ಪೆಗಾಸಸ್ ಪೂರ್ವನಿಯೋಜಿತ ಪಿತೂರಿ; ಕಾಂಗ್ರೆಸ್ ರಾಜಕೀಯದಾಟ ತೆರೆದಿಟ್ಟ ರವಿಶಂಕರ್ ಪ್ರಸಾದ್!

Published : Jul 19, 2021, 08:51 PM ISTUpdated : Jul 19, 2021, 08:53 PM IST
ಪೆಗಾಸಸ್ ಪೂರ್ವನಿಯೋಜಿತ ಪಿತೂರಿ; ಕಾಂಗ್ರೆಸ್ ರಾಜಕೀಯದಾಟ ತೆರೆದಿಟ್ಟ ರವಿಶಂಕರ್ ಪ್ರಸಾದ್!

ಸಾರಾಂಶ

ಪೆಗಾಸಸ್ ಆರೋಪಕ್ಕೆ ಮಾಜಿ ಐಟಿ ಸಚಿವ ರವಿ ಶಂಕರ್ ಪ್ರಸಾದ್ ತಿರುಗೇಟು ಕಾಂಗ್ರೆಸ್ ಪೂರ್ವನಿಯೋಜಿತ ಪಿತೂರಿ ಪೆಗಾಸಸ್, ಇದು ಕಾಂಗ್ರೆಸ್ ಪರಿಸ್ಥಿತಿ ಆಧಾರ ರಹಿತ ಕಾಂಗ್ರೆಸ್ ಆರೋಪಕ್ಕೆ ಉತ್ತರ ನೀಡಿದ ಪ್ರಸಾದ್

ನವದೆಹಲಿ(ಜು.19): ಅಂತಾರಾಷ್ಟ್ರೀಯ ಸಂಸ್ಥೆಗಳು ಭಾರತ ವಿರೋಧಿ ಚಟುವಟಿಕೆ ಯತ್ನಿಸುತ್ತಲೇ ಇದೆ. ಇದರ ಜೊತೆಗೆ ಕಾಂಗ್ರೆಸ್ ಕೂಡ ಸೇರಿಕೊಂಡು ಭಾರತವನ್ನು ಅವಮಾನಿಸುವ ಯತ್ನ ಮಾಡುತ್ತಿದೆ. ಇದಕ್ಕೆ ಪೆಗಾಸಸ್ ಆರೋಪ ಕೂಡ ಒಂದಾಗಿದೆ ಎಂದು ಮಾಜಿ ಐಟಿ ಸಚಿವ ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ. ಕಾಂಗ್ರೆಸ್ ಪೆಗಾಸಸ್ ಆರೋಪಕ್ಕೆ ಖಡಕ್ ಉತ್ತರ ನೀಡಿರುವ ಪ್ರಸಾದ್, ದೇಶದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಿತೂರಿಯನ್ನು ಬಿಚ್ಚಿಟ್ಟಿದ್ದಾರೆ.

ಭಾರತವನ್ನು ಅವಮಾನಿಸುವ ಯತ್ನ; ಪ್ರತಿಪಕ್ಷದ ಪೆಗಾಸಸ್ ಆರೋಪಕ್ಕೆ ಅಮಿತ್ ಶಾ ತಿರುಗೇಟು!

ಮುಂಗಾರು ಅಧಿವೇಶನಕ್ಕೆ ಅಡ್ಡಿಪಡಿಸಲು ಪೆಗಾಸಸ್ ವರದಿ ಹರಿಬಿಡಲಾಗಿದೆ. 2019ರ ಚುನಾವಣೆ ವೇಳೆಯೂ ಪೆಗಾಸಸ್ ಕತೆ ಪ್ರಸಾರ ಮಾಡಲಾಗಿತ್ತು. ಇನ್ನು ಟ್ರಂಪ್ ಭಾರತ ಭೇಟಿ ವೇಳೆ ಗಲಭೆಗೆ ಪ್ರಚೋದನೆ ನೀಡಲಾಗಿತ್ತು. 50ಕ್ಕೂ ಹೆಚ್ಚು ವರ್ಷ ದೇಶ ಆಳಿದ ಕಾಂಗ್ರೆಸ್ ಇದೀಗ ಹೀನಾಯ ಸ್ಥಿತಿಗೆ ತಲುಪಿದೆ. ಹೇಗಾದರೂ ಮಾಡಿ ಅಧಿಕಾರ ಹಿಡಿಯಲು ಯಾವಮಟ್ಟಕ್ಕೂ ಇಳಿಯಲು ಕಾಂಗ್ರೆಸ್ ಹಿಂಜರಿಯುವುದಿಲ್ಲ ಎಂದು ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ.

 

ಪೆಗಾಸಸ್ ವರದಿ ಭಾರತೀಯ ಪ್ರಜಾಪ್ರಭುತ್ವ ಕೆಣಕುವ ಪ್ರಯತ್ನ; IT ಸಚಿವ ಅಶ್ವಿನಿ ವೈಷ್ಣವ್!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ,  ಪತ್ರಕರ್ತರು, ಸಾಮಾಜಿ ಕಾರ್ಯಕರ್ತರು ಸೇರಿದಂತೆ ಪ್ರತಿಪಕ್ಷದ ನಾಯಕರ ಮೇಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪೆಗಾಸಸ್ ಸ್ಪೈವೇರ್ ನಡೆಸಿದ್ದಾರೆ. ಈ ಮೂಲಕ ಅವರ ಡೇಟಾ ಕದಿಯುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇಷ್ಟೇ ಅಲ್ಲ ಅಮಿತ್ ಶಾ ರಾಜೀನಾಮೆಗೂ ಒತ್ತಾಯಿಸಿದೆ.

Spyware Pegasus: 'ಟಾರ್ಗೆಟ್‌' ಪಟ್ಟಿಯಲ್ಲಿ ರಾಗಾ, ಪಿಕೆ, ಇಬ್ಬರು ಕೇಂದ್ರ ಸಚಿವರ ಹೆಸರು!

ಪೆಗಾಸಸ್‌ ಆರೋಪದಲ್ಲಿ ಭಾರತ ಸರ್ಕಾರ ಅಥಾವ ಬಿಜೆಪಿಯ ಯಾವುದೇ ಸಂಪರ್ಕವಿಲ್ಲ. ಅಮ್ನೆಸ್ಟಿಯಂತಹ ಹಲವು ಸಂಸ್ಥೆಗಳು ಭಾರತ ವಿರೋಧಿ ಚಟುವಟಿಕೆ ನಡೆಸುತ್ತಿತ್ತು. ಈ ಚಟುವಟಿಕೆಗೆ ಬಳಸುವ ಹಣಕಾಸು ಮೂಲವನ್ನು ಕೇಳಿದರೆ, ಭಾರತದಲ್ಲಿ ಕೆಲಸ ಮಾಡುವುದೇ ಕಷ್ಟ ಎಂಬ ಸಬೂಬು ನೀಡಿತ್ತು. ಇದೀಗ ಮುಂಗಾರು ಅಧಿವೇಶನಕ್ಕೂ ಮುನ್ನ ಪೆಗಾಸಸ್ ಸುದ್ದಿ ಹರಿಬಿಟ್ಟಿರುವುದೇಕೆ? ಎಂದು ರವಿ ಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.

 

NSO ಕಂಪನಿ ಪೆಗಾಸಸ್ ಬಳಕೆ ಮಾಡುತ್ತಿರುವುದು ಪಾಶ್ಚಿಮಾತ್ಯ ದೇಶದಲ್ಲಿ. ಆದರೆ ಭಾರತವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ.

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

click me!

Recommended Stories

Elon Musk’s Bold Forecast: ಪವರ್ ಪಾಯಿಂಟ್: 20 ವರ್ಷ ಬಳಿಕ ನೀವು ಬೇಕಿದ್ದರೆ ಕೆಲಸ ಮಾಡಬಹುದು! -ಎಲಾನ್ ಮಸ್ಕ್
ವ್ಯಾಟ್ಸಾಪ್‌ಗೆ ಠಕ್ಕರ್, ಚಾಟ್‌ಜಿಪಿಟಿಯಿಂದ ಗ್ರೂಪ್ ಚಾಟ್ ಫೀಚರ್ ಲಾಂಚ್, ಬಳಕೆ ಹೇಗೆ?