'ಅಪ್ಘಾನ್‌ನಲ್ಲಿ ಬೇರಾವ ದೇಶವೂ ಭಾರತ ಸರ್ಕಾರದ ಹಾಗೆ ತನ್ನ ನಾಗರಿಕರ ರಕ್ಷಣೆ ಮಾಡುತ್ತಿಲ್ಲ'

'ಅಪ್ಘಾನ್‌ನಲ್ಲಿ ಬೇರಾವ ದೇಶವೂ ಭಾರತ ಸರ್ಕಾರದ ಹಾಗೆ ತನ್ನ ನಾಗರಿಕರ ರಕ್ಷಣೆ ಮಾಡುತ್ತಿಲ್ಲ'

Published : Aug 23, 2021, 12:30 PM ISTUpdated : Aug 23, 2021, 12:50 PM IST

 ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ವಿಮಾನದ ಮೂಲಕ ಕರೆತರಲಾಗಿದ್ದು, ಈ ಪೈಕಿ ರಾಜ್ಯದ ಏಳು ಮಂದಿ ಕನ್ನಡಿಗರು ಸುರಕ್ಷಿತವಾಗಿ ದೇಶಕ್ಕೆ ಮರಳಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್‌ಗೆ ಕನ್ನಡಿಗರು ಬಂದಿದ್ದು, ಅಲ್ಲಿಂದ ಕರ್ನಾಟಕ ತಲುಪಲಿದ್ದಾರೆ.

ನವದೆಹಲಿ(ಆ.23) ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ವಿಮಾನದ ಮೂಲಕ ಕರೆತರಲಾಗಿದ್ದು, ಈ ಪೈಕಿ ರಾಜ್ಯದ ಏಳು ಮಂದಿ ಕನ್ನಡಿಗರು ಸುರಕ್ಷಿತವಾಗಿ ದೇಶಕ್ಕೆ ಮರಳಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್‌ಗೆ ಕನ್ನಡಿಗರು ಬಂದಿದ್ದು, ಅಲ್ಲಿಂದ ಕರ್ನಾಟಕ ತಲುಪಲಿದ್ದಾರೆ.

ಇನ್ನು ಏರ್‌ಲಿಫ್ಟ್‌ ಮೂಲಕ ಭಾರತಕ್ಕೆ ತಲುಪಿರುವ ಏಳು ಮಂದಿ ಕನ್ನಡಿಗರ ಪೈಕಿ ಮಂಗಳೂರಿನ ಮೂಡಬಿದರೆ ನಿವಾಸಿ ಜಗದಿಶ್ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ಆಗಸ್ಟ್‌ 15ವರೆಗೆ ನಮಗೆ ಯಾವ ಭಯವೂ ಕಾಡಲಿಲ್ಲ. ಎಲ್ಲವೂ ಸರಿಯಾಗಿತ್ತು. ಆದರೆ ಆಗಸ್ಟ್ 16ರಿಂದ ಜನರು ಏರ್ಪೋರ್ಟ್‌ಗೆ ನುಗ್ಗಲಾರಂಭಿಸಿದರು. ಏರ್‌ಬೇಸ್‌ನಲ್ಲಿ ಏಕಾಏಕಿ ಊಟವನ್ನೂ ನಿಲ್ಲಿಸಿಬಿಟ್ಟರು. ಆದರೆ ಅಮೆರಿಕ ಸೇನೆ ಭದ್ರತೆಯಲ್ಲಿ ನಾವು ಸುರಕ್ಷಿತವಾಗಿದ್ದೆವು. ನಿಜ ಹೇಳಬೇಕೆಂದರೆ ನಮ್ಮ ಭಾರತದ ರಾಯಭಾರಿ ಕಚೇರಿ ಮಾಡುವಷ್ಟು ಪರಿಶ್ರಮ ಯಾವ ದೇಶವೂ ಮಾಡುತ್ತಿಲ್ಲ. ನಾನಿಂದು ಇಲ್ಲಿಗೆ ಸುರಕ್ಷಿತವಾಗಿ ಬಂದಿದ್ದೇನೆಂದರೆ ನಮ್ಮ ಸರ್ಕಾರ ಕಾರಣ. ಯಾರೂ ಹೀಗೆ ತಮ್ಮ ನಾಗರಿಕರ ಬಗ್ಗೆ ತಲೆಕೆಡಿಸಿಕೊಳದ್ಳುತ್ತಿಲ್ಲ. ಜೈ ಭಾರತ' ಎಂದಿದ್ದಾರೆ.

ಕಳೆದ ಹತ್ತು ವರ್ಷದಿಂದ ಕಾಬೂಲ್‌ ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಜಗದೀಶ್ ಪೂಜಾರಿ, ಆಗಸ್ಟ್‌ ಆರಂಭದಲ್ಲಿ ಭಾರತಕ್ಕೆ ಬಂದಿದ್ದರು ಎಂಬುವುದು ಉಲ್ಲೇಖನೀಯ. 

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ