
ನವದೆಹಲಿ[ನ.21]: ಭಾರೀ ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿರುವ ಟೆಲಿಕಾಂ ಕಂಪನಿಗಳ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ.
ಸ್ಪೆಕ್ಟ್ರಂ ಖರೀದಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಪಾವತಿ ಮಾಡಬೇಕಿರುವ ಸುಮಾರು 42000 ಕೋಟಿ ರು. ಹಣ ಪಾವತಿ ಅವಧಿಯನ್ನು ಸರ್ಕಾರ ಎರಡು ವರ್ಷಗಳ ಕಾಲ ಮುಂದೂಡಿದೆ.
ಇದರಿಂದಾಗಿ ತಕ್ಷಣಕ್ಕೆ ಭಾರೀ ಮೊತ್ತ ಪಾವತಿಯ ಅನಿವಾರ್ಯತೆಗೆ ಸಿಲುಕಿದ್ದ ಏರ್ಟೆಲ್, ವೊಡಾಫೋನ್- ಐಡಿಯಾ ಮತ್ತು ರಿಲಯನ್ಸ್ ಜಿಯೋ ಕಂಪನಿಗಳು ನೆಮ್ಮದಿಯ ಉಸಿರು ಬಿಡುವಂತಾಗಿದೆ.
ಈ ಕಂಪನಿಗಳು 2020-21 ಮತ್ತು 2021-22ನೇ ವರ್ಷಕ್ಕೆ ಪಾವತಿಸಬೇಕಿರುವ ಶುಲ್ಕವನ್ನು 2022-23ರ ಹಣಕಾಸು ವರ್ಷದಲ್ಲಿ ಪಾವತಿಸಬೇಕಾಗುತ್ತದೆ. ಜೊತೆಗೆ ವಿಸ್ತರಿತ ಅವಧಿಗೆ ತಗಲುವ ಬಡ್ಡಿಯನ್ನು ಕಂಪನಿಗಳು ಪಾವತಿಸಬೇಕು ಎಂದು ಸರ್ಕಾರ ಸೂಚಿಸಿದೆ.
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.