ಕೊಡಗು- ಮಡಿಕೇರಿಯಲ್ಲಿ ಕಂಡು ಕೇಳರಿಯದ ಮೇಘಸ್ಪೋಟ,  ಭೂಕುಸಿತ ಕಂಟಕ

ಕೊಡಗು- ಮಡಿಕೇರಿಯಲ್ಲಿ ಕಂಡು ಕೇಳರಿಯದ ಮೇಘಸ್ಪೋಟ, ಭೂಕುಸಿತ ಕಂಟಕ

Published : Aug 05, 2022, 04:50 PM IST

ಜೂನ್‌ ಅಂತ್ಯದ ವೇಳೆ 10ಕ್ಕೂ ಹೆಚ್ಚು ಬಾರಿ ಕೊಡಗು- ಮಡಿಕೇರಿಯಲ್ಲಿ ಭೂಕಂಪವಾಗಿದೆ. ಈಗ ಅತಿವೃಷ್ಟಿಯಿಂದ ಗುಡ್ಡ ಕುಸಿತ, ಮನೆ ಮೇಲೆ ಗುಡ್ಡ ಬಂದು ಎರಗುವುದು, ಮನೆಗಳಿಗೆ ನೀರು ನುಗ್ಗುತ್ತಿದೆ. ಇಲ್ಲಿನ ಜನರು ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿದ್ದಾರೆ.

 ಜೂನ್‌ ಅಂತ್ಯದ ವೇಳೆ 10ಕ್ಕೂ ಹೆಚ್ಚು ಬಾರಿ ಕೊಡಗು- ಮಡಿಕೇರಿಯಲ್ಲಿ ಭೂಕಂಪವಾಗಿದೆ. ಈಗ ಅತಿವೃಷ್ಟಿಯಿಂದ ಗುಡ್ಡ ಕುಸಿತ, ಮನೆ ಮೇಲೆ ಗುಡ್ಡ ಬಂದು ಎರಗುವುದು, ಮನೆಗಳಿಗೆ ನೀರು ನುಗ್ಗುತ್ತಿದೆ. ಇಲ್ಲಿನ ಜನರು ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿದ್ದಾರೆ. ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಈ ಗಡಿಪ್ರದೇಶದಲ್ಲಿ ಸುರಿದ ಭಾರಿ ಮಳೆಗೆ ಗುಡ್ಡದಿಂದ ಭಾರೀ ಸದ್ದಿನೊಂದಿಗೆ ಏಕಾಏಕಿ ಕೆಸರು ಮಿಶ್ರಿತ ಜಲರಾಶಿ ನುಗ್ಗಿ ಅಪಾರ ಹಾನಿಯಾಗಿದೆ. ಈ ಭಾಗದಲ್ಲಿ ಅರ್ಧ ಎಕರೆಯಷ್ಟುವಿಶಾಲ ಪ್ರದೇಶದಲ್ಲಿ ಭಾರೀ ಭೂಪ್ರದೇಶ ಕುಸಿತವಾಗಿದೆ. ಭೂಮಿ ಕೆಸರಿನಂತಾಗಿ ಹರಿದು ಹೋಗಿದೆ. ಕೆಸರು ನೀರಿನಿಂದ 150 ರಬ್ಬರ್‌ ಮರಗಳು, 150 ಕಾಫಿ ಗಿಡ, 40ಕ್ಕೂ ಅಧಿಕ ಅಡಕೆ ಮರಗಳು ಸಂಪೂರ್ಣ ನಾಶವಾಗಿವೆ.

‘ನಾವು ಇಲ್ಲಿ ಹುಟ್ಟಿ, ಬೆಳೆದು ಇಷ್ಟುವರ್ಷವಾದರೂ ಇಂಥ ಅನುಭವ ಯಾವತ್ತೂ ಆಗಿಲ್ಲ. ಸ್ಫೋಟದ ಸದ್ದಿನೊಂದಿಗೆ ಪ್ರವಾಹದ ರೀತಿಯಲ್ಲಿ ಬೆಟ್ಟದಿಂದ ಕೆಸರು ನೀರು ಹರಿದು ಬರುವ ಇಂಥ ಕಂಡು ಕೇಳರಿಯದ ವಿದ್ಯಮಾನ ನಾವು ಈವರೆಗೆ ನೋಡೇ ಇಲ್ಲ. ವಿಚಿತ್ರವಾದ ಈ ಬೆಳವಣಿಗೆ ಕಾರಣ ಏನು? ಈ ರೀತಿ ನೀರು ಎಲ್ಲಿಂದ ಬರುತ್ತಿದೆ? ಆ ರೀತಿ ಸದ್ದು ಯಾಕಾಗುತ್ತಿದೆ ಎಂಬುದನ್ನು ವಿಜ್ಞಾನಿಗಳೇ ಹೇಳಬೇಕು’

- ಇದು ಕೊಡಗು ಜಿಲ್ಲೆಯ ಮಡಿಕೇರಿ ಜಿಲ್ಲೆಯ ಚೆಂಬು ಗ್ರಾಮದ ಸಮೀಪದ ದಬ್ಬಡ್ಕದಲ್ಲಿ ಉಂಟಾಗಿರುವ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾಗಿರುವ ಬಾಲಕೃಷ್ಣ ಮತ್ತು ದೇವಕಿ ದಂಪತಿ ಮಾತು. ಕಂಡು ಕೇಳರಿಯದ ಮೇಘಸ್ಪೋಟಕ್ಕೆ ಸಾಕ್ಷಿಯಾಗುತ್ತಿದೆ ಕೊಡಗು- ಮಡಿಕೇರಿ. ಇದಕ್ಕೆ ಕಾರಣವೇನು..? 


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more