ಬುರ್ಜ್ ಖಲೀಫಾದಲ್ಲಿ ಮೂಡಿಬಂದ ಶ್ರೀರಾಮ? ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೋಟೋಗಳು ವೈರಲ್

Published : Jan 23, 2024, 12:49 PM ISTUpdated : Jan 23, 2024, 12:51 PM IST
ಬುರ್ಜ್ ಖಲೀಫಾದಲ್ಲಿ ಮೂಡಿಬಂದ ಶ್ರೀರಾಮ? ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೋಟೋಗಳು ವೈರಲ್

ಸಾರಾಂಶ

ಈ ಫೋಟೋಗಳನ್ನು ಹಂಚಿಕೊಂಡ ಸಾಮಾಜಿಕ ಜಾಲತಾಣ ಬಳಕೆದಾರರು ಇದು ನಿಜವೆಂದು ತಿಳಿದು ಶೇರ್‌ ಮಾಡಿದರು. ಆದರೆ, ಇದು ಡಿಜಿಟಲ್‌ ಆಗಿ ಮಾರ್ಪಡಿಸಲಾಗಿದೆ. 

ನವದೆಹಲಿ (ಜನವರಿ 23, 2024): ಸೋಮವಾರ ನಡೆದ ಭವ್ಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಅಯೋಧ್ಯೆಯಲ್ಲಿ ಸಾವಿರಾರು ಜನರು ಬೀದಿಗಳಲ್ಲಿ ನೃತ್ಯ ಮಾಡಿದರು, ಕೇಸರಿ ಧ್ವಜಗಳು ರಾರಾಜಿಸುತ್ತಿದ್ದವು ಮತ್ತು ಜೈ ಶ್ರೀರಾಮ್‌ ಮುಂತಾದ ಘೋಷಣೆಗಳನ್ನು ಕೂಗಿದರು. ಹಾಗೆ, ಸಹಸ್ರ ಸಹಸ್ರ ಮಂದಿ ಆನ್‌ಲೈನ್‌ನಲ್ಲಿ ಸಮಾರಂಭವನ್ನು ನೇರಪ್ರಸಾರ ವೀಕ್ಷಿಸಿದರು. 

ಈ ಸಂತಸದ ಜತೆಗೆ, ಹಲವಾರು ನಕಲಿ ಮತ್ತು ಡಿಜಿಟಲ್‌ ಆಗಿ ಮಾರ್ಪಡಿಸಿರೋ (Digitally Altered) ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗ್ತಿದ್ದು, ಸಾಕಷ್ಟು ಜನರ ಗಮನ ಸೆಳೆದಿದೆ. ಅವುಗಳಲ್ಲಿ ಒಂದು ದುಬೈನ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಭಗವಾನ್ ರಾಮನ ಫೋಟೋಗಳನ್ನು ಪ್ರೊಜೆಕ್ಟರ್‌ನಲ್ಲಿ ಪ್ರದರ್ಶಿಸಲಾಗಿದೆ. ಎಂಬುದು. ಈ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಎರಡು ಮಿಲಿಯನ್‌ಗೂಹೆಚ್ಚು ವೀಕ್ಷಣೆಗಳನ್ನು ಸಂಗ್ರಹಿಸಿದೆ ಮತ್ತು ಆನ್‌ಲೈನ್‌ನಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.

ಮುಗುಳ್ನಕ್ಕೂ ತಲೆಯಲ್ಲಾಡಿಸುವ ರಾಮಲಲ್ಲಾ: ಮೈ ರೋಮಾಂಚನಗೊಳಿಸುತ್ತಿದೆ ಎಐ ಸೃಷ್ಟಿಸಿದ ವೀಡಿಯೋ

ಈ ಫೋಟೋ ಹೊಳೆಯುತ್ತಿರುವ ಬುರ್ಜ್ ಖಲೀಫಾವನ್ನು ತೋರಿಸುತ್ತದೆ ಮತ್ತು ಭಗವಾನ್ ರಾಮ ಋಷಿಯಂತೆ ಧರಿಸಿರುವ ಫೋಟೋ ಹಾಗೂ ಇತರೆ ಫೋಟೋಗಳನ್ನು ತೋರಿಸುತ್ತದೆ (ರಾಮನ ವನವಾಸದ ವರ್ಷಗಳನ್ನು ಚಿತ್ರಿಸುತ್ತದೆ) ಜೊತೆಗೆ 'ಜೈ ಶ್ರೀ ರಾಮ್' ಎಂದು ಬರೆಯಲಾಗಿದೆ.

ಈ ಫೋಟೋಗಳನ್ನು ಹಂಚಿಕೊಂಡ ಸಾಮಾಜಿಕ ಜಾಲತಾಣ ಬಳಕೆದಾರರು ಇದು ನಿಜವೆಂದು ತಿಳಿದು ಶೇರ್‌ ಮಾಡಿದರು. ಆದರೆ, ಕೆಲವರು ಈ ಫೋಟೋ ನಿಜವೇ ಎಂದೂ ಪ್ರಶ್ನಿಸಿದ್ದರು. ಅಲ್ಲದೆ, ಇದು ಫೋಟೋಶಾಪ್‌ ಅಲ್ಲ, ಆದರೆ, ಇದನ್ನು ಡಿಜಿಟಲ್ ಆಗಿ ಮಾರ್ಪಡಿಸಲಾಗಿದೆ. ಜೈ ಶ್ರೀ ರಾಮ್ ಎಂದು ಕೆಲ ಬಳಕೆದಾರರು ಹೇಳಿದ್ದರು.

ರಾಮ ಮಂದಿರ ಆಯ್ತು, ಈಗ ನೂತನ ರಾಮ ಸೇತುಗೆ ಪ್ಲ್ಯಾನ್: ಭಾರತ - ಶ್ರೀಲಂಕಾ ನಡುವೆ ಶೀಘ್ರ 23 ಕಿ.ಮೀ. ಉದ್ದದ ಸಮುದ್ರ ಸೇತುವೆ!

ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಇದನ್ನು ಹುಡುಕಿದರೆ ಈ ಫೋಟೋ ಅಸಲಿಯಲ್ಲ ಎಂದು ತಿಳಿದುಬರುತ್ತದೆ. ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್‌ ಖಲೀಫಾದಿಂದ ಯಾವುದೇ ಸಂದರ್ಭವನ್ನು ಆಚರಿಸಿದಾಗ, ಚಿತ್ರಗಳನ್ನು ಅದರ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತದೆ. ಆದರೆ ಅಂತಹ ಯಾವುದೇ ಪೋಸ್ಟ್ ಅನ್ನು ಅದರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಹಂಚಿಕೊಂಡಿಲ್ಲ.

ಇದೇ ರೀತಿಯ ಘಟನೆಯು ಏಪ್ರಿಲ್ 2023 ರಲ್ಲೂ ನಡೆದಿತ್ತು, ಆದರೆ ಅದು ಕೂಡ ನಕಲಿ ಎಂದು ತಿಳಿದುಬಂದಿತ್ತು. ಈ ಮಧ್ಯೆ, ಹೊಸ ರಾಮ್ ಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಿದ ಒಂದು ದಿನದ ನಂತರ ಅಯೋಧ್ಯೆಯ ರಾಮ ಮಂದಿರದ ಬಾಗಿಲು ಮಂಗಳವಾರ ಸಾರ್ವಜನಿಕರಿಗೆ ತೆರೆಯಿತು. ಸೋಮವಾರ ತಡರಾತ್ರಿಯಿಂದಲೇ ಸ್ಥಳೀಯರು ಹಾಗೂ ಇತರೆ ರಾಜ್ಯಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಮುಖ್ಯದ್ವಾರದ ಹೊರಗೆ ಜಮಾಯಿಸಿ ಆವರಣ ಪ್ರವೇಶಿಸಲು ಕಾಯುತ್ತಿದ್ದರು. ದೇವಸ್ಥಾನದ ಬಾಗಿಲು ತೆರೆಯುವ ಮುನ್ನ ಕೊರೆಯುವ ಚಳಿಯಲ್ಲಿ ಗಂಟೆಗಟ್ಟಲೆ ಕಾಯಬೇಕಾಯಿತು.  

ಭೂಮಿಯ ಮೇಲಿನ ಅತ್ಯಂತ ಅದೃಷ್ಟಶಾಲಿ ವ್ಯಕ್ತಿ ನಾನು: ಅರುಣ್‌ ಯೋಗಿರಾಜ್

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

Read more Articles on
click me!

Recommended Stories

Elon Musk’s Bold Forecast: ಪವರ್ ಪಾಯಿಂಟ್: 20 ವರ್ಷ ಬಳಿಕ ನೀವು ಬೇಕಿದ್ದರೆ ಕೆಲಸ ಮಾಡಬಹುದು! -ಎಲಾನ್ ಮಸ್ಕ್
ವ್ಯಾಟ್ಸಾಪ್‌ಗೆ ಠಕ್ಕರ್, ಚಾಟ್‌ಜಿಪಿಟಿಯಿಂದ ಗ್ರೂಪ್ ಚಾಟ್ ಫೀಚರ್ ಲಾಂಚ್, ಬಳಕೆ ಹೇಗೆ?