Mekedatu Project : ರಾಜ್ಯದ ಹಿತದೃಷ್ಟಿಯಿಂದ ಪಾದಯಾತ್ರೆ ಮಾಡ್ತೇವೆ ಎಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

Mekedatu Project : ರಾಜ್ಯದ ಹಿತದೃಷ್ಟಿಯಿಂದ ಪಾದಯಾತ್ರೆ ಮಾಡ್ತೇವೆ ಎಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

Suvarna News   | Asianet News
Published : Dec 30, 2021, 11:27 PM IST

ಮೇಕೆದಾಟು ಯೋಜನೆ ಆಗ್ರಹಿಸಿ ಜ.9 ರಿಂದ ಕಾಂಗ್ರೆಸ್ ಪಾದಯಾತ್ರೆ
ಇದು ಅಪ್ಪಟವಾಗಿ ಕುಡಿಯುವ ನೀರಿನ ಯೋಜನೆ
ರಾಜಕೀಯ ಕಾರಣಗಳಿಗಾಗಿ ತಮಿಳುನಾಡಿನಿಂದ ವಿರೋಧ

ಬೆಂಗಳೂರು (ಡಿ. 30): ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಜನವರಿ 9 ರಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಕುರಿತಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮೇಕೆದಾಟು ಯೋಜನೆ ಅಪ್ಪಟ ಕುಡಿಯುವ ನೀರಿನ ಯೋಜನೆ ಅದರೊಂದಿಗೆ ವಿದ್ಯುತ್ ಉತ್ಪಾದನೆ ಮಾಡುವ ಯೋಚನೆಯೂ ಇದೆ. ವಿಶೇಷವಾಗಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸಿಕೊಡುವುದು ಮೂಲ ಉದ್ದೇಶ ಎಂದರು. ಇಂದು ಬೆಂಗಳೂರಿನಲ್ಲಿ ಶೇ. 30ರಷ್ಟು ಜನರಿಗೆ ಕಾವೇರಿ ನೀರು ಸಿಗುವುದಿಲ್ಲ. ಈ ಯೋಜನೆಯ ಬಗ್ಗೆ ಸಂಪೂರ್ಣ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ. ಇದಕ್ಕೆ ಅವರಿಂದ ಒಪ್ಪಿಗೆ ಬೇಕಿದೆ. ಒಟ್ಟಾರೆ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು. 

Mekedatu Padayatre: ಕರ್ನಾಟಕ ಚಲನಚಿತ್ರ‌ ವಾಣಿಜ್ಯ ಮಂಡಳಿಗೆ ಡಿ.ಕೆ.ಶಿವಕುಮಾರ್‌ ಭೇಟಿ
ಈ ಯೋಜನೆಯಿಂದಾಗಿ ಮಳೆ ಕಡಿಮೆ ಇದ್ದಂಥ ವರ್ಷಗಳಲ್ಲಿ ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕೊಡಬೇಕಾದಂಥ ನೀರನ್ನು ಮಳೆಗಾಲದಲ್ಲಿ ಶೇಖರಣೆ ಮಾಡಿ ಕೊಡಲು ಇದರಿಂದ ಸಾಧ್ಯವಾಗುತ್ತದೆ. ತಮಿಳುನಾಡಿಗೆ ಒಂಚೂರು ಹಾನಿ ಇದರಿಂದ ಆಗುವುದಿಲ್ಲ. ಇದು ಅವರಿಗೂ ಲಾಭ ತರುವ ಯೋಜನೆ. ಆದರೆ, ರಾಜಕೀಯ ಕಾರಣಗಳಿಗಾಗಿ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more