ಇಸ್ರೇಲ್ ವಿರುದ್ಧ ಒಂದಾದ 57 ಮುಸ್ಲಿಂ ರಾಷ್ಟ್ರಗಳು: ಯುದ್ಧ ನಿಲ್ಲಿಸಲೂ ಒಐಸಿ ಒಕ್ಕೂಟದಿಂದ ಎಚ್ಚರಿಕೆ!

ಇಸ್ರೇಲ್ ವಿರುದ್ಧ ಒಂದಾದ 57 ಮುಸ್ಲಿಂ ರಾಷ್ಟ್ರಗಳು: ಯುದ್ಧ ನಿಲ್ಲಿಸಲೂ ಒಐಸಿ ಒಕ್ಕೂಟದಿಂದ ಎಚ್ಚರಿಕೆ!

Published : Oct 20, 2023, 09:23 AM ISTUpdated : Oct 20, 2023, 09:26 AM IST

ಗಾಜಾ ನಿರ್ನಾಮಕ್ಕಾಗಿ ಇಸ್ರೇಲ್ ಸೇನೆ ನಿರಂತರವಾಗಿ ಏರ್ಸ್ಟ್ರೈಕ್ ನಡೆಸುತ್ತಲೇ ಇದೆ. ಗುರುವಾರ ಗಾಜಾದಲ್ಲಿ ಉಗ್ರರ ರಾಕೆಟ್ ಮಿಸ್ಫೈರ್ನಿಂದಾಗಿ ಆಸ್ಪತ್ರೆಗೆ ಅಪ್ಪಳಿಸಿ, 500 ಜನರನ್ನ ಬಲಿ ಪಡೆದಿದೆ. ಈ ದುರಂತದ ಬೆನ್ನಲ್ಲೇ ಇದು ಇಸ್ರೇಲ್ ಸೇನೆಯದ್ದೇ ದಾಳಿ ಎಂದು ಮುಸ್ಲಿಂ ರಾಷ್ಟಗಳು ಆರೋಪ ಮಾಡ್ತಿದ್ದು, ಇಸ್ರೇಲ್ ವಿರುದ್ಧ ಒಂದಾಗಿವೆ.
 

ಸೌದಿ ಅರೇಬಿಯಾದ ಜೆಡ್ಡಾದಲ್ಲಿ 57 ಇಸ್ಲಾಂ ರಾಷ್ಟ್ರಗಳ ಒಐಸಿ ಒಕ್ಕೂಟದ ಸಭೆ ನಡೆಸಿದೆ. ಇರಾನ್, ಪಾಕಿಸ್ತಾನ, ಈಜಿಪ್ಟ್, ಜೋರ್ಡಾನ್ ಸೇರಿ 57 ರಾಷ್ಟ್ರಗಳು ಒಂದಾಗಿದ್ದು, ಈ ಕೂಡಲೇ ಇಸ್ರೇಲ್ ಯುದ್ಧ ಭೂಮಿಯಿಂದ ಹೊರ ನಡೆಯಬೇಕೆಂದು ಒಮ್ಮತದ ನಿರ್ಧಾರ ಕೈಗೊಂಡಿವೆ. ಒಂದು ವೇಳೆ  ಇಸ್ರೇಲ್ ಗಾಜಾದಿಂದ(Gaza) ಹಿಂದೆ ಸರಿಯದಿದ್ರೆ 57 ರಾಷ್ಟ್ರಗಳು ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ವ್ಯವಹಾರಕ್ಕೆ ಬ್ರೇಕ್ ಹಾಕಿ, ತೈಲದಿಂದ ಹಿಡಿದು ಎಲ್ಲಾ ವ್ಯವಹಾರ ಸ್ಥಗಿತಗೊಳಿಸುವ ಬೆದರಿಕೆ ಹಾಕಿವೆ. ಇಸ್ರೇಲ್‌ಗೆ ಬಂದಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡೆನ್(Joe Biden), ಬೆಂಜಮಿನ್ ನೆತನ್ಯಾಹೋ (Benjamin Netanyahu) ಜತೆ ಮಾತುಕತೆ ಬಳಿಕ ಜೊರ್ಡಾನ್‌ಗೆ ಹೋಗಬೇಕಿತ್ತು. ಆದ್ರೆ ಇದೇ ಆಸ್ಪತ್ರೆ ದಾಳಿ ಮುಂದಿಟ್ಟುಕೊಂಡು ಮುಸ್ಲಿಂ ರಾಷ್ಟ್ರಗಳು ಆ ಸಭೆಯನ್ನ ರದ್ದುಗೊಳಿಸಿದ್ದವು. ಅಮೆರಿಕಕ್ಕೆ ನಿರ್ಗಮನದ ಬಳಿಕ ಜೋ ಬೈಡೆನ್, ಗಾಜಾ ನಿರಾಶ್ರಿತರ ಪರವಾಗಿ ಅನುಕಂಪ ತೋರಿಸಿದ್ದು, 100 ಮಿಲಿಯನ್ ಡಾಲರ್ ನೆರವು ಘೋಷಿಸಿದ್ದಾರೆ. ಒಂದೆಡೆ ಇಸ್ಲಾಂ ರಾಷ್ಟ್ರಗಳು ಇಸ್ರೇಲ್(Isreal) ಮೇಲೆ ಬೆದರಿಕೆ ಹಾಕ್ತಿದ್ರೆ, ಇನ್ನೊಂದು ಕಡೆ ಅಮೆರಿಕ ನಿಮ್ಮ ಜೊತೆಗೆ ಇದ್ದೇವೆ ಅಂತ ಹೇಳುತ್ತಲೇ ಇಸ್ರೇಲ್ ಗಾಜಾ ನಿರಾಶ್ರಿತರ ನೆರವಿಗೆ ನಿಲ್ಲಬೇಕು ಎಂದಿದೆ. ಜತೆಗೆ ಈಜಿಪ್ಟ್ ಗಡಿ ತೆರೆದು ನಿರಾಶ್ರಿತರು ವಲಸೆ ಹೋಗಲು ಸಹಕರಿಸಬೇಕು ಎಂದು ಹೇಳ್ತಿದೆ. ಆದರೆ ಇಸ್ರೇಲ್ ಮಾತ್ರ ಇಟ್ಟ ಹೆಜ್ಜೆ ಹಿಂದೆ ಸರಿಯೋ ಮಾತೇ ಇಲ್ಲ. ಹಮಾಸ್ ಉಗ್ರರನ್ನ ಸೆದೆ ಬಡೆಯುವವರಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಕಡ್ಡಿ ಮುರಿದಂತೆ ಹೇಳಿದೆ.

ಇದನ್ನೂ ವೀಕ್ಷಿಸಿ:  News Hour: ಇಸ್ರೇಲ್ ವಿರುದ್ಧ ಒಂದಾದ 57 ಮುಸ್ಲಿಂ ರಾಷ್ಟ್ರಗಳು

19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ