Shivamogga: ಮುಸ್ಲಿಂ ಗೂಂಡಾಗಳೇ ಹರ್ಷನ ಕೊಲೆ ಮಾಡಿದ್ದು, ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ

Shivamogga: ಮುಸ್ಲಿಂ ಗೂಂಡಾಗಳೇ ಹರ್ಷನ ಕೊಲೆ ಮಾಡಿದ್ದು, ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ

Published : Feb 22, 2022, 01:36 PM IST

ಹರ್ಷ ಕೊಲೆಯಾದಾಗ ಕೂಡಲೇ ಎಸ್‌ಪಿಗೆ ಕರೆ ಮಾಡಿ ಮಾತನಾಡಿದೆ.  ಜೊತೆಗೆ ಸುತ್ತಮುತ್ತಲಿನ ಜನರನ್ನು ವಿಚಾರಿಸಿದೆವು. ಆಗ ಅವರು ಮುಸ್ಲಿಂ ಗೂಂಡಾಗಳೇ ಕೊಲೆ ಮಾಡಿದ್ದು ಎಂದಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. 

ಬೆಂಗಳೂರು (ಫೆ. 22): ಹರ್ಷ ಕೊಲೆಯಾದಾಗ ಕೂಡಲೇ ಎಸ್‌ಪಿಗೆ ಕರೆ ಮಾಡಿ ಮಾತನಾಡಿದೆ.  ಜೊತೆಗೆ ಸುತ್ತಮುತ್ತಲಿನ ಜನರನ್ನು ವಿಚಾರಿಸಿದೆವು. ಆಗ ಅವರು ಮುಸ್ಲಿಂ ಗೂಂಡಾಗಳೇ ಕೊಲೆ ಮಾಡಿದ್ದು ಎಂದಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. 

‘ನಮ್ಮ ಸಜ್ಜನ ಕಾರ್ಯಕರ್ತ ಹರ್ಷನನ್ನು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ.  ಶಿವಮೊಗ್ಗದಲ್ಲಿ ಎಂದೂ ಈ ಮುಸ್ಲಿಂ ಗೂಂಡಾಗಳು ಬಾಲಬಿಚ್ಚಿರಲಿಲ್ಲ. ಆದರೆ ಮೊನ್ನೆ ಶಿವಮೊಗ್ಗದ ಸರ್ಕಾರಿ ಶಾಲೆ ಆವರಣದಲ್ಲಿ ರಾಷ್ಟ್ರ ಧ್ವಜ ಇಳಿಸಿ ಭಗವಾ ಧ್ವಜ ಹಾರಿಸಿದ್ದಾರೆ. 50 ಲಕ್ಷ ಕೇಸರಿ ಶಾಲು ಹಂಚಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಅವರು ನೀಡಿದ ಪ್ರಚೋದನಾಕಾರಿ ಹೇಳಿಕೆಯಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಿದೆ’ ಎಂದು ಈಶ್ವರಪ್ಪ ಹೇಳಿದ್ದರು. 

ಈ ಹೇಳಿಕೆಗೆ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಆರೋಪ ಮಾಡಿದ್ದರು. ' ಯುವಕನ ಕೊಲೆ ಸಂಬಂಧ ಪೊಲೀಸ್‌ ತನಿಖೆ ನಡೆಯುವ ಮುನ್ನವೇ ಈಶ್ವರಪ್ಪ ಅವರು, ಮುಸ್ಲಿಂ ಗೂಂಡಾಗಳು ಕೊಲೆಗೆ ಕಾರಣ ಎಂದು ಹೇಳಿರುವುದನ್ನು ನೋಡಿದರೆ, ಅವರಿಗೆ ಎಲ್ಲ ಬಗೆಯ ಮಾಹಿತಿ ಮೊದಲೇ ಗೊತ್ತಿತ್ತು ಎಂದು ಕಾಣುತ್ತದೆ. ಘಟನೆ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಬೇಕಿತ್ತು, ಘಟನೆ ಬಗ್ಗೆ ಪೊಲೀಸ್‌ ತನಿಖೆ ನಡೆಯದೇ ಈಶ್ವರಪ್ಪ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ, ಅವರಿಗೆ ಬಹುಶಃ ಸಂಪೂರ್ಣ ಮಾಹಿತಿ ಇತ್ತೆಂದು ಕಾಣುತ್ತದೆ ಎಂದಿದ್ದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more