Hijab Row: ಹಿಜಾಬ್‌ಗೆ ಪಟ್ಟು ಹಿಡಿದ 6 ಮಂದಿಗೆ ಗುಪ್ತ ತರಬೇತಿ ನೀಡಲಾಗಿತ್ತಾ.?

Hijab Row: ಹಿಜಾಬ್‌ಗೆ ಪಟ್ಟು ಹಿಡಿದ 6 ಮಂದಿಗೆ ಗುಪ್ತ ತರಬೇತಿ ನೀಡಲಾಗಿತ್ತಾ.?

Published : Feb 10, 2022, 05:18 PM ISTUpdated : Feb 10, 2022, 05:29 PM IST

ಹಿಜಾಬ್ VS ಕೇಸರಿ ಸಂಘರ್ಷ ಇಡೀ ದೇಶದ ಗಮನ ಸೆಳೆಯುತ್ತಿದೆ. ವಿವಾದ ಸಂಘರ್ಷದ ಸ್ವರೂಪ ಪಡೆದಿದೆ. ಈ ಗಲಾಟೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. 

ಹಿಜಾಬ್ VS ಕೇಸರಿ (Hijab VS Saffron Row)  ಸಂಘರ್ಷ ಇಡೀ ದೇಶದ ಗಮನ ಸೆಳೆಯುತ್ತಿದೆ. ವಿವಾದ ಸಂಘರ್ಷದ ಸ್ವರೂಪ ಪಡೆದಿದೆ. ಈ ಗಲಾಟೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. 

ಕಾಲೇಜಿನಲ್ಲಿ ಹಿಜಾಬ್‌ ಧರಿಸುವಂತೆ ಪಟ್ಟು ಹಿಡಿದಿರುವ 6 ಮಂದಿ ವಿದ್ಯಾರ್ಥಿಗಳಿಗೆ, ಮೊದಲು ಗುಪ್ತ ತರಬೇತಿ ನೀಡಿ ಬ್ರೈನ್‌ ವಾಶ್‌ ಮಾಡಲಾಗಿತ್ತು. ಸಂಘಟನೆಯೊಂದು ಈ ಕಾಲೇಜಿನ 12 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಲು ಪಟ್ಟು ಹಿಡಿಯಲು ಗುಪ್ತ ಸ್ಥಳದಲ್ಲಿ ತರಬೇತಿ ನೀಡಿದೆ. ಆದರೆ ಅವರಲ್ಲಿ 6 ವಿದ್ಯಾರ್ಥಿನಿಯರ ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣವೇ ಮುಖ್ಯ ಎಂದು ಹೇಳಿ ಹಿಜಾಬ್‌ ಧರಿಸದೇ ಮಕ್ಕಳನ್ನು ಕಾಲೇಜಿಗೆ ಕಳುಹಿಸಿದರು. ಇನ್ನುಳಿದ 6 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಕೊಂಡು ಬಂದು ವಿವಾದ ಸೃಷ್ಟಿಸಿದ್ದಾರೆ. ಅವರು ಕಾಲೇಜಿಗೆ ಪ್ರವೇಶ ಪಡೆದ ಆರಂಭದಲ್ಲಿ ಹಿಜಾಬ್‌ ಧರಿಸುತ್ತಿರಲಿಲ್ಲ. ಈ ಬಗ್ಗೆ ತಮ್ಮಲ್ಲಿ ಫೋಟೋ ಸಾಕ್ಷಿಗಳಿವೆ. ಈ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್‌ ಹೇಳಿದ್ದಾರೆ.

ಹಿಜಾಬ್‌ ವಿವಾದದ ಬಗ್ಗೆ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಏಕಕಾಲದಲ್ಲಿ ಕೇಸರಿ ಶಾಲು ಪೇಟ ಧರಿಸಿ, ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತಾ ಗಲಭೆ ನಡೆಸಿದ್ದು ಸಂಘ ಪರಿವಾರದ ಷಡ್ಯಂತ್ರವಾಗಿದೆ ಎಂದು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾದ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆಆರೋಪಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more