Mekedatu Project : ರಾಜ್ಯದ ಹಿತದೃಷ್ಟಿಯಿಂದ ಪಾದಯಾತ್ರೆ ಮಾಡ್ತೇವೆ ಎಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

Mekedatu Project : ರಾಜ್ಯದ ಹಿತದೃಷ್ಟಿಯಿಂದ ಪಾದಯಾತ್ರೆ ಮಾಡ್ತೇವೆ ಎಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

Suvarna News   | Asianet News
Published : Dec 30, 2021, 11:27 PM IST

ಮೇಕೆದಾಟು ಯೋಜನೆ ಆಗ್ರಹಿಸಿ ಜ.9 ರಿಂದ ಕಾಂಗ್ರೆಸ್ ಪಾದಯಾತ್ರೆ
ಇದು ಅಪ್ಪಟವಾಗಿ ಕುಡಿಯುವ ನೀರಿನ ಯೋಜನೆ
ರಾಜಕೀಯ ಕಾರಣಗಳಿಗಾಗಿ ತಮಿಳುನಾಡಿನಿಂದ ವಿರೋಧ

ಬೆಂಗಳೂರು (ಡಿ. 30): ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಜನವರಿ 9 ರಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಕುರಿತಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮೇಕೆದಾಟು ಯೋಜನೆ ಅಪ್ಪಟ ಕುಡಿಯುವ ನೀರಿನ ಯೋಜನೆ ಅದರೊಂದಿಗೆ ವಿದ್ಯುತ್ ಉತ್ಪಾದನೆ ಮಾಡುವ ಯೋಚನೆಯೂ ಇದೆ. ವಿಶೇಷವಾಗಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸಿಕೊಡುವುದು ಮೂಲ ಉದ್ದೇಶ ಎಂದರು. ಇಂದು ಬೆಂಗಳೂರಿನಲ್ಲಿ ಶೇ. 30ರಷ್ಟು ಜನರಿಗೆ ಕಾವೇರಿ ನೀರು ಸಿಗುವುದಿಲ್ಲ. ಈ ಯೋಜನೆಯ ಬಗ್ಗೆ ಸಂಪೂರ್ಣ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ. ಇದಕ್ಕೆ ಅವರಿಂದ ಒಪ್ಪಿಗೆ ಬೇಕಿದೆ. ಒಟ್ಟಾರೆ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು. 

Mekedatu Padayatre: ಕರ್ನಾಟಕ ಚಲನಚಿತ್ರ‌ ವಾಣಿಜ್ಯ ಮಂಡಳಿಗೆ ಡಿ.ಕೆ.ಶಿವಕುಮಾರ್‌ ಭೇಟಿ
ಈ ಯೋಜನೆಯಿಂದಾಗಿ ಮಳೆ ಕಡಿಮೆ ಇದ್ದಂಥ ವರ್ಷಗಳಲ್ಲಿ ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕೊಡಬೇಕಾದಂಥ ನೀರನ್ನು ಮಳೆಗಾಲದಲ್ಲಿ ಶೇಖರಣೆ ಮಾಡಿ ಕೊಡಲು ಇದರಿಂದ ಸಾಧ್ಯವಾಗುತ್ತದೆ. ತಮಿಳುನಾಡಿಗೆ ಒಂಚೂರು ಹಾನಿ ಇದರಿಂದ ಆಗುವುದಿಲ್ಲ. ಇದು ಅವರಿಗೂ ಲಾಭ ತರುವ ಯೋಜನೆ. ಆದರೆ, ರಾಜಕೀಯ ಕಾರಣಗಳಿಗಾಗಿ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more