ಪಾದರಾಯನಪುರ ಗಲಾಟೆ ನಡೆಯುತ್ತಿದ್ಧಾಗ ಶಾಸಕ ಜಮೀರ್ ಖಾನ್ ಎಲ್ಲಿದ್ರು?

Apr 20, 2020, 11:48 AM IST

ಬೆಂಗಳೂರು (ಏ. 20): ಪಾದರಾಯನಪುರದಲ್ಲಿ ಗಲಾಟೆ ನಡೆಯುತ್ತಿದ್ದಾಗ ಶಾಸಕ ಜಮೀರ್ ಅಹ್ಮದ್ ಖಾನ್ ಎಲ್ಲಿದ್ದರು? ಎಂಬ ಪ್ರಶ್ನೆಗೆ ಬಿಜೆಪಿ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು ಎಂದು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. 

ಪಾದರಾಯನಪುರ ಹಿಂಸಾಚಾರ ಬೆನ್ನಲ್ಲೇ ಶಾಸಕ ಜಮೀರ್ ಅಹ್ಮದ್ ಟ್ವೀಟ್!

ಪಾದರಾಯನಪುರದಲ್ಲಿ 50 ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಗೆ ಬನ್ನಿ ಎಂದು ಕರೆಯಲು ಹೋದ ಆರೋಗ್ಯ ಸಿಬ್ಬಂದಿ ಮೇಲೆ ಅಲ್ಲಿನ ಸ್ಥಳೀಯರು ಗೂಂಡಾಗಿರಿ ನಡೆಸಿದ್ದಾರೆ. ಘಟನೆ ತೀವ್ರ ಸ್ವರೂಪ ಪಡೆದುಕೊಂಡರೂ ಶಾಸಕ ಜಮೀರ್ ಖಾನ್ ಮಾತ್ರ ಪತ್ತೆಯೇ ಇರಲಿಲ್ಲ.