ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!

ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!

Published : Dec 18, 2025, 06:01 PM IST
ಸೀರಿಯಲ್ ನಟಿ ಜೋಶಿತಾ ಮತ್ತು ಪತಿ ಸುರೇಶ್ ಅವರ ಪ್ರೇಮ ವಿವಾಹವು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಪರಸ್ಪರ ಹಲ್ಲೆ ಮತ್ತು ಕಿರುಕುಳದ ಆರೋಪಗಳನ್ನು ಮಾಡುತ್ತಿರುವ ದಂಪತಿ, ತಮ್ಮ ಒಂದೂವರೆ ವರ್ಷದ ಮಗುವಿಗಾಗಿ ನಡುರಸ್ತೆಯಲ್ಲಿ ಗಲಾಟೆ ಮಾಡಿಕೊಂಡಿದ್ದು, ಪ್ರಕರಣ ತನಿಖಾ ಹಂತದಲ್ಲಿದೆ.

ಬೆಂಗಳೂರು (ಡಿ.18): ಪ್ರೀತಿಸಿ ಮದುವೆಯಾಗಿದ್ದ ಸೀರಿಯಲ್ ನಟಿ ಜೋಶಿತಾ ಮತ್ತು ಸಂಘವೊಂದರ ರಾಜ್ಯಾಧ್ಯಕ್ಷ ಸುರೇಶ್ ಅವರ ದಾಂಪತ್ಯ ಜೀವನ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. 'ನೀನೇ ಬೇಕು' ಎಂದು ಹಠ ಹಿಡಿದು ಒಂದಾದ ಈ ಜೋಡಿ, ಮದುವೆಯಾಗಿ 2 ವರ್ಷ ಕಳೆಯುವಷ್ಟರಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಾ ಬೀದಿ ರಂಪಾಟಕ್ಕಿಳಿದಿದ್ದಾರೆ.

ಪ್ರಕರಣದ ಹಿನ್ನೆಲೆ
ಕಿರುತೆರೆ ನಟಿಯಾಗಿ ಗುರುತಿಸಿಕೊಂಡಿದ್ದ ಜೋಶಿತಾ ಹಾಗೂ ಸುರೇಶ್ ಪೋಷಕರಿಗೆ ತಿಳಿಯದಂತೆ ವಿವಾಹವಾಗಿದ್ದರು. ಆರಂಭದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಪೋಷಕರು ನಂತರ ಈ ಜೋಡಿಯನ್ನು ಒಪ್ಪಿಕೊಂಡಿದ್ದರು. ಇವರಿಗೆ ಈಗ ಒಂದೂವರೆ ವರ್ಷದ ಮಗುವಿದೆ. ಆದರೆ, ಕಳೆದ ಕೆಲವು ತಿಂಗಳಿಂದ ದಂಪತಿಗಳ ನಡುವೆ ವಿರಸ ಉಂಟಾಗಿದ್ದು, ಜಗಳ ವಿಕೋಪಕ್ಕೆ ಹೋಗಿದೆ. ನಟಿ ಜೋಶಿತಾ ತನ್ನ ಪತಿ ಸುರೇಶ್ ವಿರುದ್ಧ ಹಲ್ಲೆ ಮತ್ತು ಕಿರುಕುಳದ ಗಂಭೀರ ಆರೋಪ ಮಾಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಮಗುವಿಗಾಗಿ ನಡುರಸ್ತೆಯಲ್ಲಿ ಗಲಾಟೆ 

ಈ ಕಥೆಗೆ ಹೊಸ ತಿರುವು ಸಿಕ್ಕಿದ್ದು ಮಗುವಿನ ವಿಚಾರದಲ್ಲಿ. ಗಂಡನಿಂದ ಮುಕ್ತಿ ಬೇಕು ಎಂದು ಹೊರಬಂದಿದ್ದ ನಟಿ ಜೋಶಿತಾ, ಇತ್ತೀಚೆಗೆ ತನ್ನ ಒಂದೂವರೆ ವರ್ಷದ ಮಗುವನ್ನು ಗಂಡನ ಬಳಿಯೇ ಬಿಟ್ಟು ಬರಲು ಹೋಗಿದ್ದರು ಎನ್ನಲಾಗಿದೆ. ಈ ವೇಳೆ ನಡುರಸ್ತೆಯಲ್ಲೇ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಸುರೇಶ್ ಈ ಘಟನೆಯನ್ನು ಫೇಸ್‌ಬುಕ್ ಲೈವ್ ಮಾಡುವ ಮೂಲಕ ಹೆಂಡತಿ ಮತ್ತು ಅತ್ತೆಯ ನಡವಳಿಕೆಯನ್ನು ಜನರೆದುರು ತೆರೆದಿಟ್ಟಿದ್ದಾನೆ. ಮಗುವನ್ನು ಪೊಲೀಸರ ಸಮ್ಮುಖದಲ್ಲೇ ಹಸ್ತಾಂತರಿಸು ಎಂದು ಸುರೇಶ್ ಪಟ್ಟು ಹಿಡಿದಾಗ ಗಲಾಟೆ ತಾರಕಕ್ಕೇರಿ ಹಲ್ಲೆಯ ಹಂತಕ್ಕೆ ತಲುಪಿದೆ.

ಆರೋಪ ಮತ್ತು ಪ್ರತ್ಯಾರೋಪ 

ನಟಿ ಮತ್ತು ಆಕೆಯ ತಾಯಿ 'ಸುರೇಶ್ ನಮ್ಮ ಮೇಲೆ ಹಲ್ಲೆ ಮಾಡಿದ್ದಾನೆ, ಮದುವೆಗೆ ಮೊದಲೇ ಮೋಸ ಮಾಡಿದ್ದಾನೆ' ಎಂದು ಆರೋಪಿಸಿದರೆ, ಸುರೇಶ್ ಮಾತ್ರ 'ತನ್ನ ಹೆಂಡತಿ ಮಗುವನ್ನೂ ಬೇಡವೆಂದು ರಸ್ತೆಯಲ್ಲಿ ಎಸೆದು ಹೋಗುತ್ತಿದ್ದಾಳೆ' ಎಂಬ ವಿಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾನೆ. ಈ ವಿಡಿಯೋಗಳು ಈಗ ಅಮ್ಮ-ಮಗಳ ಮೇಲೆಯೇ ಅನುಮಾನ ಮೂಡುವಂತೆ ಮಾಡಿದೆ. ಪ್ರೀತಿಯಿಂದ ಆರಂಭವಾದ ಈ ಸಂಸಾರ ಈಗ ದ್ವೇಷದ ದಳ್ಳುರಿಯಲ್ಲಿ ಬೇಯುತ್ತಿದೆ. ಇಬ್ಬರ ಅಹಂಕಾರ ಮತ್ತು ಜಗಳದ ನಡುವೆ ಒಂದೂವರೆ ವರ್ಷದ ಹಸುಗೂಸು ಅನಾಥವಾಗುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
04:36ಕಾವ್ಯಾ ಶೈವ ಪರ ಗಿಲ್ಲಿ ಫೆವರಿಸಂ; ಇಷ್ಟು ದಿನ ಚೆನ್ನಾಗಿ ಆಡಿ, ಈಗ ಪಕ್ಷಪಾತ ಮಾಡಿದ್ರಾ Bigg Boss ಗಿಲ್ಲಿ ನಟ?
05:09ಗಿಲ್ಲಿಗಿಂತ ನನಗೆ ಹೆಚ್ಚು ಫ್ಯಾನ್ಸ್ ಇದ್ದಾರೆ; ಅವನು Bigg Boss ಶೋನಲ್ಲಿ ವ್ಯಕ್ತಿತ್ವವೇ ತೋರಿಸಿಲ್ಲ: ಮಾಳು ನಿಪನಾಳ
24:18ಬಿಗ್ ಬಾಸ್​ನಲ್ಲಿ ಮಂಡ್ಯದ ಗಂಡು ಗಿಲ್ಲಿಗೆ ಕಿಚ್ಚನ ಮೆಚ್ಚುಗೆ: ಬಿಗ್​ ಸ್ಕ್ರೀನ್​ನಲ್ಲಿ ಗಿಲ್ಲಿ ನಟನಿಗೆ ದಾಸನ ಅಪ್ಪುಗೆ!
Read more