ಬಲೂಚಿ ಬಂಡುಕೋರರ ಅವಳಿ ದಾಳಿಗೆ 14 ಪಾಕ್‌ ಯೋಧರು ಬಲಿ

Published : May 09, 2025, 05:34 AM IST
ಬಲೂಚಿ ಬಂಡುಕೋರರ ಅವಳಿ ದಾಳಿಗೆ 14 ಪಾಕ್‌ ಯೋಧರು ಬಲಿ

ಸಾರಾಂಶ

ಆಪರೇಷನ್‌ ಸಿಂದೂರ್‌ನಿಂದ ತತ್ತರಿಸಿರುವ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ 2 ಪ್ರತ್ಯೇಕ ದಾಳಿಗಳು ನಡೆದಿದ್ದು, ಅದರಲ್ಲಿ 14 ಪಾಕ್‌ ಸೈನಿಕರು ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದೆ. 

ಇಸ್ಲಾಮಾಬಾದ್‌ (ಮೇ.09): ಆಪರೇಷನ್‌ ಸಿಂದೂರ್‌ನಿಂದ ತತ್ತರಿಸಿರುವ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ 2 ಪ್ರತ್ಯೇಕ ದಾಳಿಗಳು ನಡೆದಿದ್ದು, ಅದರಲ್ಲಿ 14 ಪಾಕ್‌ ಸೈನಿಕರು ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದೆ. ದಾಳಿಯ ಹೊಣೆಯನ್ನು ಬಲೂಚ್‌ ಲಿಬರೇಷನ್‌ ಆರ್ಮಿ(ಬಿಎಲ್‌ಎ) ಹೊತ್ತುಕೊಂಡಿದೆ. 

ಮೊದಲ ದಾಳಿಯನ್ನು ಬಿಎಲ್‌ಎನ ವಿಶೇಷ ಯುದ್ಧತಂತ್ರದ ಕಾರ್ಯಾಚರಣೆ ದಳ ರಿಮೋಟ್‌ ಚಾಲಿತ ಸುಧಾರಿತ ಸ್ಫೋಟಕ ಬಳಸಿ ಬೋಲನ್ ಮಾಚ್‌ ಪ್ರದೇಶದಲ್ಲಿ ಸಾಗುತ್ತಿದ್ದ ಪಾಕ್‌ ಸೇನಾ ಬೆಂಗಾವಲು ಪಡೆಯ ಮೇಲೆ ನಡೆಸಿದೆ. ಇದರಲ್ಲಿ 12 ಸೈನಿಕರು ಹತರಾಗಿದ್ದಾರೆ. ಕೆಚ್‌ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯ ದಳವನ್ನು ಗುರಿಯಾಗಿಸಿ ನಡೆಸಿದ ಇನ್ನೊಂದು ದಾಳಿಯಲ್ಲಿ 2 ಯೋಧರು ಮೃತಪಟ್ಟಿದ್ದಾರೆ.

ರೌಫ್‌ ದಾಳಿಗೆ ಬಲಿ?: ಭಾರತ ನಡೆಸಿದ ಆಪರೇಷನ್‌ ಸಿಂದೂರದಲ್ಲಿ ತನ್ನ 10 ಸಂಬಂಧಿಕರು ಮತ್ತು 4 ಆಪ್ತರನ್ನು ಕಳೆದುಕೊಂಡ ಜೈಷ್-ಎ-ಮೊಹಮ್ಮದ್‌ ಉಗ್ರಸಂಘಟನೆಯ ಸ್ಥಾಪಕ ಮಸೂದ್‌ ಅಜರ್‌ನ ಸಹೋದರ ಅಬ್ದುಲ್ ರೌಫ್ ಅಜರ್‌ ಕೂಡ ಈ ದಾಳಿಯಲ್ಲಿ ಹತನಾಗಿದ್ದಾನೆ ಎಂದು ವರದಿಯಾಗಿದೆ. ಬಿಜೆಪಿ ಕೂಡ ಈತ ಹತ್ಯೆ ಆಗಿದ್ದಾನೆ ಎಂದು ಟ್ವೀಟ್‌ ಮಾಡಿದೆ. ಇನ್ನೊಂದು ವರದಿ ಪ್ರಕಾರ, ಆತ ತೀವ್ರವಾಗಿ ಗಾಯಗೊಂಡಿದ್ದು, ಪಾಕಿಸ್ತಾನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದೂ ಹೇಳಲಾಗಿದೆ. ಒಟ್ಟಿನಲ್ಲಿ ರೌಫ್ ಅಜರ್‌ ಸ್ಥಿತಿಯ ಬಗ್ಗೆ ಗೊಂದಲಕಾರಿ ವರದಿಗಳು ಹೊರಬರುತ್ತಿದ್ದು, ಸ್ವತಂತ್ರವಾಗಿ ಯಾರೂ ದೃಢೀಕರಿಸಿಲ್ಲ.

ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ: ಪಾಕ್‌ನಾದ್ಯಂತ ಯುದ್ಧದ ಕಾರ್ಮೋಡ

ಜೈಷ್‌ ಸಂಘಟನೆಯ ಮುಖ್ಯ ಕಚೇರಿಯಿದ್ದ ಬಹಾವಲ್ಪುರದ ಜಾಮಿಯಾ ಮಸೀದಿಯ ಮೇಲೆಯೂ ಭಾರತ ಕ್ಷಿಪಣಿಗಳ ಮಳೆಗೆರೆದಿದ್ದು, ಇದರಲ್ಲಿ ಮಸೂದ್‌ ಅಜರ್‌ನ ಪರಿವಾರದವರು ಮತ್ತು ಆಪ್ತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜೈಷ್‌ ಉಗ್ರಸಂಘಟನೆಯ ಸ್ಥಾಪಕ ಮಸೂದ್‌ ಅಜರ್‌ನ ಸಹೋದರನಾಗಿರುವ ರೌಫ್‌, ಅದರ 2ನೇ ಕಮಾಂಡರ್‌ ಆಗಿದ್ದಾನೆ. 1999ರಲ್ಲಿ ಮಸೂದ್‌ ಬಿಡುಗಡೆಗೆ ಆಗ್ರಹಿಸಿ ನಡೆದ ಕಂದಹಾರ್‌ ವಿಮಾನ ಅಪಹರಣದ ಹಿಂದೆ ಇದ್ದ ಈತ, 2001ರ ಸಂಸತ್‌ ದಾಳಿ, 2003ರಲ್ಲಿ ನಡೆದ ನಗರೋಟಾ ಸೇನಾ ಕ್ಯಾಂಪ್‌ ಮೇಲಿನ ದಾಳಿ, 2019ರ ಪುಲ್ವಾಮಾ ದಾಳಿಗಳಲ್ಲೂ ಮಹತ್ವದ ಪಾತ್ರ ವಹಿಸಿದ್ದ. ರೌಫ್‌ ಅಜರ್‌, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಾಂಟೆಡ್‌ ಪಟ್ಟಿಯಲ್ಲಿಯೂ ಇದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುರುಷರ ಕೊರತೆ: ಈ ದೇಶದಲ್ಲಿ ಗಂಡನ ಬಾಡಿಗೆಗೆ ಪಡೆಯುತ್ತಾರೆ ಹೆಣ್ಣು ಮಕ್ಕಳು
ಅಸ್ವಸ್ಥ ಖಲೀದಾ ಜಿಯಾ ಹೆಚ್ಚಿನ ಚಿಕಿತ್ಸೆಗೆ ನಾಳೆ ಲಂಡನ್‌ಗೆ