ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಭಿನ್ನಮತ; ಮೊದಲ ವಿಕೆಟ್ ಶೀಘ್ರದಲ್ಲೇ ಪತನ?

Jun 14, 2019, 3:54 PM IST

ಚಿಕ್ಕಬಳ್ಳಾಪುರ (ಜೂ. 14) ಅಂತೂ ಇಂತೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಈ ಹಿಂದೆ ಸಚಿವ ಸ್ಥಾನ ಸಿಗದ ಕಾರಣ ಮುನಿಸಿಕೊಂಡು, ಮೈತ್ರಿ ಸರ್ಕಾರಕ್ಕೆ ಬೆಂಬಲ ಹಿಂಪಡೆದಿದ್ದ ಇಬ್ಬರು ಪಕ್ಷೇತರ ಶಾಸಕರಿಗೆ ಸಚಿವ ಸಂಪುಟದಲ್ಲಿ ಸೇರಿಸಲಾಗಿದೆ.

ಇನ್ನೊಂದು ಕಡೆ, ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಕಾಂಗ್ರೆಸ್ ಶಾಸಕರಲ್ಲಿ ಮತ್ತೆ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಅತೃಪ್ತರ ಪೈಕಿ ಪ್ರಮುಖರಾಗಿರುವ ಚಿಕ್ಕಬಳ್ಳಾಪುರ ಶಾಸಕ, ಡಾ.ಸುಧಾಕರ್ ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದರು. 

ಕಳೆದೊಂದು ವರ್ಷದಲ್ಲಿ ನನಗೆ ಬಹಳಷ್ಟು ಅವಮಾನವಾಗಿದೆ. ರಾಹುಲ್ ಗಾಂಧಿ ನಿರ್ದೇಶನದ ಮೇರೆಗೆ ನೀಡಲಾಗಿದ್ದ ನಿಗಮ ಮಂಡಳಿ ಸ್ಥಾನವನ್ನೂ ವಾಪಾಸು ಪಡೆಯಲಾಗಿದೆ . ಕ್ಷೇತ್ರದ ಮತದಾರರ ಬಳಿ ಸಮಾಲೋಚನೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ, ಎಂದು ಡಾ. ಸುಧಾಕರ್ ಹೇಳಿದರು.