ಮಾನವೀಯ ದೃಷ್ಟಿಯಿಂದ ಹಣ ನೀಡಿದ್ದೆ, ಆಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ!

ಮಾನವೀಯ ದೃಷ್ಟಿಯಿಂದ ಹಣ ನೀಡಿದ್ದೆ, ಆಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ!

Published : Jul 15, 2022, 06:42 PM IST

ಮುಸ್ಲಿಂ ಮಹಿಳೆ ಹಣ ವಾಪಾಸು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.  'ಆ ಮಹಿಳೆಯನ್ನು ಯಾರೋ ಎತ್ತಿಕಟ್ಟಿದ್ದಾರೆ, ನಾವು ಮಾನವೀಯ ದೃಷ್ಟಿಯಿಂದ ಪರಿಹಾರದ ಹಣ ನೀಡಿದ್ದೀವಿ ಎಂದಿದ್ದಾರೆ
 

ಬಾದಾಮಿ (ಜುಲೈ 15): ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೆರೂರು ಕೋಮು ಘರ್ಷಣೆಯ ಸಂತ್ರಸ್ತರನ್ನು ಭೇಟಿ ಮಾಡಿದರು. ಈ ಭೇಟಿಯ ವೇಳೆ ರಾಜ್ಮಾ ಎಂಬ ಮುಸ್ಲಿಂ ಮಹಿಳೆ ಸಿದ್ದರಾಮಯ್ಯ ನೀಡಿದ 2 ಲಕ್ಷ ಪರಿಹಾರವನ್ನು ಅವರ ಬೆಂಗಾವಲು ವಾಹನಕ್ಕೆ ಎಸೆದಿದ್ದರು.

ನಿಮ್ಮ ದುಡ್ಡು ಯಾರಿಗೆ ಬೇಕು ಸ್ವಾಮಿ ನನಗೆ ನ್ಯಾಯ ಕೊಡಿಸಿ ಎಂದ ಮಹಿಳೆ ಹಣವನ್ನು ಎಸೆದಿದ್ದರು. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ (Siddaramaiah), ಮಾನವೀಯ ದೃಷ್ಟಿಯಿಂದ ನಾನು ಆಕೆಗೆ ಹಣ ನೀಡಿದ್ದೆ. ಪರಿಹಾರದ ಹಣವನ್ನು ಸಂತ್ರಸ್ತರಿಗೆ ತಲುಪಿಸಿದ್ದೇವೆ. ಅವರು ಪರಿಹಾರ ಪಡೆಯುತ್ತಾರೆ ಎಂದು ಭಾವಿಸಿದ್ದೇನೆ. ಕಷ್ಟಕ್ಕೆಲ್ಲಾ ಆಗುತ್ತೆ ಎಂದು ಹಣ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಹೈಡ್ರಾಮಾ: ಪರಿಹಾರ ಧನವನ್ನೇ ವಾಪಸ್‌ ಎಸೆದ ಮಹಿಳೆ, ಮುಜುಗರಕ್ಕೀಡಾದ ಸಿದ್ದು..!

ಅಕೆಯನ್ನು ಯಾರೋ ಎತ್ತಿಕಟ್ಟಿದ್ದಾರೆ.ಹಣವನ್ನು ಈಗಾಗಲೇ ಅವರಿಗೆ ವಾಪಾಸ್‌ ಕೊಟ್ಟಿದ್ದೇವೆ. ಸತ್ತವರು ಯಾರೂ ವಾಪಾಸ್‌ ಬರೋದಿಲ್ಲ. ಮಾನವೀಯತೆಯ ಕಾರಣಕ್ಕಾಗಿ ಈ ಹಣ ನೀಡಿದ್ದೇವೆ ಎಂದು ಹೇಳಿದ್ದಾರೆ.  ಹಿಂಸಾಚಾರದಲ್ಲಿ ರಾಜ್ಮಾ ಅವರ ಸಹೋದರ ರೆಜಿಕ್ ಕೂಡ ಗಾಯಗೊಂಡಿದ್ದರು. ಪರಿಹಾರವನ್ನು ರಾಜ್ಮಾ ಅವರಿಗೆ ಸಿದ್ದರಾಮಯ್ಯ ಹಸ್ತಾಂತರಿಸಿದರು. ಆದರೆ, ಕಾಂಗ್ರೆಸ್ ನಾಯಕ ಹೊರಹೋಗಲು ಮುಂದಾದಾಗ, ರಾಜ್ಮಾ ಆಸ್ಪತ್ರೆಯಿಂದ ಹೊರಬಂದು ಹಣವನ್ನು ಎಸೆದಿದ್ದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more