Weekend Curfew: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಂತಿಮ ನಿರ್ಧಾರ: ಅಶ್ವತ್ಥ್ ನಾರಾಯಣ್

Jan 19, 2022, 6:28 PM IST

ಬೆಂಗಳೂರು (ಜ. 19): ಕೊರೋನಾ ನಿರ್ಬಂಧಗಳ ಕುರಿತು ತೀರ್ಮಾನ ತೆಗೆದುಕೊಳ್ಳಲು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಉನ್ನತ ಮಟ್ಟದ ಸಭೆಯಲ್ಲಿ ‘ಕಾದು ನೋಡುವ ತಂತ್ರ’ ಅನುಸರಿಸಲು ಸರ್ಕಾರ ನಿರ್ಧರಿಸಿದೆ, ಶುಕ್ರವಾರ ಮತ್ತೊಂದು ಸಭೆ ನಡೆಸಿ ವಾರಾಂತ್ಯದ ಕರ್ಫ್ಯೂ ಕೈಬಿಡಬೇಕೆ ಅಥವಾ ಮುಂದುವರೆಸಬೇಕೆ ಎಂಬುದನ್ನು ತೀರ್ಮಾನಿಸಲು ನಿರ್ಧರಿಸಲಾಗಿದೆ. ಅಲ್ಲಿಯವರೆಗೆ ಈಗಿನ ನಿರ್ಬಂಧಗಳೇ ಮುಂದುವರೆಯಲಿವೆ.

Weekend Curfew: ಜನರನ್ನು ಸಂಕಷ್ಟಕ್ಕೆ ತಳ್ಳೋದ್ಯಾಕೆ? ಸಿ ಟಿ ರವಿ ವಿರೋಧ

ಶುಕ್ರವಾರ ನಡೆಯುವ ಸಭೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಂತಿಮ ನಿರ್ಧಾರ ಮಾಡಲಿದ್ದೇವೆ' ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. 'ತಜ್ಞರ ಅಭಿಪ್ರಾಯ ಆಧರಿಸಿ ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧರಿಸಲಿದ್ದೇವೆ. ತಜ್ಞರ ಅಭಿಪ್ರಾಯ ಸಂಗ್ರಹಿಸಲಿದ್ದೇವೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.