ದಕ್ಷಿಣ ಆಫ್ರಿಕಾದಿಂದ ಚೆನ್ನೈಗೆ ರೋಗಿ ಏರ್‌ಲಿಫ್ಟ್!

Published : May 12, 2020, 11:33 AM IST
ದಕ್ಷಿಣ ಆಫ್ರಿಕಾದಿಂದ  ಚೆನ್ನೈಗೆ ರೋಗಿ ಏರ್‌ಲಿಫ್ಟ್!

ಸಾರಾಂಶ

ದೂರದ ದಕ್ಷಿಣ ಆಫ್ರಿಕಾದಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಆಂಧ್ರಪ್ರದೇಶದ ವ್ಯಕ್ತಿ| ದಕ್ಷಿಣ ಆಫ್ರಿಕಾದಿಂದ ಚೆನ್ನೈಗೆ ರೋಗಿ ಏರ್‌ಲಿಫ್ಟ್‌| ಏರ್‌ ಆ್ಯಂಬುಲೆನ್ಸ್‌ನಲ್ಲಿ ಅತಿದೊಡ್ಡ ಆಪರೇಷನ್‌

ಚೆನ್ನೈ(ಮೇ.12): ದೂರದ ದಕ್ಷಿಣ ಆಫ್ರಿಕಾದಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಆಂಧ್ರಪ್ರದೇಶದ ವ್ಯಕ್ತಿಯೊಬ್ಬರನ್ನು ಏರ್‌ ಆ್ಯಂಬುಲೆನ್ಸ್‌ ಮೂಲಕ ಸೋಮವಾರ ಸಂಜೆ ಚೆನ್ನೈಗೆ ಕರೆತರಲಾಗಿದೆ. ಇದು ಭಾರತೀಯ ಏರ್‌ ಆ್ಯಂಬುಲೆನ್ಸ್‌ವೊಂದು ನಡೆಸಿದ ಅತಿ ದೂರದ ರಕ್ಷಣಾ ಕಾರ್ಯಾಚರಣೆಯಾಗಿದೆ.

ಇಂಟರ್‌ನ್ಯಾಷನಲ್‌ ಕ್ರಿಟಿಕಲ್‌ ಕೇರ್‌ ಏರ್‌ ಟ್ರಾನ್ಸ್‌ಫರ್‌ ಟೀಮ್‌ (ಐಸಿಎಟಿಟಿ)ನ ಲಿಯರ್‌ಜೆಟ್‌-45 ಏರ್‌ ಆ್ಯಂಬುಲೆನ್ಸ್‌ ನಾಲ್ಕು ದಿನಗಳ ಕಾರ್ಯಾಚರಣೆಯ ಬಳಿಕ ಸೋಮವಾರ ಸಂಜೆ 6 ಗಂಟೆಗೆ ಚೆನ್ನೈಗೆ ಬಂದಿಳಿದಿದೆ.

ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಲ್ಲಿ ಬ್ಯಾಂಕ್‌ ಆಫ್‌ ಬರೋಡಾ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿರುವ ನೆಲ್ಲೂರು ಮೂಲದ ವಿಜಯ್‌ ಯಾಸಮ್‌ (47) ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಭಾರತಕ್ಕೆ ಬಂದು ಚಿಕಿತ್ಸೆ ಮುಂದುವರಿಸಲು ಮತ್ತು ಕುಟುಂಬ ಸದಸ್ಯರನ್ನು ಸೇರಿಕೊಳ್ಳಲು ಬಯಸಿದ್ದರು. ಹೀಗಾಗಿ ಬ್ಯಾಂಕ್‌ ಆಫ್‌ ಬರೋಡಾದ ಅಧಿಕಾರಿಗಳು ಐಸಿಎಟಿಟಿಯನ್ನು ಸಂಪರ್ಕಿಸಿ ಆರ್‌ ಆ್ಯಂಬುಲೆನ್ಸ್‌ ಸೇವೆಗೆ ಬೇಡಿಕೆ ಇಟ್ಟಿದ್ದರು.

ಕೊರೋನಾ ವೈರಸ್‌ ಲಾಕ್‌ಡೌನ್‌ ನಡುವೆಯೂ ಎಲ್ಲ ಅಡೆತಡೆಗಳನ್ನು ನಿವಾರಿಸಿ ಏರ್‌ ಆ್ಯಂಬುಲೆನ್ಸ್‌ ಎರಡು ದಿನಗಳ ಹಿಂದೆ ಜೊಹಾನ್ಸ್‌ಬರ್ಗ್‌ ತಲುಪಿದ್ದು, ವಿಜಯ್‌ ಅವರನ್ನು ಭಾರತಕ್ಕೆ ಕರೆತಂದಿದೆ.

ಈ ಕಾರ್ಯಾಚರಣೆಯಲ್ಲಿ ಒಬ್ಬ ವೈದ್ಯ, ಒರ್ವ ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಇಬ್ಬರು ಪೈಲಟ್‌ಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಮುನ್ನ 2004ರಲ್ಲಿ ಮಿರಾಜ್‌-2000 ವಿಮಾನದ ಮೂಲಕ ಇದೇ ರೀತಿಯ ವೈದ್ಯಕೀಯ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!
ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?