ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?

ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?

Published : Aug 22, 2025, 02:36 PM IST

ಧರ್ಮಸ್ಥಳ ವಿರೋಧಿ ಗ್ಯಾಂಗ್​ನ ಲೀಡರ್​ ತಿಮರೋಡಿ ಮತ್ತು AI ವಿಡಿಯೋಗಳಿಂದ ಜನರನ್ನು ಹುಚ್ಚೆಬ್ಬಿಸಿದ ಅವನ ಶಿಷ್ಯನ ಕಥೆ. ಧರ್ಮಸ್ಥಳಕ್ಕೆ ಕಪ್ಪು ಮಸಿ ಬಳಿಯಲು ಯತ್ನಿಸಿದ ಇವರಿಬ್ಬರ ಬಣ್ಣ ಈಗ ಬಯಲಾಗಿದೆ. ಸುಜಾತಾ ಭಟ್​​ಳ ಷಡ್ಯಂತ್ರ ವಿಫಲವಾಗಿದೆ. ಇವರ ಮುಂದಿನ ನಡೆ ಏನು?

ಆತ ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಲೀಡರ್​.. ಧರ್ಮಸ್ಥಳಕ್ಕೇ ಜೆಸಿಬಿ ನುಗ್ಗಿಸುತ್ತೇನೆ ಅಂದವನು.. ಇವತ್ತು ಅವನದ್ದೇ ಹರಕಲು ಬಾಯಿಯಿಂದ ಪೊಲೀಸರ ಅತಿಥಿಯಾಗಿದ್ದಾನೆ.. ಇನ್ನೂ ಮತ್ತೊಬ್ಬ ಅವನ ಶಿಷ್ಯ.. AI ವಿಡಿಯೋಗಳಿಂದಲೇ ಏನೂ ಗೊತ್ತಿಲ್ಲದ ಜನರನ್ನ ಹುಚ್ಚೆಬ್ಬಿಸಿದ್ದ.. ಇವರಿಬ್ಬರೂ ಸೇರಿಕೊಂದು ಧರ್ಮಸ್ಥಳಕ್ಕೆ ಹೇಗೆಲ್ಲಾ ಕಪ್ಪು ಮಸಿ ಬಳೆಯಬಹುದೋ ಹಾಗೆಲ್ಲಾ ಬಳೆದುಬಿಟ್ಟಿದ್ರು.. ಆದ್ರಿವತ್ತು ಅದೇ ಗ್ಯಾಂಗ್​ನ ಲೀಡರ್​​ ಅರೆಸ್ಟ್​​ ಆದ್ರೆ ಮತ್ತೊಬ್ಬ ಎಸ್ಕೆಪ್​ ಆಗಿ ಕೋರ್ಟ್​ ಮೊರೆ ಹೋಗಿದ್ದ.. ಸದ್ಯ ಜಾಮೀನು ಪಡೆದುಕೊಂಡಿದ್ದಾನೆ.. ಅಷ್ಟಕ್ಕೂ ಅವರಿಬ್ಬರ ಮೇಲೆ ಪೊಲೀಸರ ಕಣ್ಣು ಬಿದ್ದಿದ್ದೇಕೆ..? ಈ ಹರಕಲು ಬಾಯಿಯ ತಿಮರೋಡಿ ಇವತ್ತು ಮಾಡಿದ ಹೈಡ್ರಾಮ ಹೇಗಿತ್ತು.? ಇದೆಲ್ಲವನ್ನ ತಿಳಿದುಕೊಳ್ಳೋದೇ ಇವತ್ತಿನ ಎಫ್​​.ಐ.ಆರ್​​

ಒಂದೆಡೆ ಬುರುಡೆ ಗ್ಯಾಂಗ್​ಗೆ ಕಾನೂನು ಕುಣಿಕೆ ಬಿಗಿಯಾಗುತ್ತಿದ್ರೆ, ಮತ್ತೊಂದೆಡೆ ಧರ್ಮಸ್ಥಳದ ಪರ ರಾಜ್ಯವ್ಯಾಪಿ ಬೆಂಬಲ ವ್ಯಕ್ತವಾಗುತ್ತಿದೆ. ಇನ್ನೂ ತಿಮರೋಡಿ ಮತ್ತು ಸಮೀರ್​​ ಕಥೆ ಇದಾದ್ರೆ ಇನ್ನೂ ಮ್ಯಾಜಿಕ್​ ಅಜ್ಜಿ ಸುಜಾತಾ ಭಟ್​​ ಕಥೆ ಇನ್ನೂ ಬಾಕಿ​ ಇದೆ.. ಈ ಬಗ್ಗೆ ಮತ್ತಷ್ಟು ರೋಚಕ ಸಂಗತಿಗಳನ್ನ ನಮ್ಮ ಟೀಂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರತಂದಿದೆ.

ನನ್ನ ಮಗಳ ಅಸ್ತಿಪಂಜರ ಹುಡುಕಿಕೊಡಿ ಅಂತ ಬಂದಿದ್ದ ಸುಜಾತಾ ಭಟ್​​​ ಅಸಲಿಯತ್ತನ್ನ ನಾವೇ ಬಯಲು ಮಾಡಿದ್ದೇವೆ.. ಯಾರದ್ದೋ ಫೋಟೋ ತಂದು ನನ್ನ ಮಗಳು ಅಂದಿದ್ದ ಸುಜಾತಾ ಭಟ್​​ಳ ಪ್ರತಿಯೊಂದು ಷಡ್ಯಂತ್ರ ಕೂಡ ಈಗ ವಿಫಲವಾಗಿದೆ.. ಆದ್ರೆ ಈಗ ಇಲ್ಲದೇ ಇರೋ ಅನನ್ಯ ಭಟ್​​ ಕ್ಯಾರೆಕ್ಟರ್​​ ಹುಟ್ಟಿಕೊಂಡಿದ್ದು ಎಲ್ಲಿ ಮತ್ತು ಹೇಗೆ ಅನ್ನೋ ವಿಷಯ ಕೂಡ ಬಯಲಾಗಿದೆ.. ಐನಾತಿ ಅಜ್ಜಿ ಕಥೆ ಹೇಳಿದ್ರೆ.. ತಿಮರೋಡಿ ಚಿತ್ರಕಥೆ ಬರೆದಿದ್ದ ಇನ್ನೂ AI ಸಮೀರ ಕಥೆಗೆ ಗ್ರಾಫಿಕ್ಸ್​​ ಟಚ್​ ಕೊಟ್ಟಿದ್ದ.. ಅಷ್ಟೇ ಅಲ್ಲ.. ಸಾವಿರಾರು ಹೆಣಗಳನ್ನ ಹೂತಿದ್ದೇನೆ ಅಂತ ಬಂದಿರೋ ಅನಾಮಿಕನ ಬಣ್ಣವೂ ಬಯಲಾಗಿದೆ.

ಬುರುಡೆ ಬಯಲಾಟದಲ್ಲಿ ಪಾತ್ರಧಾರಿಗಳ ಅಸಲಿಯತ್ತು ಈಗ ಹೊರಬರುತ್ತಿದೆ. ಈ ಕಪಟ ನಾಟಕಕ್ಕೆ ತೆರೆ ಬೀಳುವ ಎಲ್ಲ ಲಕ್ಷಣಗಳು ಕಾಣ್ತಿವೆ.. ಟೆಂಪಲ್​ಟೌನ್​ ಮೇಲೆ ಕವಿದಿದ್ದ ಅಪಪ್ರಚಾರ, ಗುಮಾನಿಗಳ ಕಾರ್ಮೋಡ ಸರಿದು ಸತ್ಯದರ್ಶನವಾಗಲಿ.. ಭಕ್ತರ ಆತಂಕ, ದುಗುಡಗಳೆಲ್ಲ ದೂರವಾಗಲಿ ಈ ಎಲ್ಲದರ ಸಂಪೂರ್ಣ ಡಿಟೇಲ್ ವೀಡಿಯೋದಲ್ಲಿದೆ ನೋಡಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more