Sep 4, 2021, 10:54 AM IST
ಬೆಂಗಳೂರು (ಸೆ. 04): ಇಂದು ಪತ್ರಿಕಾ ವಿತರಕರ ದಿನಾಚರಣೆ. ರಾಜಾಜಿನಗರ ಅಗ್ನಿಶಾಮಕ ದಳ ಕಚೇರಿ ಹಿಂಭಾಗದಲ್ಲಿರುವ ಪಾರ್ವತಿ ಕನ್ವೆನ್ಷನ್ ಹಾಲ್ನಲ್ಲಿ ಶನಿವಾರ ಬೆಳಗ್ಗೆ 10ಕ್ಕೆ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಪತ್ರಿಕಾ ವಿತರಕರಿಗೆ ಸರ್ಕಾರದಿಂದ ಗುಡ್ ನ್ಯೂಸ್
ವಸತಿ ಸಚಿವ ವಿ.ಸೋಮಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಿರಿಯ ಪತ್ರಿಕಾ ವಿತರಕರನ್ನು ಸನ್ಮಾನಿಸುವರು. ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಪತ್ರಿಕೆ ಹಂಚುವ ಹುಡುಗರಿಗೆ ಸನ್ಮಾನ ಮಾಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಶಾಸಕ ಎಸ್.ಸುರೇಶ್ಕುಮಾರ್, ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ, ಮಾರುತಿ ಮೆಡಿಕಲ್ಸ್ನ ಮಹೇಂದ್ರ ಮನೋಜ್ ಜೈನ್ ಅತಿಥಿಗಳಾಗಿ ಉಪಸ್ಥಿತರಿರುವರು.