Mekedatu Project : ರಾಜ್ಯದ ಹಿತದೃಷ್ಟಿಯಿಂದ ಪಾದಯಾತ್ರೆ ಮಾಡ್ತೇವೆ ಎಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

Mekedatu Project : ರಾಜ್ಯದ ಹಿತದೃಷ್ಟಿಯಿಂದ ಪಾದಯಾತ್ರೆ ಮಾಡ್ತೇವೆ ಎಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

Suvarna News   | Asianet News
Published : Dec 30, 2021, 11:27 PM IST

ಮೇಕೆದಾಟು ಯೋಜನೆ ಆಗ್ರಹಿಸಿ ಜ.9 ರಿಂದ ಕಾಂಗ್ರೆಸ್ ಪಾದಯಾತ್ರೆ
ಇದು ಅಪ್ಪಟವಾಗಿ ಕುಡಿಯುವ ನೀರಿನ ಯೋಜನೆ
ರಾಜಕೀಯ ಕಾರಣಗಳಿಗಾಗಿ ತಮಿಳುನಾಡಿನಿಂದ ವಿರೋಧ

ಬೆಂಗಳೂರು (ಡಿ. 30): ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಜನವರಿ 9 ರಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಕುರಿತಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮೇಕೆದಾಟು ಯೋಜನೆ ಅಪ್ಪಟ ಕುಡಿಯುವ ನೀರಿನ ಯೋಜನೆ ಅದರೊಂದಿಗೆ ವಿದ್ಯುತ್ ಉತ್ಪಾದನೆ ಮಾಡುವ ಯೋಚನೆಯೂ ಇದೆ. ವಿಶೇಷವಾಗಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸಿಕೊಡುವುದು ಮೂಲ ಉದ್ದೇಶ ಎಂದರು. ಇಂದು ಬೆಂಗಳೂರಿನಲ್ಲಿ ಶೇ. 30ರಷ್ಟು ಜನರಿಗೆ ಕಾವೇರಿ ನೀರು ಸಿಗುವುದಿಲ್ಲ. ಈ ಯೋಜನೆಯ ಬಗ್ಗೆ ಸಂಪೂರ್ಣ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ. ಇದಕ್ಕೆ ಅವರಿಂದ ಒಪ್ಪಿಗೆ ಬೇಕಿದೆ. ಒಟ್ಟಾರೆ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು. 

Mekedatu Padayatre: ಕರ್ನಾಟಕ ಚಲನಚಿತ್ರ‌ ವಾಣಿಜ್ಯ ಮಂಡಳಿಗೆ ಡಿ.ಕೆ.ಶಿವಕುಮಾರ್‌ ಭೇಟಿ
ಈ ಯೋಜನೆಯಿಂದಾಗಿ ಮಳೆ ಕಡಿಮೆ ಇದ್ದಂಥ ವರ್ಷಗಳಲ್ಲಿ ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕೊಡಬೇಕಾದಂಥ ನೀರನ್ನು ಮಳೆಗಾಲದಲ್ಲಿ ಶೇಖರಣೆ ಮಾಡಿ ಕೊಡಲು ಇದರಿಂದ ಸಾಧ್ಯವಾಗುತ್ತದೆ. ತಮಿಳುನಾಡಿಗೆ ಒಂಚೂರು ಹಾನಿ ಇದರಿಂದ ಆಗುವುದಿಲ್ಲ. ಇದು ಅವರಿಗೂ ಲಾಭ ತರುವ ಯೋಜನೆ. ಆದರೆ, ರಾಜಕೀಯ ಕಾರಣಗಳಿಗಾಗಿ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more