
ಮಧ್ಯ ಪ್ರದೇಶ(ನ.22): ಸಾಮಾಜಿಕ ಮಾಧ್ಯಮ ವಿರುದ್ಧವೇ ಆರೋಪಗಳು ಕೇಳಿಬರುತ್ತಿರುವುದು ಮೊದಲೇನಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲಾಗುತ್ತಿದೆ ಅನ್ನೋ ಆರೋಪಗಳು ಹಲವು ಬಾರಿ ಕೇಳಿ ಬಂದಿದೆ. ಆದರೆ ಇದೀಗ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಜಾಲತಾಣದ ವಿರುದ್ಧವೇ ದೂರು ದಾಖಲಾಗಿದೆ. ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ಧ ಮಧ್ಯಪ್ರದೇಶದ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟ್ವಟರ್ಗೆ ಮತ್ತೊಂದು ಸಂಕಟ ತಂದ ಹಾಸ್ಯನಟ, ನ್ಯಾಯಾಂಗ ನಿಂದಿಸಿ ಧಿಮಾಕು!.
ಹಿಂದೂ ಸಂಸ್ಕೃತಿಯನ್ನು ಬಿಂಬಿಸುವ, ಹಿಂದೂ ಸಂಸ್ಕೃತಿಯ ಸಂಪ್ರದಾಯ ಹಾಗೂ ಮಹತ್ವ ಸಾರ ಹೇಳುವ ಟ್ರುಇಂಡೋಲಜಿ ಅನ್ನೋ ಟ್ವಿಟರ್ ಖಾತೆಯನ್ನು ಯಾವುದೇ ಮಾಹಿತಿ ನೀಡಿದೆ ಡಿಲೀಟ್ ಮಾಡಲಾಗಿದೆ. ಯಾವುದೇ ತಪ್ಪು ಮಾಹಿತಿ ನೀಡದ, ದ್ವೇಷವಿಲ್ಲದೆ ಮಾಹಿತಿ ನೀಡುತ್ತಿದ್ದ ಖಾತೆಯನ್ನು ಡಿಲೀಟ್ ಮಾಡಲಾಗಿದೆ ಎಂದು ಶ್ರೀಕಾಂತ್ ಶರ್ಮಾ, ಮನೀಶ್ ಮಹೇಶ್ವರಿ ವಿರುದ್ಧ ದೂರು ದಾಖಲಿಸಿದ್ದಾರೆ.
ದೀಪಾವಳಿ ಕುರಿತು ಪೋಸ್ಟ್ ಸಂಬಂಧಿಸಿ ಟ್ರುಇಂಡೋಲಜಿ ಖಾತೆಯನ್ನು ಡಿಲೀಟ್ ಮಾಡಲಾಗಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ ಎಂದು ಶ್ರೀಕಾಂತ್ ಶರ್ಮಾ ದೂರಿನಲ್ಲಿ ಆರೋಪಿಸಿದ್ದಾರೆ. ಕೊಟ್ವಾಲಿ ಪೊಲೀಸ್ ಠಾಣೆ ವಿರೇಂದ್ರ ಜಾ ದೂರು ದಾಖಲಿಸಿಕೊಂಡಿದ್ದಾರೆ. ಇದೀಗ ಎಡಪಂಥೀಯ ಒತ್ತಡಕ್ಕೆ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಈ ರೀತಿ ಕ್ರಮ ಕೈಗೊಂಡಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದೆ.
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.