Mekedatu Project : ರಾಜ್ಯದ ಹಿತದೃಷ್ಟಿಯಿಂದ ಪಾದಯಾತ್ರೆ ಮಾಡ್ತೇವೆ ಎಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

Mekedatu Project : ರಾಜ್ಯದ ಹಿತದೃಷ್ಟಿಯಿಂದ ಪಾದಯಾತ್ರೆ ಮಾಡ್ತೇವೆ ಎಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

Published : Dec 30, 2021, 11:27 PM IST

ಮೇಕೆದಾಟು ಯೋಜನೆ ಆಗ್ರಹಿಸಿ ಜ.9 ರಿಂದ ಕಾಂಗ್ರೆಸ್ ಪಾದಯಾತ್ರೆ
ಇದು ಅಪ್ಪಟವಾಗಿ ಕುಡಿಯುವ ನೀರಿನ ಯೋಜನೆ
ರಾಜಕೀಯ ಕಾರಣಗಳಿಗಾಗಿ ತಮಿಳುನಾಡಿನಿಂದ ವಿರೋಧ

ಬೆಂಗಳೂರು (ಡಿ. 30): ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಜನವರಿ 9 ರಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಕುರಿತಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮೇಕೆದಾಟು ಯೋಜನೆ ಅಪ್ಪಟ ಕುಡಿಯುವ ನೀರಿನ ಯೋಜನೆ ಅದರೊಂದಿಗೆ ವಿದ್ಯುತ್ ಉತ್ಪಾದನೆ ಮಾಡುವ ಯೋಚನೆಯೂ ಇದೆ. ವಿಶೇಷವಾಗಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸಿಕೊಡುವುದು ಮೂಲ ಉದ್ದೇಶ ಎಂದರು. ಇಂದು ಬೆಂಗಳೂರಿನಲ್ಲಿ ಶೇ. 30ರಷ್ಟು ಜನರಿಗೆ ಕಾವೇರಿ ನೀರು ಸಿಗುವುದಿಲ್ಲ. ಈ ಯೋಜನೆಯ ಬಗ್ಗೆ ಸಂಪೂರ್ಣ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ. ಇದಕ್ಕೆ ಅವರಿಂದ ಒಪ್ಪಿಗೆ ಬೇಕಿದೆ. ಒಟ್ಟಾರೆ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು. 

Mekedatu Padayatre: ಕರ್ನಾಟಕ ಚಲನಚಿತ್ರ‌ ವಾಣಿಜ್ಯ ಮಂಡಳಿಗೆ ಡಿ.ಕೆ.ಶಿವಕುಮಾರ್‌ ಭೇಟಿ
ಈ ಯೋಜನೆಯಿಂದಾಗಿ ಮಳೆ ಕಡಿಮೆ ಇದ್ದಂಥ ವರ್ಷಗಳಲ್ಲಿ ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕೊಡಬೇಕಾದಂಥ ನೀರನ್ನು ಮಳೆಗಾಲದಲ್ಲಿ ಶೇಖರಣೆ ಮಾಡಿ ಕೊಡಲು ಇದರಿಂದ ಸಾಧ್ಯವಾಗುತ್ತದೆ. ತಮಿಳುನಾಡಿಗೆ ಒಂಚೂರು ಹಾನಿ ಇದರಿಂದ ಆಗುವುದಿಲ್ಲ. ಇದು ಅವರಿಗೂ ಲಾಭ ತರುವ ಯೋಜನೆ. ಆದರೆ, ರಾಜಕೀಯ ಕಾರಣಗಳಿಗಾಗಿ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more