಾಕಾಗಿದೆ. ಹಾಗಿದ್ದರೆ ಗೇಟ್​​ ಸರಿ ಪಡಿಸುವಷ್ಟರಲ್ಲಿ ಎಷ್ಟು ಪ್ರಮಾಣದ ನೀರು ಹರಿದು ಹೋಗಲಿದೆ? ಇದರಿಂದ ಏನೆಲ್ಲ ತೊಂದರೆಯಾಗಲಿದೆ ಅನ್ನೋದನ್ನು ಇಲ್ಲಿ ನೋಡೋಣ. 

ಗೇಟ್​ ಮುರಿದ ಸುದ್ದಿ ತಿಳಿದು ಡಿಕೆ ಶಿವಕುಮಾರ್​ ಇಂದು ತುಂಗಭದ್ರ ಜಲಾಶಯಕ್ಕೆ ಭೇಟಿ ನೀಡಿದ್ದರು. ಭೇಟಿ ನಂತರ ಪರಿಸ್ಥಿತಿಯನ್ನು ಪರಿಶೀಲಿಸಿದ ನೀರು ಹರಿದು ಹೋಗುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಗೇಟ್​​ ಮುರಿದು ನೀರು ಹರಿದು ಹೊರಟಿದೆಯಾ? ಎಂಬ ಅನುಮಾನಗಳು ಜನರಿಗೆ ಕಾಡುತ್ತಿವೆ. ಮಧ್ಯ ಕರ್ನಾಟಕದ ಜೀವನದಿ ಆಗಿರವ ತುಂಗಭದ್ರ ಜಲಾಶಯ ಲಕ್ಷಾಂತರ ರೈತರ ಬದುಕಿನ ಜೀವನಾಡಿ ಆಗಿದೆ. ಮೂರು ರಾಜ್ಯಗಳ ರೈತರಿಗೆ ಅವಶ್ಯವಾಗಿರುವಂತಹದ್ದು. ಇಷ್ಟೊಂದು ಮಹತ್ವದ ಜಲಾಶಯ ನಿರ್ವಹಣೆ ನಿರ್ಲಕ್ಷಿಸಿದ್ದು ಏಕೆ ಎಂದು ರೈತರು ಆಕ್ರೋಶಗೊಂಡಿದ್ದಾರೆ. 

ತುಂಗಭದ್ರಾ ಜಲಾಶಯ ಚೈನ್‌ಲಿಂಕ್ ದುರಸ್ತಿಗೆ ಇನ್ನೂ 4-5 ದಿನಗಳು ಬೇಕು; ಡಿಸಿಎಂ ಡಿ.ಕೆ. ಶಿವಕುಮಾರ

ತುಂಗಭದ್ರ ಜಲಾಶಯದ ಗೇಟ್​ ಮುರಿದ ಪರಿಣಾಮ ಹೆಚ್ಚಿನ ಪ್ರಮಾಣದ ನೀರು ಹರಿದು ಹೊರಟಿದೆ. ಹೀಗಾಗಿ ನದಿ ಪಕ್ಕದ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಸರ್ಕಾರ ಆದಷ್ಟು ಬೇಗ ಹೊಸ ಗೇಟ್​ ಅಳವಡಿಸಲಿ ಎಂದು ರೈತರು ಕೇಳಿಕೊಳ್ಳುತ್ತಿದ್ದಾರೆ. ಇದೀಗ ಜಲಾಶಯದ ಡಿಸೈನ್ ಅನ್ನು ಗುತ್ತಿಗೆದಾರರಿಗೆ ನೀಡಲಾಗಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ದುರಸ್ತಿ ಕಾರ್ಯ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಾರ್ ಮಾಹಿತಿ ನೀಡಿದ್ದಾರೆ..

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more