
ನವದೆಹಲಿ(ಸೆ.13): ಭಾರತದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಬಲ ಅಸ್ತ್ರವಾಗಿದೆ. ರಾಜಕೀಯ, ಉದ್ಯಮ, ವ್ಯವಹಾರ, ಶಿಕ್ಷಣ, ಸಂಪರ್ಕ, ಸಂವಹನ ಸೇರಿದಂತೆ ಎಲ್ಲವೂ ಸಾಮಾಜಿಕ ಜಾಲತಾಣಗಳನ್ನೇ ಅವಲಂಬಿಸಿದೆ. ಅದರಲ್ಲೂ ಫೇಸ್ಬುಕ್ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಇದರೊಂದಿಗೆ ಅಷ್ಟೇ ಆತಂಕ ಸೃಷ್ಟಿ ಮಾಡುತ್ತಿದೆ. ಫೇಸ್ಬುಕ್ ಪೋಸ್ಟ್ನಿಂದ ಹಲವು ಆವಾಂತರಗಳು, ಗಲಭೆಗಳು ನಡೆದಿದೆ. ಇದೀಗ ದೆಹಲಿ ವಿಧಾನಸಭೆ ಸಮಿತಿ ಫೇಸ್ಬುಕ್ ಇಂಡಿಯಾದ ಉಪಾಧ್ಯಕ್ಷ ಅಜಿತ್ ಮೋಹನ್ಗೆ ಸಮನ್ಸ್ ನೀಡಿದೆ.
'ಪೋಸ್ಟ್ ಮಾಡುವ ಮುನ್ನ ಎಚ್ಚರ' ಫೇಸ್ಬುಕ್ನಿಂದ ಬಿಜೆಪಿ ಶಾಸಕನಿಗೆ ಗೇಟ್ ಪಾಸ್!.
ಭಾರತದಲ್ಲಿ ಫೇಸ್ಬುಕ್ ಪಕ್ಷಪಾತ ನೀತಿ ಅನುಸರಿಸುತ್ತಿದೆ. ಉದ್ದೇಶ ಪೂರ್ವಕವಾಗಿ ದ್ವೇಷಪೂರಿತ ಭಾಷಣಗಳನ್ನು ಫೇಸ್ಬುಕ್ ನಿಯಂತ್ರಿಸುತ್ತಿಲ್ಲ. ಇದರಿಂದ ಕೋಮು ಸಹೌರ್ಧಕ್ಕೆ ಧಕ್ಕೆಯಾಗಿದೆ. ಶಾಂತಿ ಕದಡುವಲ್ಲಿ ಫೇಸ್ಬುಕ್ ಕಾರಣಾಗುತ್ತಿದೆ ಎಂದು ದೆಹಲಿ ವಿಧಾನಸಭೆ ಶಾಂತಿ ಹಾಗೂ ಸೌಹಾರ್ಧ ಸಮಿತಿ ಫೇಸ್ಬುಕ್ ಇಂಡಿಯಾಗೆ ಸಮನ್ಸ್ ಜಾರಿ ಮಾಡಿದೆ. ಸೆಪ್ಟೆಂಬರ್ 15 ರಂದು 12 ಮಧ್ಯಾಹ್ನ 12ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡ ದೆಹಲಿ ವಿಧಾನಸಭಾ ಶಾಂತಿ ಮತ್ತು ಸೌಹಾರ್ಧ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಈ ಸಮಿತಿ ವಿಚಾರಣೆ ಎದುರಿಸುವಂತೆ ಸಮನ್ಸ್ ನೀಡಿದೆ. ದ್ವೇಷಪೂರಿತ ಭಾಷಣ, ಬರಹ, ಫೋಟೋ, ವಿಡಿಯೋಗಳನ್ನು ಫೇಸ್ಬುಕ್ ನಿರ್ಬಂಧಿಸಲಿದೆ. ಫೇಸ್ಬುಕ್ ನಿಯಮ ಮೀರಿದರೆ ಖಾತೆಗಳನ್ನು ನಿರ್ಬಂಧಿಸಲಾಗುವುದು ಎಂದು ಕಳೆದ ತಿಂಗಳು ಫೇಸ್ಬುಕ್ ಇಂಡಿಯಾ ಹೇಳಿತ್ತು.
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.