
ಇಸ್ಲಾಮಾಬಾದ್ (ಮೇ 10, 2023): ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಎಂಟು ದಿನಗಳ ಕಾಲ ಅಲ್ಲಿನ ಉನ್ನತ ಭ್ರಷ್ಟಾಚಾರ ವಿರೋಧಿ ಸಂಸ್ಥೆ ವಶಕ್ಕೆ ಕಳುಹಿಸಲಾಗಿದೆ. ರಾಷ್ಟ್ರೀಯ ಹೊಣೆಗಾರಿಕೆ (NAB) ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಚಾರಣೆ ನಡೆಸಲು 10 ದಿನಗಳ ಕಾಲ ಅವರನ್ನು ಕಸ್ಟಡಿಗೆ ಕೊಡಬೇಕೆಂದು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ನ್ಯಾಯಾಲಯವನ್ನು ಕೇಳಿದೆ.
ಮಂಗಳವಾರ ಇಸ್ಲಾಮಾಬಾದ್ನಲ್ಲಿ ವಾಡಿಕೆಯ ವಿಚಾರಣೆಯ ಸಂದರ್ಭದಲ್ಲಿ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿತ್ತು. ಹಾಗೂ, ಪೊಲೀಸ್ ಪ್ರಧಾನ ಕಚೇರಿಯಲ್ಲಿ ವಿಶೇಷವಾಗಿ ಕರೆಯಲಾದ ನ್ಯಾಯಾಲಯದಲ್ಲಿ ಮುಚ್ಚಿದ ಬಾಗಿಲುಗಳ ಹಿಂದೆ ಹಾಜರುಪಡಿಸುವ ಮೊದಲು ಅವರನ್ನು ರಾತ್ರಿಯಿಡೀ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿತ್ತು.
ಇದನ್ನು ಓದಿ: ಪ್ರಧಾನಿ ಮೋದಿ ವಿರುದ್ಧ ದೂರು ನೀಡಬೇಕೆಂದ ಪಾಕ್ ನಟಿ: ದೆಹಲಿ ಪೊಲೀಸರ ಪ್ರತಿಕ್ರಿಯೆ ವೈರಲ್
ತನಗೆ ಚಿತ್ರಹಿಂಸೆ ನೀಡಲಾಗ್ತಿದೆ - ಇಮ್ರಾನ್ ಖಾನ್
ಇನ್ನು, ಕಸ್ಟಡಿಯಲ್ಲಿ ತನಗೆ ಚಿತ್ರಹಿಂಸೆ ನೀಡಲಾಯಿತು ಮತ್ತು ವಾಶ್ರೂಮ್ ಅನ್ನು ಬಳಸಲು ಸಹ ಅನುಮತಿಸಲಿಲ್ಲ ಎಂದು ಇಮ್ರಾನ್ ಖಾನ್ ನ್ಯಾಯಾಲಯದಲ್ಲಿ ಆರೋಪಿಸಿದ್ದಾರೆ. ಪಾಕಿಸ್ತಾನದಲ್ಲಿ ಜನಪ್ರಿಯವಾಗಿರುವ ಮಾಜಿ ಕ್ರಿಕೆಟ್ ಸೂಪರ್ಸ್ಟಾರ್, ನನಗೆ ನಿಧಾನ ಹೃದಯಾಘಾತ ಆಗಲೆಂದು ಇಂಜೆಕ್ಷನ್ ನೀಡಲಾಗಿದೆ ಎಂದೂ ಹೇಳಿಕೊಂಡಿದ್ದಾರೆ.
ಇಸ್ಲಾಮಾಬಾದ್ ನ್ಯಾಯಾಲಯವು ಮೇ 17 ರಂದು ಈ ಕುರಿತು ಮುಂದಿನ ವಿಚಾರಣೆ ನಡೆಸಲಿದೆ. ಈ ಮಧ್ಯೆ ಇಮ್ರಾನ್ ಖಾನ್ ಬೆಂಬಲಿಗರಿಂದ ಪಾಕಿಸ್ತಾನದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಪ್ರತಿಭಟನೆಗಳು ವ್ಯಾಪಕ ಆಸ್ತಿಪಾಸ್ತಿ ನಾಶಕ್ಕೆ ಕಾರಣವಾಗಿವೆ. ಅಸಂಖ್ಯಾತ ಕಾನೂನು ಪ್ರಕರಣಗಳು ತಾನು ಅಧಿಕಾರಕ್ಕೆ ಮರಳುವುದನ್ನು ತಡೆಯಲು ಹೆಣಗಾಡುತ್ತಿರುವ ಸರ್ಕಾರ ಮತ್ತು ಮಿಲಿಟರಿ ಸ್ಥಾಪನೆಯ ಪ್ರಯತ್ನದ ಭಾಗವಾಗಿದೆ ಎಂದು ಇಮ್ರಾನ್ ಖಾನ್ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: 6 ವರ್ಷದ ಬಾಲಕಿಗೆ ಶಾಲೆಯಲ್ಲೇ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯಿಸಿದ ವಿದ್ಯಾರ್ಥಿಗಳು: ಐ - ಪ್ಯಾಡ್ನಲ್ಲಿ ಸೆರೆ!
ಈ ನಾಟಕವು ತಿಂಗಳುಗಳ ರಾಜಕೀಯ ಬಿಕ್ಕಟ್ಟಿನ ನಂತರ ನಡೆದಿದ್ದು, ಕಳೆದ ವರ್ಷ ಏಪ್ರಿಲ್ನಲ್ಲಿ ಇಮ್ರಾನ್ ಖಾನ್ ಅವರನ್ನು ಉಚ್ಚಾಟಿಸಲಾಗಿದೆ. ಹಿರಿಯ ಅಧಿಕಾರಿಯೊಬ್ಬರು ಅವರನ್ನು ಕೊಲ್ಲುವ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಮಿಲಿಟರಿ ಅವರನ್ನು ಖಂಡಿಸಿದ ಕೆಲವೇ ಗಂಟೆಗಳ ನಂತರ ಇಮ್ರಾನ್ ಖಾನ್ ಅವರ ಬಂಧನವಾಗಿದೆ.
1947 ರಲ್ಲಿ ದೇಶ ಸ್ಥಾಪನೆಯಾದಾಗಿನಿಂದ ಪಾಕಿಸ್ತಾನದ ರಾಜಕಾರಣಿಗಳನ್ನು ಆಗಾಗ್ಗೆ ಬಂಧಿಸಲಾಗುತ್ತದೆ ಮತ್ತು ಜೈಲಿಗೆ ಹಾಕಲಾಗುತ್ತದೆ. ಆದರೆ ಕೆಲವರು ಕನಿಷ್ಠ ಮೂರು ದಂಗೆಗಳನ್ನು ನಡೆಸಿದ ಮತ್ತು ಮೂರು ದಶಕಗಳಿಗೂ ಹೆಚ್ಚು ಕಾಲ ಆಳಿದ ಮಿಲಿಟರಿಯ ವಿರುದ್ಧ ಕೆಲವರು ಮಾತ್ರ ನೇರವಾಗಿ ಸವಾಲು ಹಾಕಿದ್ದಾರೆ. ಪಾಕಿಸ್ತಾನದ ಆಂತರಿಕ ಸಚಿವಾಲಯವು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಿದೆ ಮತ್ತು ಟ್ವಿಟ್ಟರ್, ಫೇಸ್ಬುಕ್ ಮತ್ತು ಯೂಟ್ಯೂಬ್ನಂತಹ ಸಾಮಾಜಿಕ ಮಾಧ್ಯಮ ಸೈಟ್ಗಳಿಗೆ ಪ್ರವೇಶವನ್ನು ನಿರ್ಬಂಧಿಸಲು ಆದೇಶಿಸಿದೆ.
ಇದನ್ನೂ ಓದಿ: ಯುಕೆಯಲ್ಲಿ ಅಚ್ಚರಿ: ಇಬ್ಬರಲ್ಲ, ಮೂರು ಜನರ ಡಿಎನ್ಎ ಹೊಂದಿದ ಮಗು ಜನನ
ಅಲ್ಲದೆ, ದೇಶಾದ್ಯಂತ ಶಾಲೆಗಳನ್ನು ಮುಚ್ಚಲು ಅಧಿಕಾರಿಗಳು ಆದೇಶಿಸಿದ್ದು, ವಿದ್ಯಾರ್ಥಿಗಳಿಗೆ ವರ್ಷಾಂತ್ಯದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ದೇಶಾದ್ಯಂತ ನೂರಾರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಇನ್ನು, ಪಾಕಿಸ್ತಾನದ ಅತ್ಯಂತ ಜನಸಂಖ್ಯೆಯ ಪ್ರಾಂತ್ಯದ ಪಂಜಾಬ್ನಲ್ಲಿ ಸುಮಾರು 1,000 ಜನರನ್ನು ಬಂಧಿಸಲಾಗಿದೆ ಮತ್ತು ಶಾಂತಿಯನ್ನು ಕಾಪಾಡಲು ಸೈನ್ಯವನ್ನು ನಿಯೋಜಿಸಲು ಆದೇಶಿಸಲಾಗಿದೆ.
ಇದನ್ನೂ ಓದಿ: ಡ್ರಗ್ಸ್ ಸೇವಿಸಿ, ಅಶ್ಲೀಲ ಚಿತ್ರ ವೀಕ್ಷಿಸಿ 30 ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡಿದ ಕಾಮಪಿಶಾಚಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ