Russia Ukraine Crisis: ಉಕ್ರೇನ್‌ನಲ್ಲಿರುವ ರಾಜ್ಯದ ಯಾರಿಗೂ ತೊಂದರೆಯಾಗಿಲ್ಲ: ಸಿಎಂ ಬೊಮ್ಮಾಯಿ

Russia Ukraine Crisis: ಉಕ್ರೇನ್‌ನಲ್ಲಿರುವ ರಾಜ್ಯದ ಯಾರಿಗೂ ತೊಂದರೆಯಾಗಿಲ್ಲ: ಸಿಎಂ ಬೊಮ್ಮಾಯಿ

Published : Feb 25, 2022, 11:55 AM ISTUpdated : Feb 25, 2022, 12:20 PM IST

*ಉಕ್ರೇನ್‌ನಲ್ಲಿ ಕರ್ನಾಟಕದ 135 ವಿದ್ಯಾರ್ಥಿಗಳು ಅತಂತ್ರ
*ಬಾಂಬ್‌ ದಾಳಿಯಿಂದ ಆತಂಕ ವಾಪಸ್‌ ಕರೆಸಿಕೊಳ್ಳುವಂತೆ ಮೊರೆ
*ವಿದೇಶಾಂಗ ಸಚಿವರ ಜತೆ ಸಿಎಂ ಬೊಮ್ಮಾಯಿ ಮಾತುಕತೆ

ಬೆಂಗಳೂರು (ಫೆ. 25): ಉಕ್ರೇನ್‌-ರಷ್ಯಾ ಕದನದಿಂದಾಗಿ ಉಕ್ರೇನ್‌ನಲ್ಲಿ ಓದುತ್ತಿರುವ ಕನ್ನಡಿಗ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲಿನ ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಕರ್ನಾಟಕದ 135 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಇದೀಗ ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಘೋಷಿಸಿ, ಬಾಂಬ್‌ ದಾಳಿ ಆರಂಭಿಸಿದ ಕಾರಣ ವಿದ್ಯಾರ್ಥಿಗಳೆಲ್ಲ ಜೀವಭಯದಿಂದ ಕಂಗಾಲಾಗಿದ್ದಾರೆ. ಈ ಮದ್ಯೆ ವಿದೇಶಾಂಗ ಸಚಿವರ ಜತೆ ಮಾತನಾಡಿದ್ದೇನೆ, ವಿದೇಶಾಂಗ ಕಾರ್ಯದರ್ಶಿ ಹಾಗೂ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಜತೆ ಸಂಪರ್ಕ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. 

ಇದನ್ನೂ ಓದಿRussia Ukraine Crisis: ಆಶ್ರಯ ಬೇಡಿ ಪೋಲೆಂಡ್ ಗೆ ತೆರಳಿದ ಉಕ್ರೇನ್ ಪ್ರಜೆಗಳು!

ಉಕ್ರೇನ್‌ನಲ್ಲಿರುವ ರಾಜ್ಯದ ಯಾರಿಗೂ ತೊಂದರೆಯಾಗಿಲ್ಲ, ಅಲ್ಲಿನ ರಾಯಭಾರಿ ಕಚೇರಿ ಜತೆ ನಿರಂತರ ಸಂಪರ್ಕದಲ್ಲಿದ್ದು, ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉಕ್ರೇನ್‌-ರಷ್ಯಾ ಯುದ್ಧದ ಸುದ್ದಿ ತಿಳಿಯುತ್ತಿದ್ದಂತೆ ಗುರುವಾರ ಬೆಳಗ್ಗೆಯಿಂದಲೇ ವಿದ್ಯಾರ್ಥಿಗಳ ಪೋಷಕರೂ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನಿರಂತರ ಕರೆ ಮಾಡಿ ಅವರ ಪರಿಸ್ಥಿತಿ ವಿಚಾರಿಸುತ್ತಿದ್ದಾರೆ. ಇನ್ನು ಬೆಳಗ್ಗೆಯಿಂದ ಸಂಪರ್ಕದಲ್ಲಿದ್ದ ಮಕ್ಕಳ ಮೊಬೈಲ್‌ ಸಂಜೆಯ ಹೊತ್ತಿಗೆ ಸಂಪರ್ಕಕ್ಕೆ ಸಿಗದೆ ಕೆಲ ಪೋಷಕರು ಭೀತಿಗೆ ಒಳಗಾಗಿದ್ದಾರೆ
 

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
Read more