ದಾವಣಗೆರೆಯ ವಿನಯ್ ಎಂಬ ವಿದ್ಯಾರ್ಥಿ ಉಕ್ರೇನ್ನಲ್ಲಿ ಸಿಲುಕಿದ್ದಾರೆ. ಪೋಷಕರು ಕಂಗಾಲಾಗಿದ್ದಾರೆ. 'ಇಷ್ಟು ದಿನ ನನ್ನ ಮಗ ನಮಗೆ ಧೈರ್ಯ ಹೇಳುತ್ತಿದ್ದ. ಈಗ ನಮ್ಮನ್ನು ಕರೆಸಿಕೊಳ್ಳಿ ಎಂದು ಹೇಳುತ್ತಿದ್ದಾನೆ. ಅವರಿಗೆ ಊಟ-ತಿಂಡಿ ಏನೂ ಸಿಗುತ್ತಿಲ್ಲ. ಆದಷ್ಟು ಬೇಗ ನನ್ನ ಮಗನನ್ನು ಕರೆಸಿಕೊಳ್ಳಿ' ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ.
ರಷ್ಯಾ -ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ. 160 ಕ್ಕೂ ಹೆಚ್ಚು ಶಿಕ್ಷಣ ಕೇಂದ್ರಗಳು ಉಡೀಸಾಗಿದೆ. ಬಂಕರ್ ನಲ್ಲೇ ಸಾವಿರಾರು ಮಂದಿ ಆಶ್ರಯ ಪಡೆದಿದ್ಧಾರೆ. ಅನ್ನ, ನೀರು, ಯಾವುದೂ ಇಲ್ಲದೇ ಬಂಕರ್ನಲ್ಲಿ ಸಾವಿರಾರು ಮಂದಿ ಪರದಾಡುತ್ತಿದ್ದಾರೆ. ಮನೆ ಮುಂದೆ ಬಿಳುವ ಹಿಮದ ಹನಿಯೇ ನೀರಿಗೆ ಆಸರೆಯಾಗಿದೆ. ಕಳೆದೆರಡು ದಿನಗಳಿಂದ ಅನ್ನ, ನೀರಿಲ್ಲದೇ ಪರದಾಡುತ್ತಿದ್ದಾರೆ.
ದಾವಣಗೆರೆಯ ವಿನಯ್ ಎಂಬ ವಿದ್ಯಾರ್ಥಿ ಉಕ್ರೇನ್ನಲ್ಲಿ ಸಿಲುಕಿದ್ದಾರೆ. ಪೋಷಕರು ಕಂಗಾಲಾಗಿದ್ದಾರೆ. 'ಇಷ್ಟು ದಿನ ನನ್ನ ಮಗ ನಮಗೆ ಧೈರ್ಯ ಹೇಳುತ್ತಿದ್ದ. ಈಗ ನಮ್ಮನ್ನು ಕರೆಸಿಕೊಳ್ಳಿ ಎಂದು ಹೇಳುತ್ತಿದ್ದಾನೆ. ಅವರಿಗೆ ಊಟ-ತಿಂಡಿ ಏನೂ ಸಿಗುತ್ತಿಲ್ಲ. ಆದಷ್ಟು ಬೇಗ ನನ್ನ ಮಗನನ್ನು ಕರೆಸಿಕೊಳ್ಳಿ' ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ.