ಜೆಜೆ ನಗರ ಕೊಲೆ ಪ್ರಕರಣ: ಚಂದ್ರು ಕುಟುಂಬಕ್ಕೆ ಜಮೀರ್‌ ಅಹಮದ್‌ 2 ಲಕ್ಷ ಪರಿಹಾರ

ಜೆಜೆ ನಗರ ಕೊಲೆ ಪ್ರಕರಣ: ಚಂದ್ರು ಕುಟುಂಬಕ್ಕೆ ಜಮೀರ್‌ ಅಹಮದ್‌ 2 ಲಕ್ಷ ಪರಿಹಾರ

Published : Apr 06, 2022, 01:47 PM ISTUpdated : Apr 06, 2022, 02:06 PM IST

*ಚಂದ್ರು ಕುಟುಂಬಕ್ಕೆ ಶಾಸಕ ಜಮೀರ್‌ ಅಹಮದ್‌ ಪರಿಹಾರ
*ಚಂದ್ರು ಸಾಕುತ್ತಿದ್ದ ಅಜ್ಜಿಗೆ ಜಮೀರ್‌ ಅಹಮದ್‌ 2 ಲಕ್ಷ ರೂ
*ಕೊಲೆಗೆ ಕಾರಣ ವಿವರಿಸಿದ  ಶಾಸಕ ಜಮೀರ್‌ ಅಹಮದ್‌

ಬೆಂಗಳೂರು (ಏ. 06): ಜೆಜೆ ನಗರ‌ದಲ್ಲಿ ಕೊಲೆಯಾದ ಚಂದ್ರು ಕುಟುಂಬಕ್ಕೆ ಶಾಸಕ ಜಮೀರ್‌ ಅಹಮದ್‌ ಪರಿಹಾರ ನೀಡಿದ್ದಾರೆ. ಚಂದ್ರು ಸಾಕುತ್ತಿದ್ದ ಅಜ್ಜಿಗೆ ಜಮೀರ್‌ ಅಹಮದ್‌ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಚಂದ್ರು ಕೊಲೆಗೆ ಶಾಸಕ ಜಮೀರ್‌ ಅಹಮದ್‌ ಕಾರಣ ವಿವರಿಸಿದ್ದು "ಚಿಕನ್‌ ರೋಲ್‌ ತಿನ್ನೋದಕ್ಕೆ ಚಂದ್ರು ರಾತ್ರಿ 2 ಗಂಟೆಗೆ ಹೋಗಿದ್ದಾರೆ. ವಾಪಸ್‌ ಬರೋವಾಗ ಬೈಕ್‌ಗಳು ಡಿಕ್ಕಿಯಾಗಿ ಗಲಾಟೆಯಾಗಿದೆ. ಆ ಸಂದರ್ಭದಲ್ಲಿ ಶಾಹಿನ್‌ ಚಾಕುವಿನಲ್ಲಿ ಚಂದ್ರು ತೊಡೆಗೆ ಚುಚ್ಚಿದ್ದಾನೆ" ಎಂದು ತಿಳಿಸಿಸಿದ್ದಾರೆ. 

ಇದನ್ನೂ ಓದಿ: ಗೌರಿಪಾಳ್ಯ ಚಂದ್ರು ಮರ್ಡರ್‌ ಕೇಸ್‌: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!

ಜೆಜೆ ನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಏಪ್ರಿಲ್ 5 ರ ಮಧ್ಯರಾತ್ರಿ ನಡೆದ ಕೊಲೆ ನಡೆದಿತ್ತು. "ಆಕ್ಸಿಡೆಂಟ್ ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ಬಳಿಕ ಕೊಲೆ ನಡೆದಿದೆ. ಮೂವರು ಆರೋಪಿಗಳನ್ನ ಬಂಧಿಸಿದ್ದೇವೆ" ಎಂದು ಪೊಲೋಸರು ಕೂಡ ಮಾಹಿತಿ ನೀಡಿದ್ದಾರೆ.  ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿತ್ತು. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more