Whatsapp ಗ್ರೂಪ್‌ನಿಂದ ದಿನೇಶ್ Exit! ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು...

Jun 15, 2019, 6:52 PM IST

ಬೆಂಗಳೂರು (ಜೂ.15): ಲೋಕಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದ ಬಳಿಕ ಕಾಂಗ್ರೆಸ್‌ನಲ್ಲಿ ರಾಜೀನಾಮೆಯ ಸರಣಿ ಶುರುವಾಗಿತ್ತು. ಪಕ್ಷದ ಕಳಪೆ ಸಾಧನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಪಟ್ಟಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದು, ಹೊಸ ಅಧ್ಯಕ್ಷರಿಗಾಗಿ ಹುಡುಕಾಟ ನಡೆಯುತ್ತಿದೆ. ಆದರೆ ಕಾಂಗ್ರೆಸ್ ಇದನ್ನು ನಿರಾಕರಿಸಿದೆ.

ರಾಜ್ಯದಲ್ಲಿ 10 ಸಂಸದರನ್ನು ಹೊಂದಿದ್ದ ಕಾಂಗ್ರೆಸ್, ಕಳೆದ ಲೋಕಸಭಾ ಚುನಾವಣೆಯಲ್ಲಿ 1ಕ್ಕೆ ಸೀಮಿತವಾಗಿದೆ.  ಆ ಹಿನ್ನೆಲೆಯಲ್ಲಿ KPCC ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸಣ್ಣ ಗುಲ್ಲೆಬ್ಬಿದ್ದು, ಅವರು ಪಕ್ಷದ ವಾಟ್ಸಪ್ ಗ್ರೂಪ್‌ಗಳಿಂದ ಹೊರಬಂದಿರುವುದು ಕುತೂಹಲವನ್ನು ಹುಟ್ಟುಹಾಕಿದೆ.

ಈ ವಿಚಾರವಾಗಿ ಖುದ್ದು ಮಾಧ್ಯಮಗಳ ಜೊತೆ ಮಾತನಾಡಿರುವ ದಿನೇಶ್ ಗುಂಡುರಾವ್, ತಮ್ಮ ನಿಲುವು-ನಿರ್ಧಾರಗಳನ್ನು ಸ್ಪಷ್ಟಪಡಿಸಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...