ಮಾನವೀಯ ದೃಷ್ಟಿಯಿಂದ ಹಣ ನೀಡಿದ್ದೆ, ಆಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ!

ಮಾನವೀಯ ದೃಷ್ಟಿಯಿಂದ ಹಣ ನೀಡಿದ್ದೆ, ಆಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ!

Published : Jul 15, 2022, 06:42 PM IST

ಮುಸ್ಲಿಂ ಮಹಿಳೆ ಹಣ ವಾಪಾಸು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.  'ಆ ಮಹಿಳೆಯನ್ನು ಯಾರೋ ಎತ್ತಿಕಟ್ಟಿದ್ದಾರೆ, ನಾವು ಮಾನವೀಯ ದೃಷ್ಟಿಯಿಂದ ಪರಿಹಾರದ ಹಣ ನೀಡಿದ್ದೀವಿ ಎಂದಿದ್ದಾರೆ
 

ಬಾದಾಮಿ (ಜುಲೈ 15): ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೆರೂರು ಕೋಮು ಘರ್ಷಣೆಯ ಸಂತ್ರಸ್ತರನ್ನು ಭೇಟಿ ಮಾಡಿದರು. ಈ ಭೇಟಿಯ ವೇಳೆ ರಾಜ್ಮಾ ಎಂಬ ಮುಸ್ಲಿಂ ಮಹಿಳೆ ಸಿದ್ದರಾಮಯ್ಯ ನೀಡಿದ 2 ಲಕ್ಷ ಪರಿಹಾರವನ್ನು ಅವರ ಬೆಂಗಾವಲು ವಾಹನಕ್ಕೆ ಎಸೆದಿದ್ದರು.

ನಿಮ್ಮ ದುಡ್ಡು ಯಾರಿಗೆ ಬೇಕು ಸ್ವಾಮಿ ನನಗೆ ನ್ಯಾಯ ಕೊಡಿಸಿ ಎಂದ ಮಹಿಳೆ ಹಣವನ್ನು ಎಸೆದಿದ್ದರು. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ (Siddaramaiah), ಮಾನವೀಯ ದೃಷ್ಟಿಯಿಂದ ನಾನು ಆಕೆಗೆ ಹಣ ನೀಡಿದ್ದೆ. ಪರಿಹಾರದ ಹಣವನ್ನು ಸಂತ್ರಸ್ತರಿಗೆ ತಲುಪಿಸಿದ್ದೇವೆ. ಅವರು ಪರಿಹಾರ ಪಡೆಯುತ್ತಾರೆ ಎಂದು ಭಾವಿಸಿದ್ದೇನೆ. ಕಷ್ಟಕ್ಕೆಲ್ಲಾ ಆಗುತ್ತೆ ಎಂದು ಹಣ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಹೈಡ್ರಾಮಾ: ಪರಿಹಾರ ಧನವನ್ನೇ ವಾಪಸ್‌ ಎಸೆದ ಮಹಿಳೆ, ಮುಜುಗರಕ್ಕೀಡಾದ ಸಿದ್ದು..!

ಅಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ.ಹಣವನ್ನು ಈಗಾಗಲೇ ಅವರಿಗೆ ವಾಪಾಸ್‌ ಕೊಟ್ಟಿದ್ದೇವೆ. ಸತ್ತವರು ಯಾರೂ ವಾಪಾಸ್‌ ಬರೋದಿಲ್ಲ. ಮಾನವೀಯತೆಯ ಕಾರಣಕ್ಕಾಗಿ ಈ ಹಣ ನೀಡಿದ್ದೇವೆ ಎಂದು ಹೇಳಿದ್ದಾರೆ.  ಹಿಂಸಾಚಾರದಲ್ಲಿ ರಾಜ್ಮಾ ಅವರ ಸಹೋದರ ರೆಜಿಕ್ ಕೂಡ ಗಾಯಗೊಂಡಿದ್ದರು. ಪರಿಹಾರವನ್ನು ರಾಜ್ಮಾ ಅವರಿಗೆ ಸಿದ್ದರಾಮಯ್ಯ ಹಸ್ತಾಂತರಿಸಿದರು. ಆದರೆ, ಕಾಂಗ್ರೆಸ್ ನಾಯಕ ಹೊರಹೋಗಲು ಮುಂದಾದಾಗ, ರಾಜ್ಮಾ ಆಸ್ಪತ್ರೆಯಿಂದ ಹೊರಬಂದು ಹಣವನ್ನು ಎಸೆದಿದ್ದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more