ಮಾನವೀಯ ದೃಷ್ಟಿಯಿಂದ ಹಣ ನೀಡಿದ್ದೆ, ಆಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ!

ಮಾನವೀಯ ದೃಷ್ಟಿಯಿಂದ ಹಣ ನೀಡಿದ್ದೆ, ಆಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ!

Published : Jul 15, 2022, 06:42 PM IST

ಮುಸ್ಲಿಂ ಮಹಿಳೆ ಹಣ ವಾಪಾಸು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.  'ಆ ಮಹಿಳೆಯನ್ನು ಯಾರೋ ಎತ್ತಿಕಟ್ಟಿದ್ದಾರೆ, ನಾವು ಮಾನವೀಯ ದೃಷ್ಟಿಯಿಂದ ಪರಿಹಾರದ ಹಣ ನೀಡಿದ್ದೀವಿ ಎಂದಿದ್ದಾರೆ
 

ಬಾದಾಮಿ (ಜುಲೈ 15): ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೆರೂರು ಕೋಮು ಘರ್ಷಣೆಯ ಸಂತ್ರಸ್ತರನ್ನು ಭೇಟಿ ಮಾಡಿದರು. ಈ ಭೇಟಿಯ ವೇಳೆ ರಾಜ್ಮಾ ಎಂಬ ಮುಸ್ಲಿಂ ಮಹಿಳೆ ಸಿದ್ದರಾಮಯ್ಯ ನೀಡಿದ 2 ಲಕ್ಷ ಪರಿಹಾರವನ್ನು ಅವರ ಬೆಂಗಾವಲು ವಾಹನಕ್ಕೆ ಎಸೆದಿದ್ದರು.

ನಿಮ್ಮ ದುಡ್ಡು ಯಾರಿಗೆ ಬೇಕು ಸ್ವಾಮಿ ನನಗೆ ನ್ಯಾಯ ಕೊಡಿಸಿ ಎಂದ ಮಹಿಳೆ ಹಣವನ್ನು ಎಸೆದಿದ್ದರು. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ (Siddaramaiah), ಮಾನವೀಯ ದೃಷ್ಟಿಯಿಂದ ನಾನು ಆಕೆಗೆ ಹಣ ನೀಡಿದ್ದೆ. ಪರಿಹಾರದ ಹಣವನ್ನು ಸಂತ್ರಸ್ತರಿಗೆ ತಲುಪಿಸಿದ್ದೇವೆ. ಅವರು ಪರಿಹಾರ ಪಡೆಯುತ್ತಾರೆ ಎಂದು ಭಾವಿಸಿದ್ದೇನೆ. ಕಷ್ಟಕ್ಕೆಲ್ಲಾ ಆಗುತ್ತೆ ಎಂದು ಹಣ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಹೈಡ್ರಾಮಾ: ಪರಿಹಾರ ಧನವನ್ನೇ ವಾಪಸ್‌ ಎಸೆದ ಮಹಿಳೆ, ಮುಜುಗರಕ್ಕೀಡಾದ ಸಿದ್ದು..!

ಅಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ.ಹಣವನ್ನು ಈಗಾಗಲೇ ಅವರಿಗೆ ವಾಪಾಸ್‌ ಕೊಟ್ಟಿದ್ದೇವೆ. ಸತ್ತವರು ಯಾರೂ ವಾಪಾಸ್‌ ಬರೋದಿಲ್ಲ. ಮಾನವೀಯತೆಯ ಕಾರಣಕ್ಕಾಗಿ ಈ ಹಣ ನೀಡಿದ್ದೇವೆ ಎಂದು ಹೇಳಿದ್ದಾರೆ.  ಹಿಂಸಾಚಾರದಲ್ಲಿ ರಾಜ್ಮಾ ಅವರ ಸಹೋದರ ರೆಜಿಕ್ ಕೂಡ ಗಾಯಗೊಂಡಿದ್ದರು. ಪರಿಹಾರವನ್ನು ರಾಜ್ಮಾ ಅವರಿಗೆ ಸಿದ್ದರಾಮಯ್ಯ ಹಸ್ತಾಂತರಿಸಿದರು. ಆದರೆ, ಕಾಂಗ್ರೆಸ್ ನಾಯಕ ಹೊರಹೋಗಲು ಮುಂದಾದಾಗ, ರಾಜ್ಮಾ ಆಸ್ಪತ್ರೆಯಿಂದ ಹೊರಬಂದು ಹಣವನ್ನು ಎಸೆದಿದ್ದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more