ವಿಜಯಪುರ: ಮತ್ತೆ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ರಸ್ತೆ

Published : Nov 06, 2019, 10:53 AM IST
ವಿಜಯಪುರ: ಮತ್ತೆ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ರಸ್ತೆ

ಸಾರಾಂಶ

ಜಿಲ್ಲೆಯಲ್ಲಿ ಭಾರೀ ಮಳೆ| ಕೊಚ್ಚಿ ಹೋದ ಸೇತುವೆ ಮೇಲಿನ ಡಾಂಬರ್| ಬರಟಗಿ ಎಲ್. ಟಿ-5 ರಸ್ತೆ ಸಂಪರ್ಕ ಕಡಿತ| ಕಳೆದ ಒಂದೂವರೆ ವರ್ಷದ ಹಿಂದೆ ಸೇತುವೆ ನಿರ್ಮಿಸಲಾಗಿತ್ತು|

ವಿಜಯಪುರ[ನ.6]:  ಜಿಲ್ಲೆಯಲ್ಲಿ ಸೊಮವಾರ ಸುರಿದ ಭಾರೀ ಮಳೆಗೆ  ಕೆರೆ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಿರಂತರವಾಗಿ ಸುರಿದ ಮಳೆಗೆ ಜಿಲ್ಲೆಯ ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿವೆ. ಭಾರೀ ಮಳೆಗೆ ಬರಟಗಿ ಬಳಿ ಸೇತುವೆಯ ಮೇಲ್ಭಾಗದ ಡಾಂಬರ್ ಕಿತ್ತು ಹೋಗಿದೆ. ಇದರಿಂದ ಬರಟಗಿ ಎಲ್. ಟಿ-5 ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ರಸ್ತೆಯ ಮೇಲಿನ ವಾಹನಗಳ ಸಂಚಾರ ಸ್ಥಗಿತಗೊಂಡಿದ್ದರಿಂದ ಬರಟಗಿ ಎಲ್.ಟಿ-5, ಗುಣಕಿ ಕಾನ್ನಾಳಗೆ ತೆರಳಲು ಸುಮಾರು 20 ಕಿ. ಮೀ. ಸುತ್ತುವರೆದು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈ ಸೇತುವೆಯನ್ನು ಕೇವಲ ಒಂದೂವರೆ ವರ್ಷದ ಹಿಂದೆ ನಿರ್ಮಿಸಲಾಗಿತ್ತು. ಇದೀಗ ಭಾರೀ ಮಳೆಗೆ ಸೇತುವೆ ಮೇಲಿನ ಡಾಂಬರ್ ಕಿತ್ತು ಹೋಗಿದೆ. ಇದರಿಂದ ಕಳಪೆ ಗುಣಮಟ್ಟದ ಕಾಮಗಾರಿಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

PREV
click me!

Recommended Stories

ವಿಜಯಪುರದ ಚಡಚಣದಲ್ಲಿ ಪತ್ತೆಯಾದ ನಿಗೂಢ ರಣಹದ್ದು: ಕಾಲಿನಲ್ಲಿರೋ ವಸ್ತು ನೋಡಿ ಜನರು ಶಾಕ್
ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಲೋಹದ ಹಕ್ಕಿಯ ಹಾರಾಟ ಆರಂಭ ಯಾವಾಗ?