ಕೊಡಗು- ಮಡಿಕೇರಿಯಲ್ಲಿ ಕಂಡು ಕೇಳರಿಯದ ಮೇಘಸ್ಪೋಟ,  ಭೂಕುಸಿತ ಕಂಟಕ

ಕೊಡಗು- ಮಡಿಕೇರಿಯಲ್ಲಿ ಕಂಡು ಕೇಳರಿಯದ ಮೇಘಸ್ಪೋಟ, ಭೂಕುಸಿತ ಕಂಟಕ

Published : Aug 05, 2022, 04:50 PM IST

ಜೂನ್‌ ಅಂತ್ಯದ ವೇಳೆ 10ಕ್ಕೂ ಹೆಚ್ಚು ಬಾರಿ ಕೊಡಗು- ಮಡಿಕೇರಿಯಲ್ಲಿ ಭೂಕಂಪವಾಗಿದೆ. ಈಗ ಅತಿವೃಷ್ಟಿಯಿಂದ ಗುಡ್ಡ ಕುಸಿತ, ಮನೆ ಮೇಲೆ ಗುಡ್ಡ ಬಂದು ಎರಗುವುದು, ಮನೆಗಳಿಗೆ ನೀರು ನುಗ್ಗುತ್ತಿದೆ. ಇಲ್ಲಿನ ಜನರು ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿದ್ದಾರೆ.

 ಜೂನ್‌ ಅಂತ್ಯದ ವೇಳೆ 10ಕ್ಕೂ ಹೆಚ್ಚು ಬಾರಿ ಕೊಡಗು- ಮಡಿಕೇರಿಯಲ್ಲಿ ಭೂಕಂಪವಾಗಿದೆ. ಈಗ ಅತಿವೃಷ್ಟಿಯಿಂದ ಗುಡ್ಡ ಕುಸಿತ, ಮನೆ ಮೇಲೆ ಗುಡ್ಡ ಬಂದು ಎರಗುವುದು, ಮನೆಗಳಿಗೆ ನೀರು ನುಗ್ಗುತ್ತಿದೆ. ಇಲ್ಲಿನ ಜನರು ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿದ್ದಾರೆ. ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಈ ಗಡಿಪ್ರದೇಶದಲ್ಲಿ ಸುರಿದ ಭಾರಿ ಮಳೆಗೆ ಗುಡ್ಡದಿಂದ ಭಾರೀ ಸದ್ದಿನೊಂದಿಗೆ ಏಕಾಏಕಿ ಕೆಸರು ಮಿಶ್ರಿತ ಜಲರಾಶಿ ನುಗ್ಗಿ ಅಪಾರ ಹಾನಿಯಾಗಿದೆ. ಈ ಭಾಗದಲ್ಲಿ ಅರ್ಧ ಎಕರೆಯಷ್ಟುವಿಶಾಲ ಪ್ರದೇಶದಲ್ಲಿ ಭಾರೀ ಭೂಪ್ರದೇಶ ಕುಸಿತವಾಗಿದೆ. ಭೂಮಿ ಕೆಸರಿನಂತಾಗಿ ಹರಿದು ಹೋಗಿದೆ. ಕೆಸರು ನೀರಿನಿಂದ 150 ರಬ್ಬರ್‌ ಮರಗಳು, 150 ಕಾಫಿ ಗಿಡ, 40ಕ್ಕೂ ಅಧಿಕ ಅಡಕೆ ಮರಗಳು ಸಂಪೂರ್ಣ ನಾಶವಾಗಿವೆ.

‘ನಾವು ಇಲ್ಲಿ ಹುಟ್ಟಿ, ಬೆಳೆದು ಇಷ್ಟುವರ್ಷವಾದರೂ ಇಂಥ ಅನುಭವ ಯಾವತ್ತೂ ಆಗಿಲ್ಲ. ಸ್ಫೋಟದ ಸದ್ದಿನೊಂದಿಗೆ ಪ್ರವಾಹದ ರೀತಿಯಲ್ಲಿ ಬೆಟ್ಟದಿಂದ ಕೆಸರು ನೀರು ಹರಿದು ಬರುವ ಇಂಥ ಕಂಡು ಕೇಳರಿಯದ ವಿದ್ಯಮಾನ ನಾವು ಈವರೆಗೆ ನೋಡೇ ಇಲ್ಲ. ವಿಚಿತ್ರವಾದ ಈ ಬೆಳವಣಿಗೆ ಕಾರಣ ಏನು? ಈ ರೀತಿ ನೀರು ಎಲ್ಲಿಂದ ಬರುತ್ತಿದೆ? ಆ ರೀತಿ ಸದ್ದು ಯಾಕಾಗುತ್ತಿದೆ ಎಂಬುದನ್ನು ವಿಜ್ಞಾನಿಗಳೇ ಹೇಳಬೇಕು’

- ಇದು ಕೊಡಗು ಜಿಲ್ಲೆಯ ಮಡಿಕೇರಿ ಜಿಲ್ಲೆಯ ಚೆಂಬು ಗ್ರಾಮದ ಸಮೀಪದ ದಬ್ಬಡ್ಕದಲ್ಲಿ ಉಂಟಾಗಿರುವ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾಗಿರುವ ಬಾಲಕೃಷ್ಣ ಮತ್ತು ದೇವಕಿ ದಂಪತಿ ಮಾತು. ಕಂಡು ಕೇಳರಿಯದ ಮೇಘಸ್ಪೋಟಕ್ಕೆ ಸಾಕ್ಷಿಯಾಗುತ್ತಿದೆ ಕೊಡಗು- ಮಡಿಕೇರಿ. ಇದಕ್ಕೆ ಕಾರಣವೇನು..? 


 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more