Russia Ukraine Crisis: ಉಕ್ರೇನ್‌ನಲ್ಲಿರುವ ರಾಜ್ಯದ ಯಾರಿಗೂ ತೊಂದರೆಯಾಗಿಲ್ಲ: ಸಿಎಂ ಬೊಮ್ಮಾಯಿ

Russia Ukraine Crisis: ಉಕ್ರೇನ್‌ನಲ್ಲಿರುವ ರಾಜ್ಯದ ಯಾರಿಗೂ ತೊಂದರೆಯಾಗಿಲ್ಲ: ಸಿಎಂ ಬೊಮ್ಮಾಯಿ

Published : Feb 25, 2022, 11:55 AM ISTUpdated : Feb 25, 2022, 12:20 PM IST

*ಉಕ್ರೇನ್‌ನಲ್ಲಿ ಕರ್ನಾಟಕದ 135 ವಿದ್ಯಾರ್ಥಿಗಳು ಅತಂತ್ರ
*ಬಾಂಬ್‌ ದಾಳಿಯಿಂದ ಆತಂಕ ವಾಪಸ್‌ ಕರೆಸಿಕೊಳ್ಳುವಂತೆ ಮೊರೆ
*ವಿದೇಶಾಂಗ ಸಚಿವರ ಜತೆ ಸಿಎಂ ಬೊಮ್ಮಾಯಿ ಮಾತುಕತೆ

ಬೆಂಗಳೂರು (ಫೆ. 25): ಉಕ್ರೇನ್‌-ರಷ್ಯಾ ಕದನದಿಂದಾಗಿ ಉಕ್ರೇನ್‌ನಲ್ಲಿ ಓದುತ್ತಿರುವ ಕನ್ನಡಿಗ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲಿನ ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಕರ್ನಾಟಕದ 135 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಇದೀಗ ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಘೋಷಿಸಿ, ಬಾಂಬ್‌ ದಾಳಿ ಆರಂಭಿಸಿದ ಕಾರಣ ವಿದ್ಯಾರ್ಥಿಗಳೆಲ್ಲ ಜೀವಭಯದಿಂದ ಕಂಗಾಲಾಗಿದ್ದಾರೆ. ಈ ಮದ್ಯೆ ವಿದೇಶಾಂಗ ಸಚಿವರ ಜತೆ ಮಾತನಾಡಿದ್ದೇನೆ, ವಿದೇಶಾಂಗ ಕಾರ್ಯದರ್ಶಿ ಹಾಗೂ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಜತೆ ಸಂಪರ್ಕ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. 

ಇದನ್ನೂ ಓದಿRussia Ukraine Crisis: ಆಶ್ರಯ ಬೇಡಿ ಪೋಲೆಂಡ್ ಗೆ ತೆರಳಿದ ಉಕ್ರೇನ್ ಪ್ರಜೆಗಳು!

ಉಕ್ರೇನ್‌ನಲ್ಲಿರುವ ರಾಜ್ಯದ ಯಾರಿಗೂ ತೊಂದರೆಯಾಗಿಲ್ಲ, ಅಲ್ಲಿನ ರಾಯಭಾರಿ ಕಚೇರಿ ಜತೆ ನಿರಂತರ ಸಂಪರ್ಕದಲ್ಲಿದ್ದು, ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉಕ್ರೇನ್‌-ರಷ್ಯಾ ಯುದ್ಧದ ಸುದ್ದಿ ತಿಳಿಯುತ್ತಿದ್ದಂತೆ ಗುರುವಾರ ಬೆಳಗ್ಗೆಯಿಂದಲೇ ವಿದ್ಯಾರ್ಥಿಗಳ ಪೋಷಕರೂ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನಿರಂತರ ಕರೆ ಮಾಡಿ ಅವರ ಪರಿಸ್ಥಿತಿ ವಿಚಾರಿಸುತ್ತಿದ್ದಾರೆ. ಇನ್ನು ಬೆಳಗ್ಗೆಯಿಂದ ಸಂಪರ್ಕದಲ್ಲಿದ್ದ ಮಕ್ಕಳ ಮೊಬೈಲ್‌ ಸಂಜೆಯ ಹೊತ್ತಿಗೆ ಸಂಪರ್ಕಕ್ಕೆ ಸಿಗದೆ ಕೆಲ ಪೋಷಕರು ಭೀತಿಗೆ ಒಳಗಾಗಿದ್ದಾರೆ
 

26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
Read more