ಸಿಎಂ ಗ್ರಾಮವಾಸ್ತವ್ಯಕ್ಕೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ

Jun 21, 2019, 2:17 PM IST

ಚಂಡರಕಿ ಗ್ರಾಮಕ್ಕೆ ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಪಾದಯಾತ್ರೆ ನಡೆಸಿದ್ದಾರೆ. ರೈತರ ಸಾಲಮನ್ನಾ ಸೇರಿದಂತೆ ಹಲವು ಅನುಷ್ಠಾನಗಳ ಜಾರಿಗೆ ಈ ಪಾದಯಾತ್ರೆ ನಡೆಸಲಾಗಿದೆ. ಸಿಎಂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ ಮಾಡಿದ್ದಾರೆ. ಬಿಜೆಪಿ ಬಾವುಟ ಹಿಡಿದು ಸಿಎಂ ಜನತಾ ದರ್ಶನ ವೇದಿಕೆಯತ್ತ ಬಂದಿದ್ದಾರೆ. ಘೋಷಣೆ ಕೂಗಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.