
ಗಾಜಾ/ಜೆರುಸಲೇಂ (ಏ.08): ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಭೀಕರ ಯುದ್ದಕ್ಕೆ ಭಾನುವಾರ 6 ತಿಂಗಳು ತುಂಬಿದೆ. ಇತ್ತೀಚಿನ ದಶಕಗಳ ಈ ಭೀಕರ ಯುದ್ಧದಲ್ಲಿ 10 ಸಾವಿರಕ್ಕೂ ಹೆಚ್ಚು ರಾಕೆಟ್ ಬಳಸಿ ಉಭಯ ಬಣಗಳು ದಾಳಿ ನಡೆಸಿದ್ದರೆ, ದಾಳಿ-ಪ್ರತಿದಾಳಿಯಲ್ಲಿ 35 ಸಾವಿರ ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ. ಯುದ್ಧದಲ್ಲಿನ ಸಾವು- ನೋವಿನ ಕುರಿತು ಉಭಯ ಬಣಗಳು ಅತ್ಯಂತ ನಿಖರ ಮಾಹಿತಿ ಬಹಿರಂಗಪಡಿಸಿಲ್ಲವಾದ ಕಾರಣ ಗಾಯಾಳುಗಳ ಸಂಖ್ಯೆ ಹಲವು ಸಾವಿರ ದಾಟಿರಬಹುದು, ಅದೇ ರೀತಿ ಸಾವಿನ ಸಂಖ್ಯೆ ಕೂಡಾ ಎಂದು ವಿವಿಧ ರಕ್ಷಣಾ ಸಂಸ್ಥೆಗಳು ಹೇಳಿವೆ.
ಏನಾಗಿತ್ತು?: ಕಳೆದ ವರ್ಷದ ಅ.7ರಂದು ಹಮಾಸ್ ಉಗ್ರರು ಏಕಾಏಕಿ ಇಸ್ರೇಲ್ನ ಗಡಿಭಾಗದ ನಗರದೊಳಗೆ ನುಗ್ಗಿ ಭೀಕರ ಹತ್ಯಾಕಾಂಡ ನಡೆಸಿದ್ದರು. ಈ ವೇಳೆ 1170 ಇಸ್ರೇಲಿಗಳು ಮತ್ತು ವಿದೇಶಿಯರು ಸಾವನ್ನಪ್ಪಿದ್ದರು. ಅದಾದ ಬಳಿಕ ಹಮಾಸ್ ಉಗ್ರರ ನೆಲೆಯಾದ ಗಾಜಾಪಟ್ಟಿ ಪ್ರದೇಶದ ಮೇಲೆ ಸತತ 6 ತಿಂಗಳಿನಿಂದ ದಾಳಿ ನಡೆಸುತ್ತಿ ರುವ ಇಸ್ರೇಲಿ ಸೇನೆ, ಆ ಪ್ರದೇಶವನ್ನು ಅಕ್ಷರಶಃ ನೆಲಸಮ ಮಾಡಿದೆ. ಗಾಜಾಪಟ್ಟಿಯ ಬಹುತೇಕ ಕಟ್ಟಡಗಳು ನೆಲಸಮವಾಗಿದ್ದು, ವಾಸಕ್ಕೆ ಅಯೋಗ್ಯ ಸ್ಥಿತಿ ತಲುಪಿವೆ. ಕಳೆದ 6 ತಿಂಗಳ ಅವಧಿಯಲ್ಲಿ ಎರಡೂ ಬಣಗಳು ಪರಸ್ಪರ 10 ಸಾವಿರಕ್ಕೂ ಹೆಚ್ಚು ರಾಕೆಟ್ಗಳನ್ನು ಬಳಸಿ ದಾಳಿ ನಡೆಸಿವೆ. ಮತ್ತೊಂದೆಡೆ ಇಸ್ರೇಲ್ ಕಡೆ 1200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ, ಗಾಜಾಪಟ್ಟಿ ಪ್ರದೇಶದಲ್ಲಿ 33,500ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ. ಇವರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳು ಎಂದು ರಕ್ಷಣಾ ಕಾರ್ಯಕರ್ತರು ಅಂದಾಜಿಸಿದ್ದಾರೆ.
370 ರದ್ದು: ಖರ್ಗೆ ಅವರದ್ದು ತುಕ್ಡೆ ತುಕ್ಡೆ ಗ್ಯಾಂಗ್ನ ಮನಸ್ಥಿತಿ: ಪ್ರಧಾನಿ ಮೋದಿ ವಾಗ್ದಾಳಿ
ಹಮಾಸ್ ಮೇಲಿನ ಯುದ್ಧದ ಗೆಲುವಿನಿಂದ ನಾವು ಕೇವಲ ಒಂದು ಮೆಟ್ಟಿಲು ದೂರದಲ್ಲಿದ್ದೇವೆ. ಆದರೆ ಇದಕ್ಕಾಗಿ ನಾವು ಸಾಕಷ್ಟು ತ್ಯಾಗ, ಬಲಿದಾನ ನೀಡಬೇಕಾಯ್ತು ಎಂಬುದು ನೋವಿನ ಸಂಗತಿ. ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಮಾಡುವವರೆಗೂ ಹಮಾಸ್ ಜೊತೆಗೆ ಯಾವುದೇ ಕದನ ವಿರಾಮದ ಮಾತುಕತೆಗೆ ನಾವು ಸಿದ್ಧರಿಲ್ಲ.
-ಬೆಂಜಮಿನ್ ನೆತನ್ಯಾಹು, ಇಸ್ರೇಲ್ ಪ್ರಧಾನಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ